ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಹಕಾರ


Team Udayavani, Jun 10, 2020, 5:23 AM IST

dr sidd

ಮಂಡ್ಯ: ಕೋವಿಡ್‌ 19 ಸೃಷ್ಟಿಸಿದ ತುರ್ತು ಪರಿಸ್ಥಿತಿ ವೇಳೆ ರಾಜ್ಯದ ಅಭಿವೃದ್ಧಿಗೆ ಪೂರಕವಾಗುವಂತೆ 27,328 ಕೋಟಿ ರೂ. ಅನು ದಾನ ಬಿಡುಗಡೆ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪರಿಷತ್‌ ಸದಸ್ಯ ಡಾ.ಸಿದ್ದರಾಮಯ್ಯ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ  ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕೋವಿಡ್‌ 19 ಸಂಕಷ್ಟದಲ್ಲಿ ರಾಜ್ಯಕ್ಕೆ ಉತ್ತಮ ಬೆಂಬಲ ನೀಡಿದೆ. ಕೇಂದ್ರ ಸರ್ಕಾರ ಹಲವುಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ  ಅಭಿವೃದ್ಧಿಗೆ ಸಹ ಕಾರ ನೀಡಿದೆ ಎಂದರು.

ಬಡಜನರಿಗೆ ನೆರವು: ಜನಧನ್‌ ಯೋಜನೆ, ಉಜ್ವಲ ಯೋಜನೆ, ಆಯುಷ್ಮಾನ್‌ ಭಾರತ್‌, ಜನರಿಕ್‌ ಔಷಧ, ಹೃದಯ ಚಿಕಿತ್ಸೆಗೆ ಸ್ಟಂಟ್‌ ಅಳವಡಿಕೆ, ಬೇವು ಮಿಶ್ರಿತ ರಸಗೊಬರ ಬಳಕೆ, ಮುದ್ರಾ ಯೋಜನೆ, ಸ್ಟಾರ್ಟ್‌ಅಫ್‌ ಸೇರಿದಂತೆ ಹಲವು ಯೋಜನೆಗಳ ಮೂಲಕ ರಾಜ್ಯದ ಜನತೆಗೆ ನೆರವನ್ನು  ಒದಗಿಸಿದೆ. ಬಲಿಷ್ಠ ಭಾರತ ನಿರ್ಮಾಣಕ್ಕೆ ಈ ಎಲ್ಲ ಯೋಜನೆ ಗಳು ಅಮೂಲ್ಯ ಕೊಡುಗೆಗಳನ್ನು ನೀಡಿದೆ. ಶ್ರೀಮಂತರು ಪಡೆಯುತ್ತಿದ್ದ ಗ್ಯಾಸ್‌ ಸಬ್ಸಿಡಿ ಬಿಡುವಂತೆ ಮಾಡಿರುವುದು ಲಕ್ಷಾಂತರ ಬಡಜನರಿಗೆ ನೆರವಾಗಿದೆ ಎಂದು ಹೇಳಿದರು.

ಪಾರದರ್ಶಕತೆಗೆ ಆದ್ಯತೆ: ಎನ್‌ಡಿಎ ನೇತೃತ್ವದ ಸರ್ಕಾರ ಸಬ್‌ ಕಾ ಸಾತ್‌, ಸಬ್‌ ಕಾ ವಿಕಾಸ್‌, ಸಬ್‌ ಕಾ ವಿಶ್ವಾಸ್‌ ಧ್ಯೇಯ ಮಂತ್ರದೊಂದಿಗೆ ಮೋದಿ ಅವರ 2ನೇ ಸರ್ಕಾರ ಕೇಂದ್ರದಲ್ಲಿ ಸ್ಥಾಪಿತಗೊಂಡಿತು. ವ್ಯವಸ್ಥೆಗಳಿಲ್ಲಿ ಸುಧಾರಣೆ, ತಂತ್ರಜ್ಞಾನ ಅಳವಡಿಕೆ ಮೂಲಕ ಹಾದಿಯ ಹೆಜ್ಜೆ ಇಡುತ್ತಿದೆ. ವ್ಯವಸ್ಥೆಗೆ ಅನುಗುಣವಾಗಿ ಒನ್‌ ನೇಷನ್‌, ಒನ್‌ ಟ್ಯಾಕ್ಸ್‌- ಒನ್‌ ನೇಷನ್‌ ಒನ್‌ ರೇಷನ್‌ ಕಾರ್ಡ್‌ ಜಾರಿಗೆ ತಂದರು. ಇದು ದೇಶದ ಯಾವುದೇ ಪಡಿತರ ಅಂಗಡಿಗಳಲ್ಲಿ ಪಡಿತರ  ತೆಗೆದುಕೊಳ್ಳಬಹುದು. ಒನ್‌ ಕಂಟ್ರಿ ಫಾಸ್ಟೇಜ್‌ ಸರ್ಕಾರದ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಸಂದಾಯ ಮಾಡುವ ಯೋಜನೆ ಜಾರಿಗೊಳಿಸಿ ಪಾರದರ್ಶಕತೆ ವ್ಯವಸ್ಥೆಗೆ ಒತ್ತು ನೀಡಲಾಗಿದೆ ಎಂದರು.

ಬೇಡಿಕೆ ಈಡೇರಿಕೆ: ತ್ರಿವಳಿ ತಲಾಖ್‌ ರದ್ದುಗೊಳಿಸುವ ಮೂಲಕ ಕೆಟ್ಟ ಪದ್ಧತಿಯನ್ನು ನಿರ್ಮೂಲನೆಗೊಳಿಸಿ ತಲಾಕ್‌ ಭಯದ ನೆರಳಲ್ಲಿ ಜೀವಿಸುತ್ತಿದ್ದ ಮುಸ್ಲಿಂ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿದ್ದ ದೌರ್ಜನ್ಯ ತಪ್ಪಿಸಲಾಗಿದೆ.  ಸಂವಿಧಾನ 2370ನೇ ವಿಧಿ ರದ್ದುಗೊಳಿಸಿ ಜಮ್ಮು-ಕಾಶ್ಮೀರ ರಾಜ್ಯಕ್ಕೆ ಇದ್ದ ವಿಶೇಷಾಧಿಕಾರ ರದ್ದು ಮಾಡಿ ಲಡಾಖ್‌ ಮತ್ತು ಜಮ್ಮು ಕಾಶ್ಮೀರ ಎಂಬ ಎರಡು ಕೇಂದ್ರಾಳಿತ ಪ್ರದೇಶಗಳ ರಚನೆ ಮಾಡಲಾಗಿದೆ.

ಬಹಳಷ್ಟು ಟೀಕೆಗಳು  ಬಂದರೂ ಅದನ್ನು ಸಮರ್ಥ ವಾಗಿ ನಿಭಾಯಿಸಲಾಗಿದೆ ಎಂದು ವಿವರಿಸಿದರು. ಕಾರ್ಪೋ ರೇಟ್‌ ತೆರಿಗೆ ಯಲ್ಲಿ ಭಾರೀ ಕಡಿತ, ರೈತರಿಗೆ ಮೂರು ಕಂತುಗಳಲ್ಲಿ 6 ಸಾವಿರ ಸಹಾಯಧನ ಸೇರಿದಂತೆ ವಿವಿಧ ಯೋಜನೆಗಳ  ನ್ನು  ರೂಪಿಸಲಾಗಿದೆ ಎಂದು ಹೇಳಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಜೆ. ವಿಜಯಕುಮಾರ್‌, ಪ್ರಧಾನ ಕಾರ್ಯದರ್ಶಿಗಳಾದ ಶಿವಲಿಂಗೇ ಗೌಡ, ಪ.ನಾ. ಸುರೇಶ್‌, ಕೆ. ಕಾಳೇಗೌಡ ಇದ್ದರು.

ಪ್ರಧಾನಿ ಮೋದಿಯವರು ಎಲ್ಲಕ್ಕಿಂತ ಹೆಚ್ಚು ಜನಪ್ರಿಯರಾಗಿರುವುದು ಜನತೆಯ ವಿಶ್ವಾಸ ಗಳಿಸಿರುವುದು ಪಾರದರ್ಶಕತೆ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತದ ಕಾರಣದಿಂದ. ಅವರ ಹೊಸ ನೀತಿ ಗಳು ಮತ್ತು ಶುದ್ಧ ಜನಪರ  ನಿರ್ಣಯಗಳು ಅವರ ಬಗೆಗಿನ ವಿಶ್ವಾಸವನ್ನು ಇನ್ನಷ್ಟು ಹೆಚ್ಚು ಮಾಡಿದೆ. 
-ಡಾ.ಸಿದ್ದರಾಮಯ್ಯ, ಬಿಜೆಪಿ ರಾಷ್ಟ್ರೀಯ ಪರಿಷತ್‌ ಸದಸ್ಯ

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.