ಗುರಿ, ಉದ್ದೇಶ ದೃಢವಾಗಿದ್ದರೆ ಸ್ಪರ್ಧಾತ್ಮಕ ಸಾಧನೆ ಅತಿ ಸುಲಭ


Team Udayavani, Jul 22, 2019, 4:48 PM IST

mandya-tdy-3

ಮಂಡ್ಯ ಕೃಷಿಕ್‌ ಸರ್ವೋದಯ ಟ್ರಸ್ಟ್‌ ವತಿಯಿಂದ ಕೃಷಿಕ್‌ ಸ್ಪರ್ಧಾಸೌಧದಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ಬುನಾದಿ ತರಬೇತಿಯನ್ನು ಜಿಪಂ ಸಿಇಒ ಕೆ. ಯಾಲಕ್ಕಿಗೌಡ ಉದ್ಘಾಟಿಸಿದರು.

ಮಂಡ್ಯ: ಒಳ್ಳೆಯ ಗುರಿ, ಉದ್ದೇಶ, ದೃಢ ಚಿತ್ತ, ಕಠಿಣ ಪರಿಶ್ರಮ ಮೈಗೂಡಿಸಿಕೊಂಡಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಸಾಧ್ಯ ಎಂದು ಜಿಪಂ ಸಿಇಒ ಕೆ. ಯಾಲಕ್ಕಿಗೌಡ ಹೇಳಿದರು.

ಮಂಡ್ಯ ಕೃಷಿಕ್‌ ಸರ್ವೋದಯ ಟ್ರಸ್ಟ್‌ ವತಿಯಿಂದ ನಗರದ ಮಂಡ್ಯ ಕೃಷಿಕ್‌ ಸರ್ವೋದಯ ಭವನದಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ಬುನಾದಿ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸತತ ಸಾಧನೆಯೊಂದಿಗೆ ಗುರಿ ಮುಟ್ಟುವತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ಮಂಡ್ಯ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವವರ ಸಂಖ್ಯೆ ಕಡಿಮೆ. ಇತ್ತೀಚಿನ ದಿನಗಳಲ್ಲಿ ಇದು ಬದಲಾವಣೆಯತ್ತ ಸಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇದರೊಂದಿಗೆ ಕೃಷಿಕ್‌ ಸರ್ವೋದಯ ಟ್ರಸ್ಟ್‌ ಸಹ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಎಂದರು.

ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡಿರುವವರು ಮಾರುಕಟ್ಟೆಯಲ್ಲಿ ಹಲವು ಪುಸ್ತಕಗಳು ಲಭ್ಯವಾಗುತ್ತವೆ. ಅವುಗಳನ್ನು ಓದುವುದನ್ನು ರೂಢಿಸಿಕೊಳ್ಳಬೇಕು. ಎಲ್ಲಾ ಪುಸ್ತಕಗಳನ್ನು ಅಧ್ಯಯನ ಮಾಡುವುದರಿಂದ ಮಾತ್ರ ಆತ್ಮವಿಶ್ವಾಸ ಬೆಳೆಯುತ್ತದೆ. ಆಗ ಪರೀಕ್ಷೆಯನ್ನು ಎದುರಿಸಲು ಸುಲಭ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸುತ್ತಿರುವುದು ಮೆಚ್ಚುಗೆಯ ಸಂಗತಿ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ, ಪದವಿ ಪರೀಕ್ಷೆಗಳಲ್ಲೂ ಸಹ ಬಾಲಕಿಯರೇ ಮೇಲುಗೈ ಸಾಧಿಸುತ್ತಿದ್ದಾರೆ. ಬಾಲಕರ ವಿಭಾಗದಲ್ಲೂ ಹೆಚ್ಚಿನ ಫಲಿತಾಂಶ ಬರುವ ರೀತಿ ಪ್ರಯತ್ನ ನಡೆಸಲಾಗುತ್ತಿದೆ. ಅದಕ್ಕಾಗಿಯೇ ಹೆಚ್ಚು ಮಂದಿ ಬಾಲಕರು ತೇರ್ಗಡೆಯಾಗುವ ಪ್ರೌಢಶಾಲೆಗೆ ಬಹುಮಾನ ಕೊಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಕನ್ನಡದಲ್ಲೇ ಐಎಎಸ್‌ ಪರೀಕ್ಷೆ ಬರೆಯಬಹುದು. ಈಗಾಗಲೇ ವಿಜಯಲಕ್ಷ್ಮಿ ಹಾಗೂ ನಂದಿನಿ ಅವರು ಕನ್ನಡದಲ್ಲೇ ಪರೀಕ್ಷೆ ಬರೆದು ದೊಡ್ಡ ಸ್ಥಾನ ಪಡೆದಿದ್ದಾರೆ. ರ್‍ಯಾಂಕ್‌ ಅಷ್ಟೇ ಮುಖ್ಯವಾಗುವುದಿಲ್ಲ. ಯಾವ ಸಮಯದಲ್ಲಿ ಎಚ್ಚೆತ್ತುಕೊಂಡು ಸಾಧನೆ ಮಾಡಬೇಕು ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದರು. ಒಂದು ವಿಷಯವನ್ನೇ ಇಟ್ಟುಕೊಂಡು ಪರಿಕ್ಷೆ ಎದುರಿಸಬಹುದು. 300 ಅಂಕಗಳಿಗೆ ಪ್ರಬಂಧ ಬರೆಯಬೇಕಾಗಿರುತ್ತದೆ. ಸುಮ್ಮನೆ ತಿರುಳಿದ್ದ ವಿಚಾರ ಬರೆದರೆ ಯಾವುದೇ ಪ್ರಯೋಜನವಾಗುವುದಿಲ್ಲ. ಒಂದೊಂದು ಬುಲೆಟ್ ಪಾಯಿಂಟ್‌ಗಳನ್ನು ದಾಖಲಿಸುವಂತಹ ಪ್ರಯತ್ನ ಮಾಡಬೇಕು. ಆಗ ಮಾತ್ರ ಅಂಕಗಳಿಸಲು ಸಾಧ್ಯ ಎಂದು ಕಿವಿಮಾತು ಹೇಳಿದರು.

ವಿಷಯಾಧಾರಿತ ಉಪನ್ಯಾಸಕರನ್ನು ಕರೆಯಿಸಿ ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ನೀಡುವುದು ಮುಖ್ಯ. ಪ್ರಬಂದಕ್ಕೆ ಹೆಚ್ಚಿನ ಗಮನ ನೀಡುವುದು ಅಗತ್ಯ ಎಂದು ಹೇಳಿದರು. ಜನತಾ ಶಿಕ್ಷಣ ಟ್ರಸ್ಟ್‌ ಅಧ್ಯಕ್ಷ ಎಚ್.ಡಿ. ಚೌಡಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಅರಣ್ಯ ಸಂರಕ್ಷಣಾಕಾರಿ ಶಿವಶಂಕರ್‌, ಮಂಡ್ಯ ಕೃಷಿಕ್‌ ಸರ್ವೋದಯ ಟ್ರಸ್ಟ್‌ ಕಾರ್ಯದರ್ಶಿ ಡಾ. ರಾಮಲಿಂಗಯ್ಯ, ಜಂಟಿ ಕಾರ್ಯದರ್ಶಿ ಎ.ಎಂ. ಅಣ್ಣಯ್ಯ, ಬುನಾದಿ ತರಬೇತಿ ಸಮಿತಿ ಅಧ್ಯಕ್ಷ ಡಾ. ಕೆ.ಬಿ. ಬೋರಯ್ಯ, ವ್ಯವಸ್ಥಾಪಕ ಲಕ್ಷ್ಮಣ್‌, ಪ್ರೊ. ಸಿ.ಆರ್‌. ರಾಜು, ಅಲ್ತಾಫ್‌ ಅಹಮದ್‌, ಲೋಕೇಶ್‌ ಸಮಾರಂಭದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.