ಚಿಕ್ಕರಸಿನಕೆರೆ ಗ್ರಾಪಂ ಕಚೇರಿ ಸುತ್ತ ಅಶುಚಿತ್ವ ತಾಂಡವ
Team Udayavani, May 31, 2018, 3:05 PM IST
ಭಾರತೀನಗರ: ಪಂಚಾಯ್ತಿ ಸುತ್ತ ಬೆಳೆದ ಗಿಡಗಂಟಿಗಳು, ಚರಂಡಿಯೊಳಗೆ ತುಂಬಿಕೊಂಡ ಹೂಳು, ದುರ್ವಾಸನೆ, ಅನೈರ್ಮಲ್ಯ. ಇದು ಇಲ್ಲಿಗೆ ಸಮೀಪದ ಚಿಕ್ಕರಸಿನ ಗ್ರಾಪಂ ಕಚೇರಿ ಸುತ್ತಲಿನ ಕೆಟ್ಟ ವಾತಾವರಣದ ಸ್ಥಿತಿ.
ಸ್ವತ್ಛತೆ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿರುವ ಗ್ರಾಪಂ ಆಡಳಿತಾಧಿಕಾರಿಗಳು ಸ್ವತಃ ತಮ್ಮ ಪಂಚಾಯ್ತಿ ಸುತ್ತ ಶುಚಿಯಾಗಿಟ್ಟುಕೊಳ್ಳುವಲ್ಲೂ ವಿಫಲರಾಗಿದ್ದಾರೆ. ಇಲ್ಲಿನ ಶ್ರೀ ಕಾಲಭೈರವೇಶ್ವರ ದೇವಾಲಯ ರಾಜ್ಯದಲ್ಲೇ ಪ್ರಸಿದ್ಧಿಗೊಂಡಿದೆ. ಆದರೆ, ಗ್ರಾಮ ಮಾತ್ರ ಗ್ರಾಪಂ ನಿರ್ಲಕ್ಷ್ಯದಿಂದಾಗಿ ರಸ್ತೆ, ಚರಂಡಿ, ಕುಡಿಯುವ ನೀರು, ಬೀದಿದೀಪ ಇತರೆ ಸೌಲಭ್ಯಗಳಿಂದ ವಂಚಿತವಾಗಿದೆ. ಗ್ರಾಮ ಪ್ರವೇಶಿಸುತ್ತಿದ್ದಂತೆ ರಸ್ತೆಯಲ್ಲಿ ನಿಂತ ಕಲುಷಿತ ನೀರು, ಕೆಲವು ಕಡೆ ಚರಂಡಿಯೇ ಇಲ್ಲ, ವಿದ್ಯುತ್ ಕಂಬಗಳಿದ್ದರೂ ಬಲ್ಬ್ಗಳೇ ಇಲ್ಲದಿರುವುದು ಗೋಚರಿಸುತ್ತದೆ.ಚಿಕ್ಕರಸಿನಕೆರೆ ಹೋಬಳಿ ಎಂದು ಘೋಷಣೆ ಯಾಗಿದ್ದರೂ ಮೂಲ ಸೌಲಭ್ಯ ಕಲ್ಪಿಸಲು ಗ್ರಾಪಂ ಮನಸ್ಸು ಮಾಡಿಲ್ಲ. ಚಿಕ್ಕರಸಿನಕೆರೆ, ಗುರುದೇವರಹಳ್ಳಿ, ಗುರು ದೇವರಹಳ್ಳಿ ಕಾಲೋನಿ, ಹುಣ್ಣನದೊಡ್ಡಿ, ಛತ್ರದ ಹೊಸಹಳ್ಳಿ ಗ್ರಾಮಗಳು ಈ ಗ್ರಾಪಂ ವ್ಯಾಪ್ತಿಗೆ ಸೇರಿಕೊಂಡಿವೆ. ಈ ಎಲ್ಲಾ ಗ್ರಾಮಗಳಲ್ಲೂ ಸೌಲಭ್ಯ ಒದಗಿ ಸಿಲ್ಲ. ಪಂಚಾಯ್ತಿ ಅಧಿಕಾರಿಗಳ ಗಮನ ಸೆಳೆದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇಲ್ಲಿನ ಸಾರ್ವಜನಿಕರ ಮಾತಿಗೆ ಅಧಿಕಾರಿಗಳು ಯಾವುದೇ ಗಮನ ನೀಡುತ್ತಿಲ್ಲ. ಸರಿಯಾದ ಸಮಯಕ್ಕೆ ಮಾತ್ರ ಕಂದಾಯ ವಸೂಲಿ ಮಾಡಲು ಬರುತ್ತಾರೆ. ಆದರೆ ಅಭಿವೃದ್ಧಿ ಬಗ್ಗೆ ಕೇಳಿದರೆ ತಮ್ಮ ಉದ್ದಟತನ ತೋರುತ್ತಾರೆ. ಕೇಂದ್ರ ಸರ್ಕಾರದ ಉದ್ಯೋಗ ಖಾತರಿ ಯೋಜನೆ ಸಂಬಂಧಿಸಿದಂತೆ ಇಲ್ಲಿಯ ಜನರಿಗೆ ಯಾವುದೇ ರೀತಿಯ ಮಾಹಿತಿ ನೀಡುತ್ತಿಲ್ಲ. ಇದರಿಂದ ಬಡ ಜನರಿಗೆ ಅನ್ಯಾಯವಾಗುತ್ತಿದೆ.
ಪಟೇಲ್ ಗಿರೀಶ್, ಸ್ಥಳೀಯ
ಅಣ್ಣೂರು ಸತೀಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ