ಇಂದಿನಿಂದಲೇ ಸಾಲಮನ್ನಾಗೆ ಚಾಲನೆ
Team Udayavani, Dec 8, 2018, 6:15 AM IST
ಮಂಡ್ಯ: ರೈತರ ಸಾಲಮನ್ನಾ ಪ್ರಕ್ರಿಯೆಗೆ ಶನಿವಾರದಿಂದಲೇ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸಿದ್ದಾರೆ.
ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದಲ್ಲಿ ಶುಕ್ರವಾರ ನಡೆದ ಭತ್ತ ಕೊಯ್ಲು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಭತ್ತ ರಾಶಿಗೆ ಪೂಜೆ ಸಲ್ಲಿಸಿ, ಅವರು ಮಾತನಾಡಿದರು. ಮೊದಲ ಹಂತದಲ್ಲಿ ಸಾಲ ಮನ್ನಾಗೆ ದೊಡ್ಡಬಳ್ಳಾಪುರ ಮತ್ತು ಸೇಡಂನಿಂದ ಚಾಲನೆ ನೀಡಲಾಗುವುದು.
ಸಾಲಮನ್ನಾ ಪ್ರಕ್ರಿಯೆ ಕೊನೆಯ ಹಂತದಲ್ಲಿದೆ. ಒಟ್ಟು 44 ಲಕ್ಷ ಕುಟುಂಬಗಳಿಗೆ ಋಣಮುಕ್ತ ಪ್ರಮಾಣ ಪತ್ರ ನೀಡಲು ನಿರ್ಧಾರ ಮಾಡಿದ್ದೇನೆ.ಅದನ್ನು ಸಹಿಸದೆ ಬಿಜೆಪಿ ನಾಯಕರು ರೈತರಲ್ಲಿ ಅಪನಂಬಿಕೆ ಮೂಡಿಸುತ್ತಿದ್ದಾರೆ. ಒಂದು ವೇಳೆ ನನಗೆ ಸಾಲ ಮನ್ನಾ ಮಾಡಲಾಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು.
ಸರ್ಕಾರದಿಂದಲೇ ಸಾಲ: ಇಸ್ರೇಲ್ನಲ್ಲಿ ರೈತರು ಒಟ್ಟಾಗಿ ವ್ಯವಸಾಯ ಮಾಡುತ್ತಾರೆ. ಅದೇ ರೀತಿ ಇಲ್ಲಿಯೂ ರೈತರು ಒಗ್ಗೂಡಿ ಕೃಷಿ ಮಾಡಲು ತೀರ್ಮಾನ ಮಾಡಿದರೆ ಹೊರಗಿನಿಂದ ಸಾಲ ಪಡೆಯುವ ಅವಶ್ಯಕತೆ ಇಲ್ಲ. ಸರ್ಕಾರವೇ ಆರ್ಥಿಕ ನೆರವು ನೀಡಲಿದೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಗೋದಾಮು, ಮಾರುಕಟ್ಟೆ, ಬೆಳೆಗಳ ಸಂರಕ್ಷಣೆಗೆ ಶೀತಲೀಕರಣ ಘಟಕ ಸ್ಥಾಪನೆ ಮಾಡುವುದು ನನ್ನ ಕನಸಾಗಿದೆ. ಇದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ರೈತರಲ್ಲಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು