21-29ರವರೆಗೆ 9 ದಿನ ಬೇಬಿಬೆಟ್ಟದ ದನಗಳ ಜಾತ್ರೆ
Team Udayavani, Feb 15, 2020, 5:01 PM IST
ಸಾಂಧರ್ಬಿಕ ಚಿತ್ರ
ಪಾಂಡವಪುರ: ಪುರಾಣ ಪ್ರಸಿದ್ಧ ತಾಲೂಕಿನ ಬೇಬಿಬೆಟ್ಟದಲ್ಲಿ ಆರಂಭಗೊಳ್ಳುವ ಭಾರಿ ದನಗಳ ಜಾತ್ರಾ ಮಹೋತ್ಸವ ಅದ್ಧೂರಿ ಆಚರಣೆಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಶಾಸಕ ಪುಟ್ಟರಾಜು ಮನವಿ ಮಾಡಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಬೇಬಿಬೆಟ್ಟದ ಭಾರಿ ದನಗಳ ಜಾತ್ರಾ ಮಹೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಫೆ.21ರಿಂದ 29ರವರೆಗೆ 9 ದಿನ ಭಾರಿ ದನಗಳ ಜಾತ್ರಾ ಮಹೋತ್ಸವ ನಡೆಯಲಿದೆ. ಜಾತ್ರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ರಾಸುಗಳು ಆಗಮಿಸುವುದರಿಂದ ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಸುತ್ತಮುತ್ತಲಿನ ಗ್ರಾಪಂ ಅಧಿಕಾರಿಗಳು ಕೆಲಸ ಮಾಡಬೇಕು. ಜಾತ್ರೆಗೆ ನೀರು ಪೂರೈಕೆಯಾಗಿ 5 ಟ್ಯಾಂಕರ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.
ಕ್ರೀಡಾ ಸ್ಪರ್ಧೆಗಳು: ಜಾತ್ರೆಯಲ್ಲಿ ನಿತ್ಯ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಳೆದ ಬಾರಿಯಂತೆಯೇ ಈ ಬಾರಿಯೂ ಬೆಟ್ಟಕ್ಕೆ ಹಾಗೂ ಜಾತ್ರಾ ಮೈದಾನದಲ್ಲಿ ವಿಶೇಷವಾಗಿ ದೀಪಾಲಂಕಾರ ವ್ಯವಸ್ಥೆ ಮಾಡಲಾಗುವುದು. ವಾಲಿಬಾಲ್, ಕಬಡ್ಡಿ, ಕುಸ್ತಿ ಪಂದ್ಯಾವಳಿ ನಡೆಯಲಿವೆ. ವಿಶೇವಾಗಿ ಮಹಿಳಾ ಉತ್ಸವ ಹಾಗೂ ಮಹಿಳಾ ಗ್ರಾಮೀಣ ಕ್ರೀಡೆ ಆಯೋಜಿಸಲಾಗುತ್ತಿದೆ. ವಿಜೇತರಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ವಸ್ತು ಪ್ರದರ್ಶನ: ಕೃಷಿ, ತೋಟಗಾರಿಗೆ, ರೇಷ್ಮೆ, ಮೀನುಗಾರಿಕೆ, ಪಶುಸಂಗೋಪನೆ, ಆರೋಗ್ಯ, ಶಿಕ್ಷಣ, ಅರಣ್ಯ ಇಲಾಖೆಗಳ ವಸ್ತು ಪ್ರದರ್ಶನದ ಮಳಿಗೆ ತೆರೆಯಬೇಕು. ಆರೋಗ್ಯ ಶಿಬಿರ, ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆಯಬೇಕು ಎಂದರು.
ತಾತ್ಕಾಲಿಕ ಪಶು ಆಸ್ಪತ್ರೆ: ಜಾತ್ರೆ ಮುಗಿಯುವವರೆಗೂ ಪಶು ಇಲಾಖೆ ಅಧಿಕಾರಿಗಳು ಸ್ಥಳದಲ್ಲಿದ್ದು ಯಾವುದೇ ಸಮಸ್ಯೆಗಳು ಎದುರಾಗದಂತೆ ಎಚ್ಚರ ವಹಿಸಬೇಕು. ತಾತ್ಕಾಲಿಕ ಪಶು ಆಸ್ಪತ್ರೆ ಕೇಂದ್ರ ತೆರೆಯಬೇಕು. ಇನ್ನೂ ಜಾತ್ರೆಯಲ್ಲಿ ವಿಜೇತರಾಗುವ ರಾಸುಗಳಿಗೆ ಬಹುಮಾನ ನೀಡಲು ಅನುದಾನಕ್ಕಾಗಿ ಪಶು ಇಲಾಖೆಗೆ ಪತ್ರ ಬರೆಯುವಂತೆ ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ನಟರಾಜು ಅವರಿಗೆ ಸೂಚಿಸಿದರು.
ಸಾಮೂಹಿಕ ವಿವಾಹ: ಜಾತ್ರಾ ಮಹೋತ್ಸವದಲ್ಲಿ ಫೆ.26ರಂದು ಉಚಿತ ಸಾಮೂಹಿಕ ವಿವಾಹ ನಡೆ ಯಲಿದೆ. ಆಸಕ್ತರು ವಧು-ವರರು ತಾಪಂ ಕಚೇರಿ ಹಾಗೂ ಸುತ್ತಮುತ್ತಲಿನ ಗ್ರಾಪಂಗಳನ್ನು ಸಂಪರ್ಕಿಸಿ ಹೆಸರು ನೊಂದಾಯಿಸಿಕೊಳ್ಳಬೇಕೆಂದು ತಿಳಿಸಿದರು.
ಬಹುಮಾನ ವಿತರಣೆ: ಕಳೆದ ವರ್ಷ ನಡೆದ ದನಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಬಹುಮಾನ ಪಡೆದ ರಾಸುಗಳಿಗೆ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಬಹುಮಾನ ವಿತರಿಸಿರಲಿಲ್ಲ. ಆ ಬಹುಮಾನ ಜಾತ್ರೆ ಆರಂಭದ ಮೊದಲ ದಿನ ರಾಸುಗಳ ಮಾಲೀಕರನ್ನು ಆಹ್ವಾನಿಸಿ ವಿತರಿಸಲಾಗುವುದು ಎಂದು ಹೇಳಿದರು.
ಜಿಪಂ ಸದಸ್ಯರಾದ ಅಶೋಕ್, ತಿಮ್ಮೇಗೌಡ, ತಾಪಂ ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷೆ ಲಕ್ಷ್ಮಮ್ಮ, ತಹಶೀಲ್ದಾರ್ ಪ್ರಮೋದ್ ಎಲ್.ಪಾಟೀಲ್, ತಾಪಂ ಇಒ ಆರ್.ಪಿ.ಮಹೇಶ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ
Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು
Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ