ಸಸಿ ನೆಟ್ಟು ಹುಟ್ಟು ಹಬ್ಬ ಆಚರಿಸಿಕೊಳ್ಳಿ
ಪರಿಸರ ಸಮತೋಲನ ಕಾಯ್ದುಕೊಂಡು ಭೂಮಿ ಆರೋಗ್ಯ ಕಾಪಾಡಿ
Team Udayavani, May 4, 2019, 12:16 PM IST
ಕೆ.ಆರ್.ಪೇಟೆ ಕಾಲೇಜು ಆವರಣದಲ್ಲಿ ಜಯ ಕರ್ನಾಟಕ ಸಂಘಟನೆ ಮುತ್ತಪ್ಪ ರೈ ಹುಟ್ಟು ಹಬ್ಬ ಸಸಿ ನೆಟ್ಟು ಆಚರಿಸಿದರು. ಸಂಘದ ಅಧ್ಯಕ್ಷ ಕುಮಾರ್, ಕಾರ್ಯಾಧ್ಯಕ್ಷ ಮಹೇಶ್, ಉಪಾಧ್ಯಕ್ಷ ಅಜಯ್, ಕಾರ್ಯದರ್ಶಿ ಸೋಮು ಇತರರಿದ್ದರು.
ಕೆ.ಆರ್.ಪೇಟೆ: ನಾಡು, ನುಡಿ, ನೆಲ, ಜಲ ಉಳಿವಿಗೆ ಜಯ ಕರ್ನಾಟಕ ಸಂಘಟನೆ ನಾಡಿನಾದ್ಯಂತ ಹೋರಾಡುತ್ತಿದೆ ಎಂದು ಸಂಘದ ಅಧ್ಯಕ್ಷ ಕೆ.ಎಸ್.ಕುಮಾರ್ ಹೇಳಿದರು.
ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಹುಟ್ಟು ಹಬ್ಬದ ಪ್ರಯುಕ್ತ ತಾಲೂಕು ಸಂಘಟನೆ ಕಾರ್ಯಕರ್ತರು ಪಟ್ಟಣದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಸಸಿ ನೆಟ್ಟು ಆಚರಿಸಿ ಮಾತನಾಡಿದ ಅವರು, ಸಂಘಟನೆ ನಿರಂತರ ಸಮಾಜಮುಖೀ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ ಎಂದು ಹೇಳಿದರು.
ಕಾರ್ಯಾಧ್ಯಕ್ಷ ಮಹೇಶ್ ಮಾತನಾಡಿ, ಪರಿಸರ ಸಮತೋಲನ ಕಾಯ್ದುಕೊಂಡು ಭೂಮಿ ಆರೋಗ್ಯ ಕಾಪಾಡಬೇಕಿದೆ. ಪರಿಸರದ ಉಳಿವಿಗಾಗಿ ಅರಣ್ಯ ಸಂರಕ್ಷಣೆ ಮಾvಬೇಕು. ಪ್ಲಾಸ್ಟಿಕ್ ಬಳಕೆ ಕಡ್ಡಾಯವಾಗಿ ನಿಲ್ಲಿಸಬೇಕು. ಭೂಮಿಯ ಆರೋಗ್ಯ ಚನ್ನಾಗಿದ್ದರೆ ಕಾಲಕಾಲಕ್ಕೆ ಮಳೆಯಾಗುತ್ತದೆ. ಅರಣ್ಯ ಉಳಿಸದಿದ್ದರೆ ಭವಿಷ್ಯದ ದಿನಗಳಲ್ಲಿ ಮನುಷ್ಯ ಸೇರಿ ದಂತೆ ಸಕಲ ಜೀವರಾಶಿಗಳು ನೀರು ಮತ್ತು ಆಹಾರಕ್ಕೆ ಪರಿತಪಿಸಬೇಕಾದ ದುಸ್ಥಿತಿ ನಿರ್ಮಾಣವಾಗುತ್ತದೆ ಆದ್ದರಿಂದ ಪ್ರತಿಯೊಬ್ಬರು ಸಸಿ ನೆಟ್ಟು ಬೆಳೆಸಬೇಕು ಎಂದು ಮನವಿ ಮಾಡಿದರು. ಸಂಘ ಟ ನೆಯ ಉಪಾಧ್ಯಕ್ಷ ಅಜಯ್, ಸಂಘ ಟನಾ ಕಾರ್ಯದರ್ಶಿ ಸೋಮು, ಮಾಧ್ಯಮ ಕಾರ್ಯದರ್ಶಿ ಲೋಕೇಶ್, ಆಟೋ ಚಾಲಕರ ಘಟಕದ ಅಧ್ಯಕ್ಷ ಆಟೋ ಸೋಮು, ಮಹಿಳಾ ಘಟಕದ ಕಾರ್ಯಧ್ಯಕ್ಷೆ ಸರಸ್ವತಿ, ಗೌರವಾಧ್ಯಕ್ಷ ಜಯಲಕ್ಷ್ಮೀ, ಉಪಾಧ್ಯಕ್ಷ ಅರೆಬೊಪ್ಪನಹಳ್ಳಿ ಜಯ, ರಾಜಮ್ಮ, ಕಾರ್ ಚಂದ್ರಣ್ಣ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
MUST WATCH
ಹೊಸ ಸೇರ್ಪಡೆ
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ