ಬಾಲಕಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಸಿಎಂ

ಹುಟ್ಟಿನಿಂದಲೇ ಬಲಗೈ ಸ್ವಾಧೀನದಿಂದ ಬಳಲುತ್ತಿದ್ದ ಮಗು • ಬೆಂಗಳೂರಿನಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ

Team Udayavani, Jun 17, 2019, 11:32 AM IST

mandya-tdy-2..

ಕುಮಾರಸ್ವಾಮಿಯೇ ಆಸ್ಪತ್ರೆಗೆ ಬಂದು ಮಗು ವೀಕ್ಷಣೆ ಮಾಡಿರುವುದು.

ಶ್ರೀರಂಗಪಟ್ಟಣ: ಹುಟ್ಟಿನಿಂದಲೇ ಅಂಗವೈಕಲ್ಯದಿಂದ ಬಳಲುತಿದ್ದ ಐದು ವರ್ಷದ ಕಂದಮ್ಮನಿಗೆ ಆಸರೆಯಾದ ನಾಡ ದೊರೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಭಾರೀ ಮುಖಭಂಗ ಅನುಭವಿಸಿದರೂ, ಚುನಾವಣೆ ಪ್ರಚಾರ ವೇಳೆ ಬಡ ದಂಪತಿಗಳಿಗೆ ಕೊಟ್ಟ ಮಾತಿನಂತೆ ಮಗುವಿನ ಶಸ್ತ್ರ ಚಿಕಿತ್ಸೆ ವೆಚ್ಚ ಭರಿಸಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾನವೀಯತೆ ಮೆರೆದಿದ್ದಾರೆ.

ಇತ್ತೀಚೆಗೆ ಲೋಕಸಭಾ ಚುನಾವಣೆ ವೇಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೆಆರ್‌ಎಸ್‌ನಲ್ಲಿ ವಾಸ್ತವ್ಯ ಹೂಡಿ ಬೆಂಗಳೂರಿಗೆ ಪ್ರಯಾಣ ಬೆಳಸುವ ವೇಳೆ ತಾಲೂಕಿನ ಹೊಸ ಆನಂದೂರು ಗ್ರಾಮದ ಬಡ ಕುಟುಂಬದ ಲಕ್ಷ್ಮೀ ಹಾಗೂ ಕುಮಾರ್‌ ದಂಪತಿ ಕುಮಾರಸ್ವಾಮಿ ಅವರ ಬರುವಿಕೆಗಾಗಿ ಕಾದು ನಿಂತಿದ್ದರು. ಬಲಗೈ ಸ್ವಾಧೀನ ಕಳೆದುಕೊಂಡಿರುವ ತಮ್ಮ ಮಗಳು ರಿಯಾಂಜಲಿ ಶಸ್ತ್ರ ಚಿಕಿತ್ಸೆ ನಡೆಸಲು ನೆರವಾಗುವಂತೆ ಮನವಿ ಮಾಡಿದ್ದರು. ಆ ಕುಟುಂಬದ ಸಂಕಷ್ಟಕ್ಕೆ ಮರುಗಿದ ಕುಮಾರಸ್ವಾಮಿ ಚುನಾವಣೆ ಮುಗಿದ ಬಳಿಕ ನಿಮಗೆ ಸಹಾಯ ಮಾಡುತ್ತೇನೆ ಬೆಂಗಳೂರಿಗೆ ಬಂದು ನನ್ನನ್ನು ಭೇಟಿ ಮಾಡಿ ಎಂದು ಭರವಸೆ ನೀಡಿ ಹೋಗಿದ್ದರು.

ಮುಖ್ಯಮಂತ್ರಿಗಳಿಂದ ಭರವಸೆ ಸಿಕ್ಕ ನಂತರ ಸಂತೋಷದಿಂದ ಎಲ್ಲಾ ಸಿದ್ಧತೆಯೊಂದಿಗೆ ದಂಪತಿ ಬೆಂಗಳೂರಿಗೆ ಪ್ರಯಾಣ ಬೆಳಸಿದರು. ಮುಖ್ಯಮಂತ್ರಿ ಅವರ ಜೆ.ಪಿ.ನಗರದ ನಿವಾಸ ತಲುಪಿದರು. ಇವರನ್ನು ನೋಡಿ ಕೂಡಲೇ ಅಲ್ಲಿರುವ ಸಿಬ್ಬಂದಿ ಒಳಗೆ ಕರೆದುಕೊಂಡು ಹೊಗಿ ಟೀ ಹಾಗೂ ತಿಂಡಿ ನೀಡಿ ಸಿಎಂ ಕುಮಾರಸ್ವಾಮಿ ಅವರಿಗೆ ವಿಷಯ ತಿಳಿಸಿದರು.

ಆಸ್ಪತ್ರೆ ಸೇರಿಸಿದರು: ಆತ್ಮೀಯತೆಯಿಂದ ಬರಮಾಡಿಕೊಂಡ ಕುಮಾರಸ್ವಾಮಿ ಅವರು ಮಗುವನ್ನು ಸಂಜಯ್‌ ತುರ್ತು ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ ವೈದ್ಯ ಡಾ.ಚಂದ್ರಶೇಖರ್‌ ಅವರಿಗೆ ಕರೆ ಮಾಡಿ, ನಾನು ಒಂದು ಮಗು ಕಳುಹಿಸಿಕೊಟ್ಟಿದ್ದೇನೆ. ಚಿಕಿತ್ಸೆ ನೀಡಿ ಮಗುವನ್ನು ಗುಣಪಡಿಸಲು, ಹಣ ಎಷ್ಟೇ ಆದರೂ ಅದನ್ನು ನಾನು ಕೊಡುತ್ತೇನೆ ಎಂದು ಸೂಚನೆ ನೀಡಿದರು. ನಂತರ ಆಸ್ಪತ್ರೆಗೆ ಮುಖ್ಯಮಂತ್ರಿಗಳ ಕಾರಿನಲ್ಲೇ ದಂಪತಿಯನ್ನು ಕಳುಹಿಸಿದರಲ್ಲದೆ, ದಂಪತಿಗೆ ಐದು ಸಾವಿರ ರೂ. ನಗದು ನೀಡಿದ್ದರು.

ಯಶಸ್ವಿ ಶಸ್ತ್ರಚಿಕಿತ್ಸೆ: ಆಸ್ಪತ್ರೆಗೆ ಹೋಗುತಿದ್ದಂತೆಯೇ ಎಲ್ಲಾ ರೀತಿಯ ಪರೀಕ್ಷೆಗಳನ್ನು ಮಾಡಿ ಆಪರೇಷನ್‌ಗೆ ಒಂದು ದಿನಾಂಕ ನಿಗದಿಪಡಿಸಿದರು. ನಂತರ ಚುನಾವಣೆ ಮುಗಿದ ಮೇಲೆ ಮೇ 18 ರಂದು ವೈದ್ಯರ ತಂಡ ರಿಯಾಂಜಲಿ ಅವರಿಗೆ ಆಪರೇಷನ್‌ ಮಾಡಿತು. ನಾಲ್ಕು ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದು ಯಾವುದೇ ವೆಚ್ಚವಿಲ್ಲದೆ ಅಲ್ಲಿಂದ ಕಳುಹಿಸಿಕೊಟ್ಟಿದ್ದಾರೆ.

ಮಗುವಿಗೆ ನಡೆಸಲಾದ ಆಪರೇಷನ್‌ ಯಶಸ್ವಿಯಾಗಿದ್ದು, ಸಂಪೂರ್ಣವಾಗಿ ಗುಣಮುಖವಾಗಲು ಇನ್ನೂ ಒಂದು ಶಸ್ತ್ರಚಿಕಿತ್ಸೆ ಬಾಕಿ ಇದೆ. ಎರಡು ತಿಂಗಳ ನಂತರ ಬರಲು ವೈದ್ಯರು ತಿಳಿಸಿದ್ದಾರೆ ಎಂದು ರಿಯಾಂಜಲಿ ತಂದೆ ಕುಮಾರ್‌ ತಿಳಿಸಿದ್ದಾರೆ.

ಚುನಾವಣೆ ಮುಗಿಯುತ್ತಿದ್ದಂತೆ ನಮ್ಮನ್ನು ಬೆಂಗಳೂರಿಗೆ ಕರೆಸಿಕೊಂಡ ಕುಮಾರಣ್ಣ ತಮ್ಮ ಮನೆಯಲ್ಲಿಯೇ ನಮ್ಮನ್ನು ಉಪಚರಿಸಿ ನಮ್ಮ ಮಗಳು ರಿಯಾಂಜಲಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ತಾವು ನುಡಿದಂತೆ ನಡೆದುಕೊಂಡರು. ನಾಡಿನ ದೊರೆ ಕುಮಾರಣ್ಣ ನವರ ಮಾನವೀಯತೆಗೆ ನಮ್ಮ ಕುಟುಂಬ ಆಭಾರಿಯಾಗಿದೆ.

ಮಗುವಿಗೆ ಏನಾಗಿತ್ತು?:

ಹೊಸ ಆನಂದೂರು ಗ್ರಾಮದ ಬಡ ಕುಟುಂಬದ ದಂಪತಿಗಳಾದ ಲಕ್ಷ್ಮೀಹಾಗೂ ಕುಮಾರ್‌ ಮಗಳು ರಿಯಾಂಜಲಿ. ಈಕೆಗೆ ಹುಟ್ಟಿನಿಂದಲೇ ಬಲತೋಳಿನ ನರ ದೌರ್ಬಲ್ಯ ಬಳಲುತ್ತಿದ್ದಳು. ಪೋಷಕರು ತಮ್ಮ ಅಲ್ಪ ಸ್ವಲ್ಪ ದುಡಿಮೆ ಹಣವನ್ನು ಅವಳ ಚಿಕಿತ್ಸೆಗೆ ವ್ಯಯಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಮಗಳ ಚಿಕಿತ್ಸೆಗಾಗಿ ಸಾಕಷ್ಟು ಆಸ್ಪತ್ರೆಗಳನ್ನು ಅಲೆದಾಡಿದರೂ ಗುಣವಾಗಲಿಲ್ಲ. ಈ ವೇಳೆ ಅನೇಕ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಗುಣಪಡಿಸಲು ಲಕ್ಷಾಂತರ ರೂ. ಖರ್ಚಾಗುತ್ತದೆ ಎಂದು ಹೇಳಿದ್ದರು. ಅಷ್ಟು ಹಣ ಬಡವರಾಗಿದ್ದ ದಂಪತಿ ಬಳಿ ಇರಲಿಲ್ಲ. ಅವಳ ಪರಿಸ್ಥಿತಿ ನೋಡಿ ಪ್ರತಿದಿನ ನೋವಿನಲ್ಲೇ ಸಂಸಾರ ದೂಡುತ್ತಿದ್ದರು. ಲಕ್ಷ್ಮೀ ಹಾಗೂ ಕುಮಾರ್‌ ದಂಪತಿಗೆ ಮೂರು ಜನ ಹೆಣ್ಣುಮಕ್ಕಳಿದ್ದು ಜೀವನ ನಡೆಸುವುದೇ ಕಷ್ಟಕರವಾಗಿತ್ತು. ಇಂತಹ ಸ್ಥಿತಿಯಲ್ಲಿ ಮಗಳ ಅಂಗವೈಕಲ್ಯ ಹೆತ್ತವರಿಗೆ ನುಂಗಲಾರದ ತುತ್ತಾಗಿತ್ತು.

ಟಾಪ್ ನ್ಯೂಸ್

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.