ನಾಳೆ ಕೆಆರ್ಎಸ್ ಜಲಾಶಯಕ್ಕೆ ಸಿಎಂ ಬಾಗಿನ
Team Udayavani, Nov 1, 2021, 5:22 PM IST
ಶ್ರೀರಂಗಪಟ್ಟಣ: ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿ ಹಿನ್ನೆಲೆಯಲ್ಲಿ ಈ ಬಾರಿ ತುಂಬಿದ ಕಾವೇರಿಗೆ ಬಾಗಿನ ಅರ್ಪಿಸಲು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಆಗಮಿಸುವುದರಿಂದ ಜಿಲ್ಲಾಧಿಕಾರಿ ಡಾ.ಅಶ್ವಥಿ ಸ್ಥಳ ಪರಿಶೀಲಿಸಿದರು.
ನ.02 ರಂದು ಬೆಂಗಳೂರಿನಿಂದ ಕೆಆರ್ಎಸ್ ಹೆಲಿಪ್ಯಾಡ್ಗೆ ಹೆಲಿಕ್ಯಾಪ್ಟರ್ ಮೂಲಕ ಬಂದು ಇಳಿಯಲಿದ್ದಾರೆ. ಮಧ್ಯಾಹ್ನ 1ಗಂಟೆಗೆ ಜಲಾಶಯಕ್ಕೆ ಬಾಗಿನ ನೀಡಲಿದ್ದಾರೆ. ನಂತರ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ, ವೇದಿಕೆಯಲ್ಲಿ ಕಾರ್ಯಕ್ರಮ ಕುರಿತು ಮಾತನಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ, ಶಾಸಕ ರವೀಂದ್ರ ಶ್ರೀಕಂಠಯ್ಯ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ಮಾಹಿತಿಯಲ್ಲಿ ತಿಳಿದು ಬಂದಿದೆ.
ಇದನ್ನೂ ಓದಿ:-ʼರಾಜಕುಮಾರ’ ಸಿನಿಮಾ ಉಚಿತ ಪ್ರದರ್ಶನ
ಅದೇ ದಿನ ಕಬಿನಿ ಜಲಾಶಯಕ್ಕೂ ಬಾಗಿನ ಅರ್ಪಿಸಲಿದ್ದಾರೆ. ಜಲಾಶಯಕ್ಕೆ ಬಾಗಿನ ಅರ್ಪಿಸುವ ಹಿನ್ನೆಲೆ ಜಿಲ್ಲಾಧಿಕಾರಿಗಳು ಜಲಾಶಯ ಸುತ್ತಮುತ್ತ ಸ್ಥಳ ಪರಿಶೀಲನೆ ನಡೆಸಿ ಪೊಲೀಸರ ಬಿಗಿ ಭದ್ರತೆಗೆ ಸಿದ್ಧತೆ ನಡೆಸಿದ್ದಾರೆ. ಉಪವಿಭಾಗಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ, ತಹಶೀಲ್ದಾರ್ ಶ್ವೇತಾ ಇತರ ನೀರಾವರಿ ಅಧಿಕಾರಿಗಳು ಜೊತೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ