ಊರೆಲ್ಲ ಹೊಳೆ ಹರಿದರೂ ಈ ಕೆರೆ ತುಂಬಿಲ್ಲ!
Team Udayavani, Jul 22, 2018, 4:42 PM IST
ಮಳವಳ್ಳಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಕಬಿನಿ, ಹಾರಂಗಿ, ಹೇಮಾವತಿ ಹಾಗೂ ಕೃಷ್ಣರಾಜಸಾಗರ ಜಲಾಶಯಗಳು ತುಂಬಿ ಹರಿಯುತ್ತಿವೆ. ಎಲ್ಲೆಲ್ಲೂ ಜಲಧಾರೆ ವೈಭವ ಕಣ್ಣಿಗೆ ಕಾಣಿಸುತ್ತಿದೆ. ಆದರೂ ಸಕ್ಕರೆ ಜಿಲ್ಲೆಯ ಕೊನೆಯ ಭಾಗದ ರೈತರಿಗೆ ನೀರಿನ ಕೊರತೆ ಮಾತ್ರ ನೀಗಿಲ್ಲ. ಅದಕ್ಕೆ ಸಾಕ್ಷಿ ತಾಲೂಕಿನ ಹಲಗೂರು ದೊಡ್ಡಕೆರೆ.
ಮಳೆ ಕೊರತೆಯಿಂದ ಹಲಗೂರಿನ ಕೆರೆ ಕಳೆದ 25 ವರ್ಷಗಳಿಂದ ತುಂಬಿಲ್ಲ. ಅಭಿವೃದ್ಧಿಯಿಂದಲೂ ಸಂಪೂರ್ಣ ವಂಚಿತವಾಗಿದೆ. ಉತ್ತಮ ಮಳೆಯಾಗಿ ಎಲ್ಲೆಡೆ ಹಸಿರು ನೆಲೆಸಿ, ರೈತರು ಬೆಳೆ ಕೈಗೆತ್ತಿಕೊಂಡಿದ್ದರೆ ಹಲಗೂರು ದೊಡ್ಡಕೆರೆ ವ್ಯಾಪ್ತಿಯ ರೈತರು ಮಾತ್ರ ನೀರಿಲ್ಲದೆ ಒಣಗುವ ಬೆಳೆಗಳನ್ನು ಕಂಡು ಕಂಗಾಲಾಗಿದ್ದಾರೆ.
ಮಳೆಯಾಶ್ರಿತ ಪ್ರದೇಶ: ಸುಮಾರು 60 ಎಕರೆ ಪ್ರದೇಶದಲ್ಲಿರುವ ದೊಡ್ಡಕೆರೆ ನೀರಿಲ್ಲದೆ ಬರಿದಾಗಿದೆ. ಇದರಿಂದ ಕೆರೆ ಅಚ್ಚುಕಟ್ಟು ವ್ಯಾಪ್ತಿಯಲ್ಲಿರುವ 500 ಎಕರೆ ಪ್ರದೇಶದಲ್ಲಿರುವ ಬೆಳೆ ನೀರಿಲ್ಲದೆ ಒಣಗುತ್ತಿದೆ. ಕೆರೆ ಪ್ರದೇಶದ ಸಂಪೂರ್ಣ ಮಳೆಯಾಶ್ರಿತ ಪ್ರದೇಶವಾಗಿದೆ. ಈ ಕೆರೆಗೆ ನಾಲೆ, ಪೈಪ್ಲೈನ್ ಮೂಲಕ ಕೆರೆ ತುಂಬಿಸುವ ಪ್ರಯತ್ನಗಳು ಯಾರಿಂದಲೂ ನಡೆದಿಲ್ಲ. ಇದರಿಂದ ಈ ಭಾಗದ ರೈತರು ಸಂಕಷ್ಟ ಎದುರಿಸುವಂತಾಗಿದೆ. ತಾಲೂಕಿನ ಹಲಗೂರು ವ್ಯಾಪ್ತಿಯಲ್ಲಿರುವ ಸುಮಾರು 60 ಎಕರೆ ಪ್ರದೇಶದಲ್ಲಿರುವ ದೊಡ್ಡ ಕೆರೆ ಮಳೆ ಇಲ್ಲದೆ ಕಳೆದ 25 ವರ್ಷಗಳಿಂದ ಖಾಲಿ ಖಾಲಿ ಹೊಡೆಯುತ್ತಿರುವುದು ಪ್ರಕೃತಿ ವಿಕೋಪವೋ ಅಥವಾ ಜನಪ್ರತಿನಿಧಿಗಳ ನಿರ್ಲಕ್ಷತೆಯೋ ಎಂಬುದು ಹೇಳತೀರದಾಗಿದೆ.
ಭೀಮನಕಿಂಡಿ ಬೆಟ್ಟಕ್ಕೆ ಮಳೆಯಾದರೆ ಮಾತ್ರ ಈ ಕೆರೆಗೆ ನೀರು ಬರುತ್ತದೆ. ಆದ ಕಾರಣ ಶಿಂಷಾ ನದಿಯಿಂದ ಅಥವಾ ಇಗ್ಗಲೂರು ಅಣೆಕಟ್ಟೆಯಿಂದ ಇಲ್ಲಿಗೆ ನೀರು ತರಲು ಅವಕಾಶವಿದೆ. ಜಿಲ್ಲೆಯ ಗಡಿಭಾಗದಲ್ಲಿರುವ ದೊಡ್ಡಕೆರೆ ಜನಪ್ರತಿನಿಧಿಗಳಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿರುವುದು ರೈತರ ಬೇಸರಕ್ಕೆ ಕಾರಣವಾಗಿದೆ.
ನೀರಿನ ಮಾರ್ಗ ಮುಚ್ಚಿ ಹೋಗಿವೆ: ಉತ್ತಮ ವರ್ಷಧಾರೆಯಿಂದ ಎಲ್ಲಾ ನದಿಗಳು ಮೈದುಂಬಿದ್ದು, ಗ್ರಾಮೀಣ ಪ್ರದೇಶದಲ್ಲಿರುವ ಕೆರೆ-ಕಟ್ಟೆಗಳು ತುಂಬಿ ತುಳುಕುತ್ತಿವೆ. ಆದರೆ, ಹಲಗೂರಿನ ಕೆರೆಯಲ್ಲಿ ನೀರೇ ಇಲ್ಲದಂತಾಗಿದೆ. ಕೆರೆಗೆ ನೀರು ತುಂಬಬೇಕಾದರೆ ಭೀಮನ ಕಿಂಡಿ ಬೆಟ್ಟದಲ್ಲಿ ಮಳೆಯಾಗಬೇಕು. ಅಲ್ಲಿಂದ ಹಳ್ಳದಲ್ಲಿ ಹರಿದು ಬಂದ ಮಳೆ ನೀರು ಕೆರೆ ಸೇರುತ್ತದೆ.
ಈ ಬಾರಿ ಭೀಮನಕಿಂಡಿ ಬೆಟ್ಟದಲ್ಲಿ ಸಮೃದ್ಧ ಮಳೆಯಾಗಿದ್ದರೂ ಕೆರೆಗೆ ಮಾತ್ರ ನೀರು ಹರಿದುಬಂದಿಲ್ಲ. ಏಕೆಂದರೆ, ಕೆರೆಗೆ ನೀರು ಹರಿದುಬರುವ ಮಾರ್ಗದ ಎಲ್ಲಾ ಹಳ್ಳ-ಕೊಳ್ಳಗಳು ಮುಚ್ಚಿ ಹೋಗಿವೆ. ನೀರು ಅಲ್ಲಿಂದ ಇಲ್ಲಿಗೆ ಬರುವುದಕ್ಕೆ ಸಾಧ್ಯವಾಗದಂತಾಗಿದೆ ಎನ್ನುವುದು ಸ್ಥಳೀಯರು ಹೇಳುವ ಮಾತು.
ನೀರು ತುಂಬಿಸಿ: ಈ ಕೆರೆಗೆ ನೀರು ತುಂಬಿಸಲು ಶಿಂಷಾ ನದಿಯಿಂದ ನೀರು ತರಬೇಕು ಅಥವಾ ಇಗ್ಗಲೂರು ಡ್ಯಾಂನಿಂದ ಪೈಪ್ ಮುಖಾಂತರ ನೀರು ತಂದು ತುಂಬಿಸಬಹುದು ಹಾಗೂ ತೊರೆಕಾಡನಹಳ್ಳಿ ಗ್ರಾಮದಲ್ಲಿರುವ ಶಿಂಷಾ ನದಿಯಿಂದ ಸಾತನೂರಿಗೆ ಹಲಗೂರು ಮಾರ್ಗವಾಗಿ ಪೈಪ್ಲೈನ್ ಮುಖಾಂತರ ಶುದ್ಧಿಕರಿಸದೆ ಇರುವ ನೀರನ್ನು ಕೊಂಡೊಯ್ಯಲಾಗುತ್ತಿದೆ. ಅದೇ ಮಾರ್ಗದ ಪೈಪ್ಗೆ ಒಂದು ಗೇಟ್ವಾಲ್ ಅಳವಡಿಸಿ ಹಲಗೂರು ಕೆರೆಯಲ್ಲೇ ಹಾದು ಹೋಗಿರುವ ಪೈಪ್ನಿಂದಲೇ ಕೆರೆಗೆ ನೀರು ಹರಿಸಿ ಭರ್ತಿ ಮಾಡಬಹುದು.
500 ಎಕರೆ ಪ್ರದೇಶದ ರೈತರಿಗೆ ಸಂಕಷ್ಠ: ಈ ಕೆರೆ ಸುಮಾರು 50 ರಿಂದ 60 ಎಕರೆ ಪ್ರದೇಶವಿದ್ದು, ಈ ಕೆರೆ ಭರ್ತಿಯಾದರೆ ಸುಮಾರು 500 ರಿಂದ 600 ಎಕರೆಗೆ ನೀರು ಸಿಗುತ್ತದೆ. ಗ್ರಾಮದಲ್ಲಿರುವ ಮನೆಗಳ ಬೋರ್ವೆಲ್ಗಳಲ್ಲಿ ಸಮೃದ್ಧಿಯಾಗಿ ನೀರು ಬರುತ್ತದೆ. ಹೊಸದಾಗಿ ಬೋರ್ವೆಲ್ ಹಾಕಿಸಿದರೆ ಕೇವಲ 50-60 ಅಡಿಗೆ ನೀರು ಬರುವಂತಹ ಪರಿಸ್ಥಿತಿ ಇದೆ. ಕೆರೆಯ ಕೆಳಭಾಗದಲ್ಲಿರುವ ಗದ್ದೆಗಳಲ್ಲಿ ರೈತರು ಭತ್ತ ಬೆಳೆಯಬಹುದು. ಸುಮಾರು ವರ್ಷಗಳ ಹಿಂದೆ ಈ ಕೆರೆಯ ನೀರಿನಿಂದ ರೈತರು 2 ಬಾರಿ ಭತ್ತ ಬೆಳೆಯುತ್ತಿದ್ದರು. ಈಗ ನೀರು ಇಲ್ಲದ ಕಾರಣ ವ್ಯವಸಾಯ ಮಾಡುವುದನ್ನೆ ನಿಲ್ಲಿಸಿ ಸಂಕಷ್ಟದಲ್ಲಿ ಮುಳುಗಿದ್ದಾರೆ.
ಕೆಲವು ಕಡೆ ಭರ್ತಿಯಾಗಿರುವ ಕೆರೆಗಳಿಗೆ ಶಾಸಕರು ಬಾಗಿನ ಅರ್ಪಿಸುತ್ತಿರುವ ರೀತಿ ಹಲಗೂರು ಕೆರೆಗೆ ನೀರು ತುಂಬಿಸುವ
ಯೋಜನೆ ರೂಪಿಸಿ ನೀರು ತುಂಬಿಸಬೇಕಿದೆ. ಇನ್ನಾದರೂ ಶಾಸಕರು ಅಥವಾ ಈ ಭಾಗದ ಜನಪ್ರತಿನಿಧಿಗಳು ಹೆಚ್ಚಿನ ಅನುದಾನ ನೀಡಿ ಅಭಿವೃದ್ದಿ ಮಾಡುವರೇ ಎಂಬುದನ್ನು ಕಾದು ನೋಡಬೇಕಿ¨
ಪ್ರಭಾಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ