ನಿಸರ್ಗದ ಆಟಗಳಿಂದ ವಂಚಿತರಾದ ಮಕ್ಕಳು

ಜನರನ್ನು ಆಕರ್ಷಿಸಿದ ವೈವಿಧ್ಯಮಯ ಗಾಳಿಪಟಗಳು • ಜಿಲ್ಲಾಮಟ್ಟದ ಗಾಳಿಪಟ ಹಾರಾಟ ಸ್ಪರ್ಧೆಗೆ ಚಾಲನೆ

Team Udayavani, Jul 28, 2019, 2:23 PM IST

mandya-tdy-2

ಮಂಡ್ಯದ ಸರ್‌ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಗಾಳಿಪಟ ಹಾರಾಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವೈವಿಧ್ಯಮಯ ಗಾಳಿಪಟಗಳು.

ಮಂಡ್ಯ: ಆಧುನೀಕತೆಯ ಇಂದಿನ ದಿನಗಳಲ್ಲಿ ಪ್ರಕೃತಿ ದತ್ತವಾದ ಮಣ್ಣು, ನೀರು, ಗಿಡ-ಮರಗಳ ಜೊತೆ ಮಕ್ಕಳನ್ನು ಆಟವಾಡಲು ಬಿಡದೆ ದೈಹಿಕ ಸದೃಢತೆ ಯಿಂದ ವಂಚಿತರನ್ನಾಗಿ ಮಾಡುತ್ತಿದ್ದೇವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್‌ ಹೇಳಿದರು.

ಭಾರತ ಸೇವಾದಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ ಹಾಗೂ ಸೇಂಟ್ ಜಾನ್‌ ಆ್ಯಂಬುಲೆನ್ಸ್‌ ವತಿಯಿಂದ ನಗದರ ಸರ್‌ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಗಾಳಿಪಟ ಹಾರಾಟ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಬಾಲ್ಯದ ಸಮಯವನ್ನು ನಾವು ಮಣ್ಣಿನೊಂದಿಗೆ ಆಟವಾಡುತ್ತಾ ಕಳೆದಿದ್ದೇವೆ. ನೀರಿನಲ್ಲಿ ಈಜುವುದು, ಮರಗಳನ್ನು ಹತ್ತಿ ಹತ್ತಿ ಹಣ್ಣು, ಕಾಯಿಗಳನ್ನು ಕಿತ್ತು ತಿನ್ನುವುದು, ಕಣ್ಣಾಮುಚ್ಚಾಲೆಯಾಟ ಸೇರಿದಂತೆ ನಿಸರ್ಗದೊಂದಿಗೆ ಬೆರೆತು ಆಟವಾಡುವ ಮೂಲಕ ಬಾಲ್ಯವನ್ನು ಆನಂದದಿಂದ ಕಳೆದಿದ್ದೇವೆ. ಆದರೆ, ಈಗಿನ ಮಕ್ಕಳನ್ನು ಅತ್ಯಂತ ನಿಸರ್ಗದಿಂದ ಸಂಪೂರ್ಣ ದೂರ ಉಳಿಸಿ ಸೂಕ್ಷ್ಮವಾಗಿ ಬೆಳೆಸುತ್ತಿದ್ದೇವೆ. ಇದರಿಂದ ಅವರ ದೈಹಿಕ ಶಕ್ತಿಯ ಮಟ್ಟವನ್ನು ಕುಂದಿಸಿದ್ದೇವೆ ಎಂದು ಬೇಸರಗೊಂಡರು.

ವೈವಿಧ್ಯಮಯ ಗಾಳಿಪಟಗಳು: ಸ್ಪರ್ಧೆಯಲ್ಲಿ 1ರಿಂದ 7ನೇ ತರಗತಿ ಮಕ್ಕಳಿಗೆ ಕಿರಿಯ ವಿಭಾಗ, 8ರಿಂದ ಪಿಯು ಹಂತದ ವಿದ್ಯಾರ್ಥಿಗಳು ಹಿರಿಯ ವಿಭಾಗ ಹಾಗೂ ಮುಕ್ತವಿಭಾಗದಲ್ಲಿ ಎಲ್ಲಾ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶ ನೀಡಲಾಗಿತ್ತು. ಸಾಮಾಜಿಕ ಕಾಳಜಿ ಹೊಂದಿರುವ ಹೆಣ್ಣು ಭ್ರೂಣ ಹತ್ಯೆ ತಡೆಯುವುದು, ನೀರಿನ ಸಂರಕ್ಷಣೆ, ಕನ್ನಡ ನಾಡಿನ ಧ್ವಜದ ಬಣ್ಣದ ಪಟಗಳು, ದೇವರ ಭಾವಚಿತ್ರಗಳಾದ ಶಿವಲಿಂಗ, ನಾಗಲಿಂಗ, ಗಣೇಶ, ಚಲನಚಿತ್ರದ ಹೆಸರನ್ನು ಸೂಚಿಸುವ ಕದಂಬ, ಕುರುಕ್ಷೇತ್ರ, ರಿಯಲ್ ಆರ್ಟ್‌ ಹಾಗೂ ಮಕ್ಕಳು ಗೊಂಬೆಗಳ ಚಿತ್ರ ಸೂಚಿಸುವ ಪಟಗಳನ್ನು ಹಾರಿಸಿ ಖುಷಿಯಿಂದ ಸ್ಪರ್ಧಿಸಿದರು.

ಬಹುಮಾನ ವಿಜೇತರು: ಮುಕ್ತ ವಿಭಾಗದಲ್ಲಿ ಹೆಣ್ಣು ಭ್ರೂಣ ಹತ್ಯೆ ಜಾಗೃತಿ ಮೂಡಿಸುವ ಪಟ ಮೊದಲ ಬಹುಮಾನ ಗಳಿಸಿದ್ದು, ಎಸ್‌.ಡಿ.ಜಯರಾಂ ಪ್ರಶಸ್ತಿ ಮತ್ತು ಪಾರಿತೋಷಕ ನೀಡಲಾಯಿತು. ಎರಡನೇ ಸ್ಥಾನ ಪಡೆದ ತಟ್ಟೆ ಪಟಕ್ಕೆ ಡಾ.ಕೆ.ಎಸ್‌. ನಾರಾಯಣ ಸ್ವಾಮಿ ಹಾಗೂ ಸಿಂಹ ಲಾಂಛನದ ಮೂರನೇ ಸ್ಥಾನ ಪಡೆದ ಪಟಕ್ಕೆ ಡಾ.ವೈ.ಎಸ್‌.ರಾಮರಾವ್‌ ಪ್ರಶಸ್ತಿ ಮತ್ತು ಪಾರಿತೋಷಕ ನೀಡಲಾಯಿತು.

ಕಿರಿಯ ವಿಭಾಗದಲ್ಲಿ ಯೋಗೇಶ್‌, ಜೋಸೆಫ್, ಕಾತ್ಯಾಯಿನಿ, ಮಹೇಶ್‌, ದೇವರಾಜು ಹಾಗೂ ಹಿರಿಯ ವಿಭಾಗದಲ್ಲಿ ಯಶವಂತ್‌, ಸಿದ್ದರಾಜು ನಾಯಕ, ಕಿರಣ್ತೇಜ್‌, ಆತ್ಮಾನಂದ ಮತ್ತು ಗುರುಪ್ರಸಾದ್‌ ಕ್ರಮವಾಗಿ ಒಂದರಿಂದ ಐದನೇ ಸ್ಥಾನ ಪಡೆದುಕೊಂಡರು. ವಿಜೇತರಿಗೆ ಪಾರಿತೋಷಕ ನೀಡಿದರೆ, ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರ ನೀಡಲಾಯಿತು.

ಭಾರತ ಸೇವಾದಳ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಸಿ.ಶಿವಾನಂದ, ಸದಸ್ಯ ಟಿ.ಕೆ.ಸಿದ್ದಲಿಂಗು, ನಾಗ ರಾಜ್‌, ನೀನಾ ಪಟೇಲ್, ಉಷಾರಾಣಿ ಇದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.