ಶ್ರೀರಂಗಪಟ್ಟಣದಲ್ಲಿ ಅಕ್ರಮ ಕಟ್ಟಡಗಳ ತೆರವು
Team Udayavani, Feb 15, 2021, 7:29 PM IST
ಶ್ರೀರಂಗಪಟ್ಟಣ: ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಪುರಸಭಾ ವ್ಯಾಪ್ತಿಯ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯಿತು.
4 ತುಕಡಿಯ 60 ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ತಹಶೀಲ್ದಾರ್ ಎಂ.ವಿ. ರೂಪಾ ನೇತೃತ್ವದಲ್ಲಿ ಪುರಸಭೆ ಮುಖ್ಯಾ ಧಿಕಾರಿ ಕೃಷ್ಣ,ಭಾರತೀಯ ಪುರಾತತ್ವ ಸರ್ವೇ ಕ್ಷಣ ಇಲಾಖೆಯಸಹಾಯಕ ಸಂರಕ್ಷಣಾಧಿಕಾರಿ ಸುನಿಲ್ ಕುಮಾರ್,ಸಹಾಯಕ ಅಧೀಕ್ಷಕ ಪುರಾತತ್ವ ಶ್ರೀಗುರು ಭಾಗಿಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಜಂಟಿಕಾರ್ಯಾಚರಣೆ ನಡೆಸಿ, ಅಕ್ರಮ ಕಟ್ಟಡಗಳನ್ನುಎರಡು ಜೆಸಿಬಿ ಯಂತ್ರಗಳನ್ನು ಬಳಸಿ ನೆಲಸಮ ಗೊಳಿಸಲು ಮುಂದಾದರು.
ಗಂಜಾಂನ ಟಿಪ್ಪು ಬೇಸಿಗೆ ಅರಮನೆ ಮುಂ ಭಾಗದ ಅಕ್ರಮ ಕಟ್ಟಡ ಹಾಗೂ ವಾಣಿಜ್ಯಮಳಿಗೆಗಳನ್ನು ಅಧಿಕಾರಿಗಳು ಜೆಸಿಬಿ ಯಂತ್ರದಮೂಲಕ ತೆರವಿಗೆ ಮುಂದಾ ದ ವೇಳೆ ಕಟ್ಟಡ ಮಾಲೀಕರು ಸ್ವತಃ ಅವರೇ ತೆರವು ಮಾಡಿಕೊಡುವುದಾಗಿ ತಿಳಿಸಿ, ವಾಣಿಜ್ಯ ಮಳಿಗೆಯ ಬೆಲೆ ಬಾಳುವ ವಸ್ತುಗಳನ್ನು ತೆರವು ಮಾಡಿ, ನಂತರಕಟ್ಟಡ ತೆರವಿಗೆ ಕಾಲವಕಾಶ ಕೇಳಿ ದರು. ಅಧಿಕಾರಿಗಳು ಸ್ಥಳದಲ್ಲೇ ಇದ್ದು, ಮಳಿಗೆಯ ವಸ್ತುಗಳನ್ನು ತೆರವುಗೊಳಿಸಿದರು. ಪಟ್ಟಣ ವ್ಯಾಪ್ತಿಯ ಕಾವೇರಿ ಸಂಗಮ, ಗೋಸಾಯಿಘಾಟ್ ಬಳಿಯ ಕಾವೇರಿ ನದಿ ತೀರದಲ್ಲಿ ಅನಧಿಕೃತ ಶೆಡ್ಡು, ಮಳಿಗೆ ಹಾಗೂ ಕಟ್ಟಡ ತೆರವುಗೊಳಿಸಿದರು.
ಅಕ್ರಮ ಕಟ್ಟಡ ತೆರವು ಸ್ವಾಗತರ್ಹ: ಅಕ್ರಮ ಕಟ್ಟಡ ತೆರವಿಗೆ ಹೈಕೋರ್ಟ್ ಕಳೆದ 5 ತಿಂಗಳ ಹಿಂದೆಯೇ ಆದೇಶ ನೀಡಿತ್ತು. ಆದರೂ, ಅಧಿಕಾರಿಗಳು ಪ್ರಭಾವಿಗಳ ಒತ್ತಡಕ್ಕೆ ಮಣಿದು ಅಕ್ರಮ ಕಟ್ಟಡ ತೆರವಿಗೆ ಮುಂದಾಗಿರಲಿಲ್ಲ. ಈ ಸಂಬಂಧ ಪುರಸಭೆ ವಿಶೇಷ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದು, ಕ್ರಮಕ್ಕೆಪುರಸಭೆ ಮುಖ್ಯಾಧಿಕಾರಿ ಕೃಷ್ಣ ಸಮಯವಕಾಶ ಕೇಳಿದರು. ಹೈಕೋರ್ಟ್ ಆದೇಶದಂತೆ ಅಕ್ರಮಕಟ್ಟಡ ನೆಲಸಮಗೊಳಿಸಿರುವುದು ಸ್ವಾಗತರ್ಹ ಎಂದು ಪುರಸಭೆ ಸದಸ್ಯ ಎಂ.ನಂದೀಶ್ ಸಮರ್ಥಿಸಿಕೊಂಡರು.
ಅನಧಿಕೃತ ಕಟ್ಟಡ ತೆರವು: ಕಾವೇರಿ ನದಿ ತೀರದಗೋಸಾಯಿಘಾಟ್, ಕಾವೇರಿ ಸಂಗಮದಲ್ಲಿಅನಧಿಕೃತ ಕಟ್ಟಡ ತೆರವುಗೊಳಿಸಿ, ಜೊತೆಗೆ ಗಂಜಾಂರಸ್ತೆಯಲ್ಲಿರುವ ಅನಧಿಕೃತ ವಾಣಿಜ್ಯ ಮಳಿಗೆಯನ್ನುತೆರವುಗೊಳಿಸಲು ಮುಂದಾಗಿದ್ದೇವೆ. ಆದರೆ, ಮಾಲೀಕ ಒಂದು ದಿನದ ಸಮಯ ಕೇಳಿದ್ದು, ಬೆಲೆಬಾಳುವ ವಸ್ತುಗಳನ್ನು ಮಳಿಗೆಯಿಂದ ಹೊರ ತೆಗೆದನಂತರ ಆ ಕಟ್ಟಡ ತೆರವುಗೊಳಿಸಲಾಗುವುದು ಎಂದು ತಹಶೀಲ್ದಾರ್ ಎಂ.ವಿ.ರೂಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ