ಕಾಂಗ್ರೆಸ್‌ ಪಕ್ಷ ಸಂಘಟಿಸಿ ಅಧಿಕಾರಕ್ಕೆ ತರಲು ಶ್ರಮ


Team Udayavani, Apr 18, 2023, 1:47 PM IST

ಕಾಂಗ್ರೆಸ್‌ ಪಕ್ಷ ಸಂಘಟಿಸಿ ಅಧಿಕಾರಕ್ಕೆ ತರಲು ಶ್ರಮ

ಮದ್ದೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಪೂರಕ ವಾತಾವರಣ ನಿರ್ಮಾಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಜೋಡೆತ್ತುಗಳಾಗಿ ಪಕ್ಷ ಸಂಘಟನೆಗೆ ಮುಂದಾಗುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಕೆ.ಎಂ. ಕದಲೂರು ಉದಯ್‌ ತಿಳಿಸಿದರು.

ಪಟ್ಟಣದ ಶಿವಪುರದಲ್ಲಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಪಕ್ಷ ಸಂಘಟಿಸಲು ಇಬ್ಬರು ನಾಯಕರು ಶ್ರಮಿಸುತ್ತಿದ್ದು, ಇವರಿಗೆ ಮತ್ತಷ್ಟು ಶಕ್ತಿ ತುಂಬುವ ಕೆಲಸವಾಗಬೇಕು. ಮಾಜಿ ಸಿಎಂ ಕೃಷ್ಣ ನಂತರ ಕಾಂಗ್ರೆಸ್‌ ಶಾಸಕರಿಲ್ಲದೆ ಕಾರ್ಯಕರ್ತರಿಗೆ ನೋವುಂಟಾಗಿದೆ. ಅಂತಹ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇಬ್ಬರು ಶಾಸಕರನ್ನು ಆಯ್ಕೆ ಮಾಡುವ ಮೂಲಕ ಶಕ್ತಿ ತುಂಬಿದ್ದು, ಇವರೂ ಸಹ ಕ್ಷೇತ್ರ ಮತ್ತು ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ ಎಂದರು.

ಸಮಾಜ ಸೇವೆಗೆಂದು ಆಗಮಿಸಿದ ತಮ್ಮನ್ನು ಕ್ಷೇತ್ರದ ಜನ ಸ್ವೀಕರಿಸುವ ಜತೆಗೆ ಕಾಂಗ್ರೆಸ್‌ ಪಕ್ಷದ ಸ್ಥಳೀಯ ಜಿಲ್ಲಾ ಮತ್ತು ರಾಜ್ಯ ಮಟ್ಟದ ನಾಯಕರು ಕಾಂಗ್ರೆಸ್‌ ಟಿಕೆಟ್‌ ನೀಡಿ ಆಶೀರ್ವದಿಸಿದ್ದು, ಮುಂದಿನ ದಿನಗಳಲ್ಲಿ ಮತದಾರರು ತಮ್ಮ ಕೈ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದರು.

ಮತ ಕೇಳುವ ನೈತಿಕತೆ ಜೆಡಿಎಸ್‌ಗಿಲ್ಲ: ಶಾಸಕ ದಿನೇಶ್‌ ಗೂಳೀಗೌಡ ಮಾತನಾಡಿ, ಮುಂಬರುವ ವಿಧಾಸಭಾ ಚುನಾವಣೆ ವೇಳೆ ಮಂಡ್ಯ ಜಿಲ್ಲೆಯ ಜೆಡಿಎಸ್‌ ಅಭ್ಯರ್ಥಿಗಳು ಮತ ಕೇಳುವ ಯಾವು ದೇ ನೈತಿಕತೆ ಹೊಂದಿಲ್ಲ. ಜಿಲ್ಲೆಯ ಸಮಸ್ಯೆಗಳಿಗೆ ಧನಿ ಎತ್ತದ ಜಾದಳ ಶಾಸಕರು, ಎಲ್ಲಾ ಕ್ಷೇತ್ರದಲ್ಲೂ ಅಭಿವೃದ್ಧಿ ಶೂನ್ಯವಾಗಿದೆ. ಮದ್ದೂರು ಕ್ಷೇತ್ರ ಕಾಂಗ್ರೆಸ್‌ ವಶವಾಗಲಿದ್ದು, ಪಕ್ಷದ ಒಮ್ಮತದ ಅಭ್ಯರ್ಥಿ ಕೆ. ಎಂ.ಉದಯ್‌ ಗೆಲ್ಲುವ ಮೂಲಕ ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ತಮ್ಮೊಟ್ಟಿಗೆ ಮಧು.ಜಿ. ಮಾದೇಗೌಡ ಸೇರಿದಂತೆ ಮೂರು ಮಂದಿಯೂ ಶ್ರಮಿಸುವುದಾಗಿ ಭರವಸೆ ನೀಡಿದರು.

ನಾಳೆ ನಾಮಪತ್ರ ಸಲ್ಲಿಕೆ: ಮಾಜಿ ಶಾಸಕ ಬಿ. ರಾಮಕೃಷ್ಣ ಮಾತನಾಡಿ ಏ.19ರ ಬುಧವಾರ ಕಾಂಗ್ರೆಸ್‌ ಪಕ್ಷದ ಸರ್ವಾನುಮತದ ಅಭ್ಯರ್ಥಿ ಯಾಗಿ ಕೆ.ಎಂ. ಉದಯ್‌ ನಾಮಪತ್ರ ಸಲ್ಲಿಸಲಿದ್ದು ಪಕ್ಷದ ಎಲ್ಲಾ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಭಾಗವಹಿಸುವಂತೆ ಮನವಿ ಮಾಡಿದರು.

ಶಾಸಕ ಮಧು.ಜಿ.ಮಾದೇಗೌಡ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸಿ.ಡಿ.ಗಂಗಾಧರ್‌, ಪುರಸಭೆ ಮಾಜಿ ಅಧ್ಯಕ್ಷ ಎಂ.ಸಿ.ಬಸವರಾಜು, ಮಾಜಿ ಉಪಾಧ್ಯಕ್ಷ ಇಮ್ತಿಯಾಜ್‌ ಉಲ್ಲಾಖಾನ್‌, ಮುಖಂಡ ಅಜ್ಜಹಳ್ಳಿ ರಾಮಕೃಷ್ಣ, ಕಿಸಾನ್‌ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ದೇಶಹಳ್ಳಿ ಆರ್‌.ಮೋಹನ್‌ ಕುಮಾರ್‌ ಮಾತನಾಡಿದರು.

ಕೆಪಿಸಿಸಿ ಸದಸ್ಯ ಕದಲೂರು ರಾಮಕೃಷ್ಣ, ಗೆಜ್ಜಲಗೆರೆ ಗ್ರಾಪಂ ಅಧ್ಯಕ್ಷ ಹರೀಶ್‌, ಬೆಸಗರಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಶೇಖರ್‌, ಎಪಿಎಂಸಿ ಮಾಜಿ ಅಧ್ಯಕ್ಷ ನಾಗೇಶ್‌, ಕೆಸ್ತೂರು ರಾಜಣ್ಣ, ವಿನಯ್‌ ರಾಮಕೃಷ್ಣ ಹಾಜರಿದ್ದರು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

Melukote: ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.