ನಕಲಿ ದಾಖಲೆ ಸೃಷ್ಟಿಸಿ ದಂಪತಿಗೆ ವಂಚನೆ


Team Udayavani, Mar 3, 2019, 7:47 AM IST

nakali.jpg

ಮದ್ದೂರು: ಮುಖ್ಯಮಂತ್ರಿ ಅವರ ಉಪ ಕಾರ್ಯದರ್ಶಿಯ ಲೆಟರ್‌ಹೆಡ್‌ ಅನ್ನು ನಕಲಿಯಾಗಿ ಸೃಷ್ಟಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಮಂಜೂರು ಮಾಡಿಸುವುದಾಗಿ ಅಮಾಯಕ ದಂಪತಿಯಿಂದ 5ಲಕ್ಷ ರೂ. ಪಡೆದು ವ್ಯಕ್ತಿಯೊಬ್ಬ ವಂಚಿಸಿರುವ ಘಟನೆ ಕೆಸ್ತೂರು ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ತಾಲೂಕಿನ ಮಲ್ಲನಕುಪ್ಪೆ ಗ್ರಾಮದ ನಿವಾಸಿ ಹಾಗೂ ಕೆಸ್ತೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗುಮಾಸ್ತನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಟಿ.ಎಲ್‌. ನಂಜುಂಡಸ್ವಾಮಿ ಅವರ ಪತ್ನಿ ಟಿ.ಎಂ. ಗಿರಿಜಾ ವಂಚನೆಗೊಳಗಾದ ದಂಪತಿ.

ಬೆಂಗಳೂರಿನ ಮಂಜುನಾಥ ನಗರದಲ್ಲಿ ವಾಸವಾಗಿರುವ ಎಂ.ರಾಮಚಂದ್ರೇಗೌಡ ಎಂಬುವರು ನಿವೇಶನ ಕೊಡಿಸುವುದಾಗಿ ವಂಚಿಸಿದ್ದಾರೆ ಎಂದು ಈತ ನೀಡಿರುವ ನಕಲಿ ದಾಖಲಾತಿಗಳೊಂದಿಗೆ ಗಿರಿಜಾ ಅವರು ಕೆಸ್ತೂರು ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ. 

ಘಟನೆ ವಿವರ: ಮಲ್ಲನಕುಪ್ಪೆ ಮೂಲ ನಿವಾಸಿಯಾದ ರಾಮಚಂದ್ರೇಗೌಡ ಬೆಳೆಸಾಲ ಪಡೆಯಲು ಕೆಸ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಬಂದಾಗ ಗುಮಾಸ್ತ ನಂಜುಂಡಸ್ವಾಮಿ ಅವರನ್ನು ಪರಿಚಯಿಸಿಕೊಂಡಿದ್ದಾನೆ. ಪರಿಚಯ ಸ್ನೇಹವಾಗಿ ಬೆಳೆದ ಬಳಿಕ ತಾನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು ತಮಗೆ ಮುಖ್ಯಮಂತ್ರಿಗಳ ವಿವೇಚನಾ ಕೋಟಾದಡಿ ಕಡಿಮೆ ಹಣದಲ್ಲಿ ನಿವೇಶನ ಕೊಡಿಸುವುದಾಗಿ ನಂಜುಂಡಸ್ವಾಮಿ ಅವರನ್ನು ಪುಸಲಾಯಿಸಿದ್ದಾನೆ. 

ಬಳಿಕ ತನಗೆ ವಿವಿಧ ಇಲಾಖಾ ಸಚಿವರಗಳ ಸಂಪರ್ಕವಿದ್ದು, ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಗಳ ಪರಿಚಯವಿದ್ದು, ನಿಮ್ಮ ಕೆಲಸ ಸುಲಭವಾಗಲಿದೆ ಎಂದು ಹೇಳಿದ್ದು ಇದನ್ನು ನಂಬಿದ ನಂಜುಂಡಸ್ವಾಮಿ ಅವರು ತಮಗೆ ನಿವೇಶನ ಕೊಡಿಸುವಂತೆ ಆತನಲ್ಲಿ ವಿನಂತಿಸಿದ್ದಾರೆ. 

ನಂಜುಂಡಸ್ವಾಮಿ ಅವರ ಅಮಾಯಕತೆ ಬಳಸಿಕೊಂಡ ರಾಮಚಂದ್ರೇಗೌಡ ಆಲಿಯಾಸ್‌ ಶ್ರೀರಾಮಚಂದ್ರ, ಜ.8ರಂದು ನಂಜುಂಡಸ್ವಾಮಿ ಅವರನ್ನು ಮತ್ತೇ ಭೇಟಿ ಮಾಡಿ ಅವರ ಪತ್ನಿ ಟಿ.ಎಂ.ಗಿರಿಜಾ ಅವರ ಹೆಸರಿನಲ್ಲಿ ನಿವೇಶನ ಕೋರಿ ಅರ್ಜಿಯನ್ನು ಬರೆಸಿಕೊಂಡಿದ್ದಾನೆ. 

ಬಳಿಕ ಜ.13ರಂದು ನಂಜುಂಡಸ್ವಾಮಿ ಅವರಿಗೆ ಪೋನಾಯಿಸಿ ಮುಖ್ಯಮಂತ್ರಿಗಳ ವಿವೇಚನಾ ಕೋಟಾದಡಿಯಲ್ಲಿ 26*40 ಅಡಿ ಅಳತೆಯ ನಿವೇಶನ ಮಂಜೂರಾಗಿದೆ ಕೂಡಲೇ ಗಿರಿಜಾ ಅವರ ಆಧಾರ್‌ ಚೀಟಿ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಸೇರಿದಂತೆ ಇನ್ನಿತರ ದಾಖಲಾತಿಗಳೊಂದಿಗೆ ಬೆಂಗಳೂರಿಗೆ ಬರಲು ತಿಳಿಸಿದ್ದಾನೆ.

ಈತನ ಮಾತು ನಂಬಿದ ನಂಜುಂಡಸ್ವಾಮಿ ದಂಪತಿ ಬೆಂಗಳೂರಿಗೆ ಹೋಗಿ ಆತನನ್ನು ಭೇಟಿಯಾಗಿ ಆಗ ಆತನು ಅಲ್ಲಿಂದ ಇವರನ್ನು ಉಲ್ಲಾಳ ಉಪನಗರದ ವಿಶ್ವೇಶ್ವರಯ್ಯ ಬಡಾವಣೆಗೆ ಕರೆದೊಯ್ದಿದ್ದಾನೆ. ಅಲ್ಲಿ ಬಿಡಿಎ ನಿವೇಶನ ಸಂಖ್ಯೆ 140/1 ತೋರಿಸಿ ಇದೇ ನಿಮ್ಮ ನಿವೇಶನ ಎಂದು ತಿಳಿಸಿದ್ದಾನೆ. ಬಳಿಕ ತಮ್ಮ ಮನೆಗೆ ಗಿರಿಜಾ ಹಾಗೂ ನಂಜುಂಡಸ್ವಾಮಿ ಅವರನ್ನು ಕರೆದೊಯ್ದ ಈತ, ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿ ಅವರ ಶಿಫಾರಸಿನ ನಕಲಿ ಪತ್ರವನ್ನು ತೋರಿಸಿ ನಂಬಿಕೆ ಹುಟ್ಟಿಸಿದ್ದಾನೆ. 

ಜ.16ರಂದು ಕೆಸ್ತೂರಿಗೆ ಬಂದ ರಾಮಚಂದ್ರೇಗೌಡ, ನಾನು ಈಗಾಗಲೇ ನನ್ನ ಖಾತೆಯಿಂದ 4,22,830 ರೂ. ಹಣವನ್ನು ಬಿಡಿಎಗೆ ಪಾವತಿ ಮಾಡಿದ್ದೇನೆ ಎಂದು ತಿಳಿಸಿ ಬಿಡಿಎಗೆ ಪಾವತಿ ಮಾಡಿರುವ ಹಣದ ಚಲನ್‌ ಹಾಗೂ ಅವರು ನೀಡಿರುವ ಹಣದ ರಶೀದಿಯನ್ನು ತೋರಿಸಿ ಹಣ ನೀಡುವಂತೆ ಒತ್ತಾಯಿಸಿದ್ದಾನೆ.

ಇದನ್ನು ನಂಬಿದ ನಂಜುಂಡಸ್ವಾಮಿ ಅವರು ತಮ್ಮ ಖಾತೆಯಿಂದ 2ಲಕ್ಷ ರೂ. ಗಳ ಚೆಕ್‌ ಅನ್ನು ಅಂದೇ ನೀಡಿದ್ದಾರೆ. ಬಳಿಕ ಜ.21ರಲ್ಲಿ 3ಲಕ್ಷ ರೂ. ಹಣವನ್ನು ನಗದಾಗಿ ನಂಜುಂಡಸ್ವಾಮಿ ರಾಮಚಂದ್ರೇಗೌಡನಿಗೆ ನೀಡಿದ್ದಾರೆ. ಇದಾದ ಬಳಿಕ ಫೆ.14ರಂದು ನಿಮ್ಮ ನಿವೇಶನದ ನೋಂದಣಿ ಪ್ರಕ್ರಿಯೆ ಮಾಡಬೇಕಾಗಿದ್ದು, ಇದಕ್ಕೆ ನೋಂದಣಿ ಶುಲ್ಕವಾಗಿ 84,811 ರೂ. ಪಾವತಿ ಮಾಡಬೇಕೆಂದು ಒತ್ತಾಯಿಸಿದ್ದಾನೆ.

ಬಳಿಕ ಈಗಾಗಲೇ ಆ ಹಣವನ್ನು ತಾನೇ ಪಾವತಿಸಿರುವುದಾಗಿ ತಿಳಿಸಿ ಅದರ ನಕಲಿ ಚಲನ್‌ ಅನ್ನು ನಂಜುಂಡಸ್ವಾಮಿ ಅವರ ವಾಟ್ಸ್‌ಪ್‌ ಮೂಲಕ ಕಳುಹಿಸಿದ್ದಾನೆ. ಕೂಡಲೇ ಬೆಂಗಳೂರಿಗೆ ಬಂದು ಹಣವನ್ನು ಕೊಡಲು ಒತ್ತಾಯಿಸಿದ್ದಾನೆ. ಇದರಿಂದ ಅನುಮಾನಗೊಂಡ ನಂಜುಂಡಸ್ವಾಮಿ ಕೂಡಲೇ ಬೆಂಗಳೂರಿನ ಬಿಡಿಎ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಅಲ್ಲದೇ ಆತ ನೀಡಿದ್ದ ಎಲ್ಲಾ ಚಲನ್‌ ಹಾಗೂ ರಶೀದಿಗಳನ್ನು ತೋರಿಸಿದಾಗ ಇವುಗಳೆಲ್ಲವೂ ನಕಲಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಳಿಕ ಈ ಕುರಿತು ರಾಮಚಂದ್ರೇಗೌಡನಿಗೆ ನಂಜುಂಡಸ್ವಾಮಿ ಅವರು ಪೋನಾಯಿಸಿದಾಗ, ಎಲ್ಲಾ ದಾಖಲಾತಿಗಳು ಅಸಲಿ ಎಂದು ಆತ ವಾದಿಸಿದ್ದಾನೆ. ಬಳಿಕ ಮೂರು ನಾಲ್ಕು ಬಾರಿ ಪೋನಾಯಿಸಿ, ಈ ಕುರಿತು ಪ್ರಶ್ನಿಸಲು ಆರಂಭಿಸಿದಾಗ ತನ್ನ ಪೋನನ್ನು ಸ್ವಿಚ್‌ ಆಫ್ ಮಾಡಿಕೊಂಡಿದ್ದಾನೆ. ಆಗ ತಾವು ಮೋಸ ಹೋಗಿರುವುದಾಗಿ ನಂಜುಂಡಸ್ವಾಮಿ ದಂಪತಿಗಳಿಗೆ ಗೊತ್ತಾಗಿದೆ.

ಬಳಿಕ ಗಿರಿಜಾ ಹಾಗೂ ನಂಜುಂಡಸ್ವಾಮಿ ಅವರು ರಾಮಚಂದ್ರೇಗೌಡನ ಮಂಜುನಾಥ ನಗರದ ನಿವಾಸಕ್ಕೆ ಹೋದಾಗ ಅಲ್ಲಿ ರಾಮಚಂದ್ರೇಗೌಡ ಸಿಗಲಿಲ್ಲ. ಈ ಬಗ್ಗೆ ಆತನ ಪತ್ನಿ ಮಂಜುಳಾ ಅವರನ್ನು ಪ್ರಶ್ನಿಸಿದಾಗ ಆಕೆಯು ಇವರೊಂದಿಗೆ ಜಗಳ ತೆಗೆದು ತನ್ನ ಮೇಲೆ ಹಲ್ಲೆ ಮಾಡಿದರು ಎಂದು ಸ್ಥಳೀಯ ಠಾಣೆಯಲ್ಲಿ ದೂರು ನೀಡಿದ್ದಾರೆ.

ಅಲ್ಲದೇ ರೌಡಿಗಳ ಮೂಲಕ ರಾಮಚಂದ್ರೇಗೌಡ ನಂಜುಂಡಸ್ವಾಮಿ ದಂಪತಿಗೆ ಧಮಕಿ ಹಾಕಿಸಿ ಕೊಲೆ ಬೆದರಿಕೆವೊಡ್ಡಿದ್ದಾನೆ ಎಂದು ಗಿರಿಜಾ ನಂಜುಂಡಸ್ವಾಮಿ ದಂಪತಿ ಕೆಸ್ತೂರು ಠಾಣೆಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಪಿಎಸ್‌ಐ ಸಂತೋಷ್‌ ಈ ಸಂಬಂಧ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. 

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.