ಒಂದೇ ಪುಟದಲ್ಲಿ ಸಂಪೂರ್ಣ ರಾಮಾಯಣ ಚಿತ್ರಣ

ಸಂತೆಕಸಲಗೆರೆ ಸರ್ಕಾರಿ ಪ್ರೌಢಶಾಲೆ ಚಿತ್ರಕಲಾ ಶಿಕ್ಷಕ ನರಸಿಂಹಚಾರ್‌ರ ಕೈಚಳಕ

Team Udayavani, Nov 15, 2022, 2:45 PM IST

ಒಂದೇ ಪುಟದಲ್ಲಿ ಸಂಪೂರ್ಣ ರಾಮಾಯಣ ಚಿತ್ರಣ

ಮಂಡ್ಯ: ಒಂದೇ ಚಿತ್ರದಲ್ಲಿ ಇಡೀ ಸಂಪೂರ್ಣ ರಾಮಾಯಣದ ದೃಶ್ಯ ಚಿತ್ರಿಸುವ ಮೂಲಕ ಚಿತ್ರಕಲಾ ಶಿಕ್ಷಕ ನರಸಿಂಹಚಾರ್‌ ಗಮನ ಸೆಳೆದಿದ್ದಾರೆ.

ಸಂತೆಕಸಲಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿರುವ ನರಸಿಂಹಚಾರ್‌ ಕೆರಗೋಡು ಹೋಬಳಿ ಮರಿಲಿಂಗನದೊಡ್ಡಿ ಗ್ರಾಮದವರಾಗಿದ್ದಾರೆ.

ಗಮನ ಸೆಳೆಯುತ್ತಿದೆ: ಪ್ರತಿದಿನ 5 ಗಂಟೆಯಂತೆ ಸುಮಾರು 12 ದಿನ ಈ ಚಿತ್ರ ಬಿಡಿಸಿದ್ದಾರೆ. ಬ್ಲ್ಯಾಕ್‌ ಜೆಲ್‌ ಪೆನ್‌, ಅಕ್ರಾಲಿಕ್‌ ಬ್ಲಾಕ್‌ ಕಲರ್‌ ಉಪಯೋಗಿ ಸಿದ್ದಾರೆ. 16X24 ಅಳತೆಯ ಒಂದು ಡ್ರಾಯಿಂಗ್‌ ಶೀಟ್‌ನಲ್ಲಿ ಸಂಪೂರ್ಣ ರಾಮಾಯಣದ ದೃಶ್ಯಾವಳಿ ಗಳನ್ನು ಒಂದೇ ಚಿತ್ರದಲ್ಲಿ ಕಟ್ಟಿಕೊಟ್ಟಿದ್ದಾರೆ. ಸಂಪೂರ್ಣ ರಾಮಾಯಣದಲ್ಲಿ ಬರುವ ರಾಮ, ಲಕ್ಷ್ಮಣ, ಸೀತೆ, ಆಂಜನೇಯ, 10 ತಲೆಯ ರಾವಣ, ದಶರಥ ಸೇರಿ ಎಲ್ಲಾ ಪಾತ್ರಗಳನ್ನೊಳಗೊಂಡ ಚಿತ್ರ ಬಿಡಿಸಿದ್ದಾರೆ. ಈ ಚಿತ್ರ ಎಲ್ಲರ ಗಮನ ಸೆಳೆಯುತ್ತಿದೆ.

ಹೆಸರುವಾಸಿ: ನರಸಿಂಹಚಾರ್‌ ಈ ಹಿಂದೆ ವರನಟ ಡಾ.ರಾಜ್‌ಕುಮಾರ್‌ ಅವರು ನಟಿಸಿರುವ ಎಲ್ಲಾ ಸಿನಿಮಾಗಳ ಚಿತ್ರ ಬಿಡಿಸುವ ಮೂಲಕ ಗಮನ ಸೆಳೆದಿದ್ದರು. ಅಲ್ಲದೆ, ರಾಜ್‌ಕುಮಾರ್‌ ಹಾಗೂ ಪಾರ್ವತಮ್ಮ ರಾಜ್‌ಕುಮಾರ್‌ ಅವರ ಅರ್ಧ ಭಾಗ ಬಿಡಿಸುವ ಮೂಲಕ ವಿಭಿನ್ನ ಹಾಗೂ ಸರಳ ಚಿತ್ರಕಲೆಗೆ ಹೆಸರು ವಾಸಿಯಾಗಿದ್ದರು. ಸಂಪೂರ್ಣ ರಾಮಾಯಣದ ಚಿತ್ರವನ್ನು ಈಗಾಗಲೇ ಸಾಕಷ್ಟು ಮಂದಿ ಚಿತ್ರಿಸಿದ್ದಾರೆ. ಆದರೆ, ಒಂದೇ ಚಿತ್ರದಲ್ಲಿ ಸರಳವಾಗಿ ಚಿತ್ರ ಬಿಡಿಸಿರುವುದು ಇದೇ ಮೊದಲು. ಚಿತ್ರಕಲೆ ಡಿಪ್ಲೋಮಾ ಪಡೆದಿರುವ ನರಸಿಂಹಚಾರ್‌ ಮಕ್ಕಳಿಗೂ ಚಿತ್ರಕಲೆ ಪಾಠ ಮಾಡುತ್ತಿದ್ದಾರೆ.

ಚಿತ್ರಕಲೆ ಶಿಕ್ಷಕರು: ಚಿಕ್ಕಂದಿನಿಂದಲೇ ರಾಜ್‌ ಕುಮಾರ್‌ ಸಿನಿಮಾ ವೀಕ್ಷಣೆ ಮಾಡುತ್ತಾ, ಅವರ ಪ್ರೇರಣೆಯಿಂದಲೇ ಚಿತ್ರಕಲೆಯತ್ತ ಆಸಕ್ತಿ ಬೆಳೆಸಿ ಕೊಂಡಿದ್ದಾರೆ. ಮೊದಲು ರಾಜ್‌ಕುಮಾರ್‌ ಅವರ ವಿವಿಧ ರೀತಿಯ ಚಿತ್ರ ಬಿಡಿಸುತ್ತಿದ್ದರು. ನಂತರ ಜಿಲ್ಲೆ ಯ ರೈತರ ಎತ್ತಿನಗಾಡಿಗಳಿಗೆ ಚಿತ್ರ ಬರೆಯುತ್ತಿದ್ದ ಅವರು, ನಂತರ ಡಿಪ್ಲೋಮಾ ಮಾಡಿಕೊಂಡು ಶಿಕ್ಷಕರಾಗಿದ್ದಾರೆ. ತಂದೆಯೂ ಚಿತ್ರಕಲಾವಿದರಾಗಿದ್ದರು. ಅದರಂತೆ ನರಸಿಂಹಚಾರ್‌ ಕೂಡ ತಮ್ಮ ಮಗಳು ಮೋನಿಕಾಗೂ ಚಿತ್ರಕಲೆ ಹೇಳಿಕೊಟ್ಟು ಆಕೆಯೂ ಬೆಂಗಳೂರಿನ ಶಾಲೆಯೊಂದರಲ್ಲಿ ಚಿತ್ರಕಲೆ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಚಿತ್ರಕಲೆಯಲ್ಲಿ ನನಗೆ ಸಂಪೂರ್ಣ ತೃಪ್ತಿ ಇದೆ. ಇನ್ನಷ್ಟು ವಿಭಿನ್ನ ವಿವಿಧ ರೀತಿಯ ಚಿತ್ರಗಳನ್ನು ಸರಳವಾಗಿ ಬಿಡಿಸುವ ಹಂಬಲವಿದ್ದು, ಮತ್ತಷ್ಟು ಚಿತ್ರ ಬಿಡಿಸಲು ಪ್ರಯತ್ನಿಸುತ್ತೇನೆ. -ನರಸಿಂಹಚಾರ್‌, ಚಿತ್ರಕಲಾವಿದ 

ನಟ ರಾಜ್‌ ಕುಮಾರ್‌ ಹಾಗೂ ಪಾರ್ವತಮ್ಮ ರಾಜ್‌ ಕುಮಾರ್‌ ಅವರಭಾವಚಿತ್ರವನ್ನು ಒಂದೇ ಚಿತ್ರದಲ್ಲಿಚಿತ್ರಿಸಿರುವುದು.

ಟಾಪ್ ನ್ಯೂಸ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.