ಕಲ್ಯಾಣಿ ಸ್ವಚ್ಛಗೊಳಿಸಿ ಪರಿಸರ ಪ್ರೇಮ
Team Udayavani, Apr 11, 2021, 3:36 PM IST
ಮೇಲುಕೋಟೆ: ಹೋಬಳಿಯ ಹೊಸಕೋಟೆ ಗ್ರಾಮದಲ್ಲಿರುವ ಹೊಯ್ಸಳರ ಕಾಲದಲ್ಲಿ ನಿರ್ಮಾಣವಾಗಿದೆ ಎನ್ನಲಾಗುತ್ತಿರುವ ಪಾಳು ಕಲ್ಯಾಣಿಯನ್ನು ರೈತ ಸಂಘದ ಕಾರ್ಯಕರ್ತರು, ದರ್ಶನ್ ಪುಟ್ಟಣ್ಣಯ್ಯ ಅಭಿಮಾನಿಗಳು, ಪರಿಸರ ಬಳಗದ ಸದಸ್ಯರು ಹಾಗೂ ಗ್ರಾಮಸ್ಥರು ಶುಚಿಗೊಳಿಸಿ ಪರಿಸರ ಪ್ರೇಮ ಮೆರೆದರು.
1200 ವರ್ಷದ ಎನ್ನಲಾದ ಕಲ್ಯಾಣಿಯಲ್ಲಿ ಗಿಡ, ಹೂಳು ಹಾಗೂ ಕಲ್ಲು ಮಣ್ಣುಗಳಿಂದ ತುಂಬಿ ಹೋಗಿ ನಿರ್ಲಕ್ಷಿತವಾಗಿತ್ತು. ಕೆರೆಕಟ್ಟೆ, ಕಲ್ಯಾಣಿಗಳ ಮಹತ್ವದ ಬಗ್ಗೆ ಅರಿವು ಮೂಡಿಸಿ ಅವುಗಳಪುನಶ್ಚೇತನಕ್ಕೆ ಕಾರ್ಯಕ್ರಮ ರೂಪಿಸುತ್ತಿರುವಅರಕೆರೆ ಪ್ರಸನ್ನ ಎನ್.ಗೌಡ, ಪರಿಸರ ಕಾಳಜಿಹೊಂದಿರುವ ರೈತ ಸಂಘದ ಕಾರ್ಯಕರ್ತರ ಸಹಕಾರದೊಂದಿಗೆ ಮೇಲುಕೋಟೆ ಸಮೀಪದ ಕದಲಗೆರೆಯ ಕೊಳವನ್ನೂ ಸಹ ಇತ್ತೀಚೆಗೆ ಸ್ವಚ್ಛ ಮಾಡಿದ್ದರು.
ಇದೇ ಮಾದರಿ ಕಾರ್ಯ ಯೋಜನೆ ರೂಪಿಸಿಶನಿವಾರ ಬೆಳಗ್ಗೆಯಿಂದಲೇ ಹೊಸಕೋಟೆಯಕೊಳದ ಹೂಳೆತ್ತಿ, ಗಿಡಗಂಟಿಗಳನ್ನು ಸ್ವತ್ಛಗೊಳಿಸಿನೀರು ಸಂಗ್ರಹಕ್ಕೆ ಬೇಕಾದ ಎಲ್ಲ ಸೌಕರ್ಯ ಮಾಡಿದ್ದಾರೆ.
ಪುರಾತನ ಕೊಳಗಳ ಪುನಶ್ಚೇತನ:
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಸನ್ನ, ಪುರಾತನ ಕಾಲದಲ್ಲಿ ನಿರ್ಮಿಸುತ್ತಿದ್ದ ಕಲ್ಯಾಣಿ,ಕೆರೆಕಟ್ಟೆಗಳು, ಕುಡಿಯುವ ನೀರಿನ ಸಾಮೂಹಿಕಮೂಲವಾಗುವ ಜತೆಗೆ ಮಳೆ ನೀರು ಸಂಗ್ರಹಮಾಡಿ, ಅಂತರ್ಜಲ ಹೆಚ್ಚಿಸಲು ವೈಜ್ಞಾನಿಕವಾಗಿ ನಿರ್ಮಾಣವಾಗಿದ್ದವು. ಆದರೆ ನಾವುಇವುಗಳನ್ನು ನಿರ್ಲಕ್ಷಿಸಿರುವ ಕಾರಣ ಅಂತರ್ಜಲಮಟ್ಟ ಕುಸಿಯುತ್ತಿದೆ. ಇಂಥ ಕೊಳಗಳನ್ನುಪುನಶ್ಚೇತನ ಮಾಡುವ ಕಾರ್ಯವನ್ನುಮಾಡಿದ್ದೇವೆ. ಇನ್ನಷ್ಟು ಪುರಾತನ ಕೊಳಗಳಪುನಶ್ಚೇತನ ಮಾಡುವ ಕಾರ್ಯ ಯೋಜನೆಇದೆ ಎಂದರು.
ರೈತ ಸಂಘದ ಮುಖಂಡ ಕೆ.ಟಿ.ಗೋವಿಂದೇಗೌಡ ಕೊಳದ ಹೂಳೆತ್ತುವ ಕಾರ್ಯದಲ್ಲಿ ಭಾಗಿಯಾಗಿ ಕಾರ್ಯಕರ್ತರನ್ನು ಹುರಿದುಂಬಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ