2023ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ

ಬಿ ಟೀಂ ಯಾರು ಎಂದು ಜನತೆಯೇ ತೀರ್ಮಾನ ಮಾಡಲಿದ್ದಾರೆ

Team Udayavani, Jun 18, 2022, 6:13 PM IST

2023ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ

ಮಂಡ್ಯ: 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ಪಡೆಯಲಿದ್ದು, ಜೆಡಿಎಸ್‌ ನೊಂದಿಗೆ ಕೈಜೋಡಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಎನ್‌.ಚಲುವರಾಯಸ್ವಾಮಿ ತಿಳಿಸಿದರು.

ರಾಜ್ಯಸಭೆ ಚುನಾವಣೆಯಿಂದಲೇ ಅವರ ಜತೆ ಕೈಜೋಡಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದೇವೆ. ಮುಂದೆಯೂ ಯಾವುದೇ ಕಾರಣಕ್ಕೂ ಜೆಡಿಎಸ್‌ ನೊಂದಿಗೆ ಕೈ ಜೋಡಿಸುವುದಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

ಬಹುಮತ ಬರುತ್ತೆ, ಅನುಮಾನ ಬೇಡ: ಜಿಲ್ಲೆಯಲ್ಲಿ ಕಾಂಗ್ರೆಸ್‌ ಏಳಕ್ಕೆ ಏಳು ಸ್ಥಾನ ಗೆಲ್ಲಲಿದೆ. ಹಳೇ ಮೈಸೂರು ಭಾಗದಲ್ಲಿ ಶೇ.70 ಗೆಲ್ಲುವ ವಿಶ್ವಾಸವಿದೆ. ನೂರಕ್ಕೆ ಸಾವಿರಪಟ್ಟು ಕಾಂಗ್ರೆಸ್‌ ಬಹುಮತ ಬರಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು.

ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ನಿಯೋಜಿತ ಅಭ್ಯರ್ಥಿಗಳ ರೀತಿ ನಾವೆಲ್ಲ ಕೆಲಸ ಮಾಡುತ್ತೇವೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆದಿಯಾಗಿ ನಾವೇ ಅಭ್ಯರ್ಥಿಗಳು ಅಂತಾ ಘೋಷಣೆ ಮಾಡಿಕೊಳ್ಳಲ್ಲ. ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದರು. ಕಾಂಗ್ರೆಸ್‌ ಬಿಜೆಪಿಯ ಬಿ ಟೀಂ ಎಂಬ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಚಲುವರಾಯಸ್ವಾಮಿ,ಈಗಾಗಲೇ ಸಾಕಷ್ಟು ಚುನಾವಣೆಗಳು, ಇತರೆ ಸಮಯದಲ್ಲೂ ಬಿಜೆಪಿ ಜೊತೆ ಜೆಡಿಎಸ್‌ ಕೈಜೋಡಿಸಿದೆ. ಬಿ ಟೀಂ ಯಾರು ಎಂದು ಜನತೆಯೇ ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಧೋರಣೆ ಸರಿಯಲ್ಲ: ಹೈಕಮಾಂಡ್‌ ಆದೇಶ ಪಾಲಿಸುವ ಏಕೈಕ ಪಕ್ಷ ಕಾಂಗ್ರೆಸ್‌. ಚುನಾವಣೆ ಸಮೀಪಿಸುತ್ತಿದ್ದಂತೆ 2015ರ ಪ್ರಕರಣವನ್ನು ಕೇಂದ್ರ ಸರ್ಕಾರ ಕೆದಕುತ್ತಿದೆ. ವರಿಷ್ಠರ ವಿರುದ್ಧ ಇಡಿ ವಿಚಾರಣೆ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ. ಬಿಜೆಪಿ ನಾಯಕರ ರಾಜಕೀಯ ಧೋರಣೆ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜೆಡಿಎಸ್‌ ನಾಯಕರಿಗೂ ಧನ್ಯವಾದ: ವರ್ಷದ ಮುಂಚಿತವಾಗಿ ಅಭ್ಯರ್ಥಿ ಆಯ್ಕೆ ಮಾಡಿದ್ದು, ಗೆಲುವಿಗೆ ಸಹಕಾರಿಯಾಯಿತು. ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿತ ರಾಗಿದ್ದ ಕೀಲಾರ ಜಯರಾಂ ಆ ಪಕ್ಷಕ್ಕಾಗಿ ಕಳೆದ 30 ವರ್ಷದಿಂದ ಕೆಲಸ ಮಾಡಿದ್ದರು. ಅವರಿಗೆ ಟಿಕೆಟ್‌ ನೀಡದ ಕಾರಣ, ಬಂಡೆದ್ದು ಮರಿತಿಬ್ಬೇಗೌಡ ಜೊತೆ ಕಾಂಗ್ರೆಸ್‌ಗೆ ಬೆಂಬಲ ನೀಡಿರುವುದು ಸಹ ಪಕ್ಷದ ಅಭ್ಯರ್ಥಿ ಗೆಲುವಿಗೆ ಕಾರಣವಾಗಿದೆ. ಅವರಿಗೂ ಧನ್ಯವಾದ ತಿಳಿಸುತ್ತೇವೆ ಎಂದರು. ಗೋಷ್ಠಿಯಲ್ಲಿ ಮಾಜಿ
ಸಚಿವ ಪಿ.ಎಂ.ನರೇಂದ್ರಸ್ವಾಮಿ, ವಿಧಾನ ಪರಿಷತ್‌ ಸದಸ್ಯ ದಿನೇಶ್‌ಗೂಳಿಗೌಡ, ಮಾಜಿ ಶಾಸಕ ರಮೇಶ್‌ ಬಾಬು ಬಂಡಿಸಿದ್ದೇಗೌಡ, ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್‌, ಡಾ.ಕೃಷ್ಣ, ರವಿಕುಮಾರ್‌ ಗಣಿಗ ಇದ್ದರು.

ಮತದಾರರಿಗೆ ಮಧು ಜಿ.ಮಾದೇಗೌಡ ಅಭಿನಂದನೆ
ದಕ್ಷಿಣ ಪದವೀಧರ ಕ್ಷೇತ್ರ ವ್ಯಾಪ್ತಿಯ 29 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಇದಕ್ಕೆ ಸಹಕರಿಸದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ವಿಧಾನ ಪರಿಷತ್‌ ನೂತನ ಸದಸ್ಯ ಮಧು ಜಿ.ಮಾದೇಗೌಡ ಹೇಳಿದರು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನನ್ನ ಮೇಲೆ ವಿಶ್ವಾಸ ಇಟ್ಟು ಟಿಕೆಟ್‌ ನೀಡಿದರು.

ಕೆಪಿಸಿಸಿ ಉಪಾಧ್ಯಕ್ಷ ಎನ್‌.ಚಲುವರಾಯಸ್ವಾಮಿ ಚುನಾವಣೆಯಲ್ಲಿ ಯಾವ ರೀತಿ ಕೆಲಸ ಮಾಡಬೇಕು ಎಂಬುದನ್ನು ತೋರಿಸಿಕೊಟ್ಟರು. ಅದೇ ರೀತಿ ಮುಖಂಡರಾದ ಎಂ.ಎಸ್‌.ಆತ್ಮಾನಂದ, ಪಿ.ಎಂ.ನರೇಂದ್ರಸ್ವಾಮಿ, ರಮೇಶ್‌ಬಾಬು ಬಂಡಿಸಿದ್ದೇಗೌಡ, ಡಾ.ರವೀಂದ್ರ, ಚಂದ್ರಶೇಖರ್‌, ಡಾ.ಕೃಷ್ಣ ಸೇರಿ ತಾಲೂಕಿನ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರಿಗೆ ಕೃತಜ್ಞತೆ ತಿಳಿಸುತ್ತೇನೆ ಎಂದರು. ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಜಿಲ್ಲೆಯಲ್ಲಿ ನನ್ನ ಪರ ವ್ಯಾಪಕ ಪ್ರಚಾರ ಮಾಡಿದ್ದಾರೆ. ಜೆಡಿಎಸ್‌ನ ಮರಿತಿಬ್ಬೇಗೌಡ, ಕೀಲಾರ ಜಯರಾಮು ಅವರ ಬೆಂಬಲವು ಸಹ ನನ್ನ ಗೆಲುವಿಗೆ ಸಹಾಯವಾಗಿದೆ. ಭಾರತಿ ಎಜುಕೇಷನ್‌ ಟ್ರಸ್ಟ್‌, ಗಾಂಧಿ ಸ್ಮಾರಕ ಟ್ರಸ್ಟ್‌ ಹಾಗೂ ಎಲ್ಲಾ ಆಡಳಿತ ಮಂಡಳಿಗಳು ನನ್ನ ಪರವಾಗಿ ಪ್ರಚಾರ ಮಾಡಿ ಹಗಲು ರಾತ್ರಿ ಎನ್ನದೇ ಶ್ರಮಿಸಿದ್ದಾರೆ. ಇವರಿಗೂ ಧನ್ಯವಾದ ಸಲ್ಲಿಸುತ್ತೇನೆ. ಕಳೆದ 35 ವರ್ಷಗಳಲ್ಲಿಯೇ ಇತಿಹಾಸ ಸೃಷ್ಟಿಸಿದ ಗೆಲುವಾಗಿದ್ದು, ಇದರಲ್ಲಿ ನನ್ನ ಪಾತ್ರವಿಲ್ಲ. ಬದಲಿಗೆ ಹಿರಿಯ ಮುಖಂಡರು, ಕಾರ್ಯಕರ್ತರ ಕೆಲಸದ ಪರಿಣಾಮ ಗೆಲುವು ಸಿಕ್ಕಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.