ಸೋಲಿನ ಸೇಡು ತೀರಿಸಿಕೊಂಡ ನರೇಂದ್ರ ಸ್ವಾಮಿ


Team Udayavani, May 14, 2023, 2:56 PM IST

ಸೋಲಿನ ಸೇಡು ತೀರಿಸಿಕೊಂಡ ನರೇಂದ್ರ ಸ್ವಾಮಿ

ಮಳವಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪಿ.ಎಂ.ನರೇಂದ್ರ ಸ್ವಾಮಿ ಜೆಡಿಎಸ್‌ನ ಡಾ.ಕೆ.ಅನ್ನದಾನಿ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಕಳೆದ ಬಾರಿಯ ಸೋಲಿನ ಸೇಡು ತೀರಿಸಿಕೊಂಡರು.

2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಡಾ.ಕೆ.ಅನ್ನದಾನಿ ವಿರುದ್ಧ 26670 ಮತ ಅಂತರದಿಂದ ಸೋತಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪಿ.ಎಂ.ನರೇಂದ್ರ ಸ್ವಾಮಿ ಈ ಬಾರಿಯ ಚುನಾವಣೆಯಲ್ಲಿ 46846 ಮತಗಳ ಅಂತರದಿಂದ ಜೆಡಿಎಸ್‌ ಅಭ್ಯರ್ಥಿಯನ್ನು ಸೋಲಿಸಿದ್ದಾರೆ.

ಕ್ಷೇತ್ರದಲ್ಲಿ 2004ರಿಂದಲೂ ತಮ್ಮದೇ ಆದ ಹಿಡಿತ ಸಾಧಿಸುತ್ತಾ ಬಂದಿದ್ದ ಪಿ.ಎಂ.ನರೇಂದ್ರ ಸ್ವಾಮಿ, 2008ರಲ್ಲಿ ಕಾಂಗ್ರೆಸ್‌ ಸಿಗದೇ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿ ಬಿ.ಎಸ್‌.ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿದ್ದರು. 2013ರಲ್ಲಿ ಕಾಂಗ್ರೆಸ್‌ ಟಿಕೆಟ್‌ ಪಡೆದು 558 ಮತ ಅಂತರದಿಂದ ಗೆಲುವು ಸಾಧಿಸಿದ್ದ ಅವರು, 2018ರ ಚುನಾವಣೆಯಲ್ಲಿ 26970 ಮತಗಳಿಂದ ಜೆಡಿಎಸ್‌ ಅಭ್ಯರ್ಥಿ ಡಾ.ಕೆ.ಅನ್ನದಾನಿ ವಿರುದ್ಧ ಸೋತಿದ್ದರು. ಈ ಬಾರಿ ಗೆಲುವಿನ ವಿಶೇಷ ತಂತ್ರ ರೂಪಿಸಿದ್ದ ಅವರಿಗೆ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಿ.ಸೋಮಶೇಖರ್‌, ಕಾಂಗ್ರೆಸ್‌ ಸೇರ್ಪಡೆ ಆಗುವ ಮೂಲಕ ಬಲ ತುಂಬಿದರು.

ಅಲ್ಲದೇ ಜೆಡಿಎಸ್‌ನ ವಿಧಾನ ಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಅವರ ಸಹಕಾರ ಗೆಲುವಿಗೆ ಮತ್ತಷ್ಟು ಶಕ್ತಿ ಬಂದಿತು. ಜೆಡಿಎಸ್‌ ಅಭ್ಯರ್ಥಿ ಹಲವು ಸಂದರ್ಭದಲ್ಲಿ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ಟೀಕಿಸುವ ಭರದಲ್ಲಿ 62 ಸಾವಿರ ಮತಗಳಿಂದ ಸೋಲಿಸಿರುವೆ. ಐದು ವರ್ಷಗಳ ಕಾಲ ಮನೆಯಲ್ಲಿ ಇರಿ ಎಂದು ಆಡಿದ್ದ ಮಾತುಗಳಿಗೆ ಇದೀಗ ಕಾಂಗ್ರೆಸ್‌ನ ಪಿ.ಎಂ.ನರೇಂದ್ರಸ್ವಾಮಿ ಅವರು 46846 ಮತಗಳಿಂದ ಸೋಲಿಸಿ ಭರ್ಜರಿಯಾಗಿಯೇ ತಿರುಗೇಟು ನೀಡಿದ್ದಾರೆ. ಆರಂಭದಲ್ಲಿ ಪ್ರಬಲ ಸ್ಪರ್ಧೆಯ ಸುಳಿವು ನೀಡಿದ ಬಿಜೆಪಿ ಅಭ್ಯರ್ಥಿ ಜಿ.ಮುನಿರಾಜು 25116 ಮತ ಪಡೆದು ನಿರಾಸೆ ಮೂಡಿಸಿದ್ದಾರೆ.

ಇನ್ನೂ ಬಿಎಸ್‌ಪಿ ಎಂ.ಕೃಷ್ಣಮೂರ್ತಿ 2277 ಹಾಗೂ ನೋಟಾಗೆ 1256 ಮತಗಳು ಬಿದ್ದಿವೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪಿ.ಎಂ.ನರೇಂದ್ರಸ್ವಾಮಿ ಅಭಿವೃದ್ಧಿಗಾಗಿ ಮತ ನೀಡಿ ಗೆಲ್ಲಿಸಿ ಎಂದು ಪ್ರಚಾರ ನಡೆಸಿದರು. ಆದರೆ, ಜೆಡಿಎಸ್‌ ಅಭ್ಯರ್ಥಿ ಡಾ.ಕೆ.ಅನ್ನದಾನಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಮತ ಹಾಕಿ ಎನ್ನುತ್ತಿದ್ದರು. ಕೊನೆಗೂ ಕ್ಷೇತ್ರದ ಮತದಾರರು ಅಭಿವೃದ್ಧಿ ಜೈ ಎಂದಿದ್ದಾರೆ ಎನ್ನಬಹುದು. ಮತ ಏಣಿಕೆಯ ವೇಳೆ ಎರಡೇ ಸುತ್ತಿನಲ್ಲಿ ಅಲ್ಪ ಹಿನ್ನಡೆಯಲ್ಲಿದ್ದ ಅವರು ನಂತರ ಎಲ್ಲ ಸುತ್ತುಗಳಲ್ಲೂ ನಿರಂತರ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ.

ದಾಖಲೆ: ಕ್ಷೇತ್ರದ ಇತಿಹಾಸದಲ್ಲಿ ಅತಿಹೆಚ್ಚು ಅಂದರೆ 2018ರಲ್ಲಿ 103038 ಮತ ಪಡೆದಿದ್ದ ಡಾ.ಕೆ.ಅನ್ನದಾನಿ ಅವರ ದಾಖಲೆಯನ್ನು ಪಿ. ಎಂ.ನರೇಂದ್ರಸ್ವಾಮಿ 106498 ಮತ ಪಡೆದು ಅಳಿಸಿ ಹಾಕಿದ್ದಾರೆ. ಅಲ್ಲದೇ ಅತಿಹೆಚ್ಚಿನ ಅಂತರದ ಕಳೆದ ಬಾರಿಯ 26670ರ ದಾಖಲೆಯನ್ನು 46846 ಅಂತರದಿಂದ ಸೋಲಿಸಿ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.