ಚಲುವರಾಯಸ್ವಾಮಿ ಹೇಳಿಕೆ ತಪ್ಪು ಗ್ರಹಿಕೆ
Team Udayavani, Jun 3, 2020, 5:15 AM IST
ಮಂಡ್ಯ: ಮೈಷುಗರ್ ಮತ್ತು ಪಿಎಸ್ಎಸ್ಕೆ ಕಾರ್ಖಾನೆಗಳ ಕುರಿತು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಹೇಳಿದರು. ಚಲುವರಾಯಸ್ವಾಮಿಗೆ ರೈತ ಹೋರಾಟಗಾರರ ಬಗ್ಗೆ ಗೌರವವಿದೆ. ಜಿಲ್ಲೆಯ ಮಾಜಿ ಸಚಿವರಾಗಿ, ಸಂಸದರಾಗಿ ಜಿಲ್ಲೆಯ ಅಭಿವೃದಿಟಛಿಗೆ ಕೆಲಸ ಮಾಡಿದ್ದಾರೆ. ಅದೇ ರೀತಿ ಮೈಷುಗರ್ ಉಳಿವಿನ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿ: ಕೆಲವು ಖಾಸಗಿ ಸಕ್ಕರೆ ಕಾರ್ಖಾನೆಗಳ ಸಂಚಿಗೆ ಬಲಿಯಾಗಿ ಮೈಷುಗರ್ ಆರಂಭ ವಿಳಂಬವಾಗುತ್ತಿದೆ ಎನ್ನುವ ಭಾವನೆ ಅವರದ್ದಾಗಿದೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರನ್ನು ಭೇಟಿ ಮಾಡಿ ಸಂಘಟನೆ ಯವರೊಡಗೂಡಿ ಸರ್ಕಾರಿ ಸ್ವಾಮ್ಯದಲ್ಲೇ ಉಳಿಯ ಬೇಕೆಂ ದು ಒತ್ತಾಯಿಸಿದ್ದಾರೆ. ಮೇ 7ರಂದು ನಡೆದ ಸಕ್ಕರೆ ಸಚಿವರ ನೇತೃತ್ವದ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಕ್ಯಾಬಿನೆಟ್ನಲ್ಲಿ ಖಾಸಗೀ ಕರಣದ ಬಗ್ಗೆ ಚರ್ಚಿಸಲಾಗಿದೆ ಎಂದು ಸಚಿವರು ಹೇಳಿದಾಗ ಸಭೆಯು ಒಕ್ಕೊರಲಿನಿಂದ ಸರ್ಕಾರಿ ಸ್ವಾಮ್ಯದಲ್ಲೇ ಉಳಿಯ ಬೇಕೆಂದು ಒತ್ತಾಯಿಸಲಾಯಿತು ಎಂದು ತಿಳಿಸಿದರು.
ಶೀಘ್ರ ಆರಂಭಿಸಲು ಒತ್ತಾಯ: ಸಿಎಂ ಮೈಷುಗರ್ ಕಾರ್ಖಾನೆಯು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿ ಕೊಡುತ್ತೇವೆಂದು ದೃಢಪಡಿಸಿದ್ದು, ಮೇ 29ರಂದು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದು ಸಿಎಂ ಶೀಘ್ರ ಮಂತ್ರಿಗಳೊಡನೆ ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಮುಂದಿನ ಆಗಸ್ಟ್ ತಿಂಗಳೊಳಗೆ ಮೈಷುಗರ್ ಆರಂಭಿಸಬೇಕೆಂದು ಒತ್ತಾಯಿಸಿರುವು ದಾಗಿ ಹೇಳಿದರು.
ಮುಖಂಡರಾದ ಎಚ್.ಅಶೋಕ್, ಸಿದ್ದರಾಮೇಗೌಡ, ಸಿ.ಎಂ.ದ್ಯಾವಪ್ಪ, ಎಚ್.ಅಪ್ಪಾಜಿ, ಎಚ್. ಕೆ.ರುದ್ರೇಗೌಡ, ಅಂಜನಾ ಶ್ರೀಕಾಂತ್ ಇದ್ದರು. ತಿಂಗಳೊಳಗೆ ಮೈಷುಗರ್ ಆರಂಭಿಸಬೇಕೆಂದು ಒತ್ತಾಯಿಸಿರುವುದಾಗಿ ಹೇಳಿದರು. ಮುಖಂಡರಾದ ಎಚ್.ಅಶೋಕ್, ಸಿದ್ದರಾಮೇಗೌಡ, ಸಿ.ಎಂ.ದ್ಯಾವಪ್ಪ, ಎಚ್.ಅಪ್ಪಾಜಿ, ಎಚ್. ಕೆ.ರುದ್ರೇಗೌಡ, ಅಂಜನಾ ಶ್ರೀಕಾಂತ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ