ಮಕ್ಕಳಿಗೆ ಸ್ವಚ್ಛತೆಯ ಪಾಠ ಅಗತ್ಯ


Team Udayavani, Jun 2, 2019, 12:00 PM IST

mandya-tdy-2..

ಮಳವಳ್ಳಿ ತಾಲೂಕಿನ ಬಂಡೂರು ಸಾರ್ವಜನಿಕ ಪ್ರೌಢಶಾಲೆ ಮಕ್ಕಳಿಗೆ ಡಾ.ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಡಾ.ಬಿ.ಎಸ್‌.ಶಿವಣ್ಣ ಸ್ವಚ್ಛತಾ ಸಾಮಗ್ರಿಗಳನ್ನು ವಿತರಣೆ ಮಾಡಿದರು.

ಮಳವಳ್ಳಿ: ಸ್ವಚ್ಛತೆಯ ಪಾಠ ಗ್ರಾಮೀಣ ಮಕ್ಕಳಿಗೆ ತುಂಬಾ ಅಗತ್ಯವಿದ್ದು, ಇಂದಿಗೂ ಎಷ್ಟೋ ಮಕ್ಕಳು ಸ್ವಚ್ಛತೆಯಿಂದ ವಂಚಿತರಾಗಿದ್ದಾರೆ. ಅಂತಹ ಮಕ್ಕಳಿಗೆ ಶುಚಿತ್ವದ ಬಗ್ಗೆ ತಿಳಿವಳಿಕೆ ಮೂಡಿಸುವ ಅಗತ್ಯವಿದೆ ಎಂದು ಡಾ.ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಡಾ.ಬಿ.ಎಸ್‌.ಶಿವಣ್ಣ ಹೇಳಿದರು.

ತಾಲೂಕಿನ ಬಂಡೂರು ಗ್ರಾಪಂ ವ್ಯಾಪ್ತಿಯ ದಡದಪುರ, ಬಂಡೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿರುವ ಸರ್ಕಾರಿ ಶಾಲೆಯ ಮಕ್ಕಳಿಗೆ ಸ್ವಚ್ಛತಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿ, ಗಾಮೀಣ ಮಕ್ಕಳು ತಮ್ಮ ಆರೋಗ್ಯ ಹಾಗೂ ಕೈ-ಕಾಲುಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವಲ್ಲೂ ಹಿಂದೆ ಬಿದ್ದಿದ್ದಾರೆ. ಶಾಲಾ ಹಂತದಲ್ಲೇ ಮಕ್ಕಳಲ್ಲಿ ಸ್ವಚ್ಛತೆಯ ಅರಿವು ಮೂಡಿದಾಗ ಭವಿಷ್ಯದಲ್ಲಿ ಶುಚಿತ್ವದ ಜಾಗೃತಿ ಮೂಡಿ ಸಮಾಜ ಹಾಗೂ ಪರಿಸರವೂ ಸ್ವಚ್ಛತೆಯಿಂದ ಕೂಡಿರಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸ್ವಚ್ಛತೆಯ ಅರಿವು: ಮಕ್ಕಳು ಪ್ರತಿನಿತ್ಯ ಸ್ನಾನ ಮಾಡುವುದು, ತಮ್ಮ ಕೈ ಬೆರಳುಗಳ ಉಗುರಗಳನ್ನು ಸಮರ್ಪಕವಾಗಿ ಕಟ್ ಮಾಡಿಕೊಳ್ಳುವುದು, ಸೂಕ್ಷ್ಮ ಅಂಗವಾಗಿರುವ ಕಿವಿಗೆ ಬಡ್ಸ್‌ಗಳನ್ನು ಬಳಸುವುದು, ಹಲ್ಲುಗಳನ್ನು ಪೇಸ್ಟ್‌-ಬ್ರಷ್‌ ಬಳಸಿ ಶುಚಿಗೊಳಿಸಿಕೊಳ್ಳುವುದು. ಕೂದಲಿಗೆ ಕೊಬ್ಬರಿ ಎಣ್ಣೆ ಬಳಸುವುದರೊಂದಿಗೆ ಸಾಮಾನ್ಯ ಸ್ವಚ್ಛತೆಯ ಅರಿವು ಮೂಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಪರಿಸರ ಕಾಳಜಿ: ಚಿಕ್ಕ ವಯಸ್ಸಿನಲ್ಲಿಯೇ ಶುಚಿತ್ವದ ಅರಿವು ಮೂಡಿಸಿಕೊಳ್ಳುವ ಜೊತೆಗೆ ತಮ್ಮ ಕುಟುಂಬದ ಸದಸ್ಯರಿಗೂ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಬೇಕು. ಮನೆ ಹಾಗೂ ಹಳ್ಳಿಗಳ ಒಳಭಾಗದಲ್ಲಿ ಸ್ವಚ್ಛತೆ ಕಾಪಾಡುವಂತೆ ತಿಳಿವಳಿಕೆ ಮೂಡಿಸಿದಾಗ ಹಳ್ಳಿಗಳೂ ಸುಂದರಗೊಳ್ಳುತ್ತವೆ. ಮುಖ್ಯವಾಗಿ ಮನೆಗಳ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳುವುದು. ಮನೆಯಂಗಳ, ಹಿತ್ತಲಲ್ಲಿ ಸ್ಥಳವಿದ್ದರೆ ತರಕಾರಿ, ಸೊಪ್ಪು, ಹೂವಿನ ಗಿಡ ಬೆಳೆಸಿ ಪರಿಸರ ಕಾಳಜಿ ವಹಿಸುವಲ್ಲಿಯೂ ಆಸಕ್ತಿ ಮೂಡಿಸಬೇಕು ಎಂದು ಹೇಳಿದರು. .

ಬಂಡೂರು ಪಂಚಾಯಿತಿ ಸರ್ಕಾರಿ ಶಾಲೆಗೆ ಹೊಸ ಕೊಠಡಿಗಳನ್ನು ನಿರ್ಮಿಸಿಕೊಡುವುದಲ್ಲದೆ, ಕಂಪ್ಯೂಟರ್‌ ಹಾಗೂ ಯುಪಿಎಸ್‌ ಸೌಲಭ್ಯಗಳನ್ನೂ ದೊರಕಿಸಿ ಕೊಡ ಲಾಗುತ್ತದೆ. ಈಗಾಗಲೇ ಬಂಡೂರು, ದಡದಪುರ ಸೇರಿದಂತೆ ಹಲವು ಗ್ರಾಮಗಳು ಸಂಪೂರ್ಣವಾಗಿ ಶೌಚಾಲಯ ಹೊಂದಿ ರುವುದಲ್ಲದೆ, ಅಡುಗೆ ಅನಿಲ ಬಳಕೆಯೊಂದಿಗೆ ಹೊಗೆಮುಕ್ತ ಗ್ರಾಮಗಳಾಗಿ ರೂಪುಗೊಂಡಿವೆ ಎಂದರು.

ಉಚಿತ ಬಸ್‌ ಪಾಸ್‌: ಈಗಾಗಲೇ ತಾಲೂಕಿನ ಹಲವಾರು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ನ್ನು ಉಚಿತವಾಗಿ ವಿತರಿಸುವ ಮೂಲಕ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು.

ಶಾಲೆಗಳಿಗೆ ವಿವಿಧ ಸವಲತ್ತು: ಮಳವಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಲಿಂಗಯ್ಯ ಮಾತನಾಡಿ, ಸಮಾಜಮುಖೀ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಹಲವು ಅನುಕೂಲಗಳನ್ನು ಕಲ್ಪಿಸಿಕೊಟ್ಟಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯಗಳಿಲ್ಲದೆ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವ ಇಂದಿನ ದಿನಗಳಲ್ಲಿ ಶಾಲೆಗಳಿಗೆ ಅವಶ್ಯವಿರುವ ಕೊಠಡಿಗಳು, ಕಂಪ್ಯೂಟರ್‌, ಯುಪಿಎಸ್‌ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಯೋಗೇಶ್‌, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಸಿದ್ದರಾಜು, ಬೆಳಗಾವಿ ತಾಂತ್ರಿಕ ಶಿಕ್ಷಣ ಮಹಾವಿದ್ಯಾಲಯದ ಡಾ.ಅಶ್ವಿ‌ನ್‌, ವಕೀಲ ಅವಿನಾಶ್‌, ಶಿಕ್ಷಕ ಜಯರಾಂ, ರಮೇಶ್‌ ಇತರರಿದ್ದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.