Mother of Earth; ಮಂಡ್ಯದಲ್ಲಿ ನಿರ್ಮಾಣ “ಭೂದೇವಿ ಆಧ್ಯಾತ್ಮಿಕ ಕೇಂದ್ರ’


Team Udayavani, Sep 2, 2023, 7:30 AM IST

Mother of Earth; ಮಂಡ್ಯದಲ್ಲಿ ನಿರ್ಮಾಣ “ಭೂದೇವಿ ಆಧ್ಯಾತ್ಮಿಕ ಕೇಂದ್ರ’

ಮಂಡ್ಯ: ಅಮೆರಿಕದ ಪ್ರಸಿದ್ಧ ಸರ್ಜನ್‌ ಜನರಲ್‌ ಹಲ್ಲೇಗೆರೆ ವಿವೇಕ್‌ ಮೂರ್ತಿ ಅವರ ತಂದೆ ಡಾ| ಎಲ್‌.ಎನ್‌.ಮೂರ್ತಿ ಹಲ್ಲೇಗೆರೆ ಅವರ ಸ್ಕೋಪ್‌ ಫೌಂಡೇಷನ್‌ ವತಿಯಿಂದ ಭೂದೇವಿ ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಕೇಂದ್ರ (ಮದರ್‌ ಆಫ್‌ ಅರ್ಥ್)ವನ್ನು ಮಂಡ್ಯದಲ್ಲಿ ನಿರ್ಮಾಣ ಮಾಡಲು ಮುಂದಾಗಿದ್ದು, ಇದರ ಜತೆಗೆ 14 ಅಡಿ ಎತ್ತರದ ಭೂದೇವಿ ಪ್ರತಿಮೆಯನ್ನು ನಿರ್ಮಿಸುವ ಯೋಜನೆಯನ್ನೂ ರೂಪಿಸಲಾಗಿದೆ.

ಏಕತೆಯ ಸಂಕೇತ ಎಂದು ಕರೆಯಲಾಗುವ ಈ ಯೋಜನೆಯು ಪ್ರಪಂಚದಲ್ಲೇ ಮೊದಲನೆಯದಾಗಿದೆ. ಜಗತ್ತಿನ ಯಾವುದೇ ಭಾಗದಿಂದ ಯಾವುದೇ ವ್ಯಕ್ತಿ ಇದರೊಂದಿಗೆ ಸಂಪರ್ಕ ಸಾ ಧಿಸಬಹುದು ಮತ್ತು ಸಂಬಂಧ ಹೊಂದಬಹುದು. ಸುಮಾರು 70 ಕೋ. ರೂ. ವೆಚ್ಚದಲ್ಲಿ ತಮ್ಮ ಸ್ವಗ್ರಾಮದ ಮಂಡ್ಯ ತಾಲೂಕಿನ ಹಲ್ಲೇಗೆರೆ ಗ್ರಾಮದ ತಮ್ಮ 12 ಎಕ್ರೆ ಭೂಮಿಯಲ್ಲಿ ಮದರ್‌ ಆಫ್‌ ಅರ್ಥ್ ನಿರ್ಮಾಣವಾಗಲಿದೆ.

ಏಕಶಿಲೆ ಕಲ್ಲು ಆಗಮನ
14 ಅಡಿ ಎತ್ತರದ ಮದರ್‌ ಆಫ್‌ ಅರ್ಥ್ ಅಂದರೆ ಭೂಮಿತಾಯಿಯ ಪ್ರತಿಮೆಯನ್ನು ಒಂದೇ ಬಂಡೆಯಿಂದ ಪ್ರಸಿದ್ಧ ಶಿಲ್ಪಿಗಳಿಂದ ಕೆತ್ತಲಾಗುತ್ತಿದೆ. ಪ್ರತಿಮೆಯಲ್ಲಿ ನೀರು ಮತ್ತು ಅಲೆಗಳ ಚಿಹ್ನೆಗಳಿರುತ್ತವೆ. ಇದನ್ನು ನೀಲಿ ಗ್ರಾನೈಟ್‌ ಮತ್ತು ವೈಟ್‌ಸ್ಟೋನ್‌ನಿಂದ ನಿರ್ಮಿಸಲಾಗುತ್ತಿದೆ. ಚಿಕ್ಕಬಳ್ಳಾಪುರದ ಕ್ವಾರೆಯಿಂದ ಏಕಶಿಲೆ ಗ್ರಾಮಕ್ಕೆ ಬರಲಿದೆ.

ಖ್ಯಾತ ಶಿಲ್ಪಿಗಳಿಂದ ವಿನ್ಯಾಸ
ಸುಭಾಷ್‌ಚಂದ್ರ ಬೋಸ್‌ ಅವರ ಪ್ರತಿಮೆಯನ್ನು ಕೆತ್ತಿದ್ದ ಖ್ಯಾತ ಶಿಲ್ಪಿ ಯೋಗಿರಾಜ್‌ ಅವರು ಭೂದೇವಿ ಪ್ರತಿಮೆಯನ್ನು ಕೆತ್ತಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ ಈ ಯೋಜನೆಯನ್ನು ಕಾರ್ಯಗತಗೊಳಿಸಲು ಪ್ರಮುಖ ವಾಸ್ತುಶಿಲ್ಪಿಗಳು ಮತ್ತು ವಿನ್ಯಾಸಕಾರರನ್ನೂ ಸಂಪರ್ಕಿಸಿದ್ದು, ಈ ಆಧ್ಯಾತ್ಮಿಕ ಕೇಂದ್ರದಲ್ಲಿ ಸಾಕ್ರಟೀಸ್‌ನಿಂದ ಸ್ವಾಮಿ ವಿವೇಕಾನಂದರವರೆಗಿನ 64 ದಾರ್ಶನಿಕರ ಪ್ರತಿಮೆಗಳು ಇರಲಿವೆ ಎಂದು ಮಾಹಿತಿ ನೀಡಿದ್ದಾರೆ.

ಸುಮಾರು 13 ದೇಶಗಳಲ್ಲಿರುವ ಪ್ರತಿಷ್ಠಾನದ ಸ್ವಯಂ ಸೇವಕರೊಂದಿಗೆ ಹಲ್ಲೇಗೆರೆ ಡಾ| ಮೂರ್ತಿ ಸಭೆ ನಡೆಸಿದ್ದು, ಡಿಸೆಂಬರ್‌ ಅಂತ್ಯ ಹಾಗೂ ಜನವರಿ ಮೊದಲ ವಾರದಲ್ಲಿ ಭೂಮಿಪೂಜೆ ಸಮಾರಂಭ ನಡೆಸಲು ತಯಾರಿ ನಡೆಸಿದ್ದಾರೆ.

ಸೆ.10ರಂದು ವಾಷಿಂಗ್ಟನ್‌ ಡಿಸಿಯಲ್ಲಿ ಉದ್ಘಾಟನೆ
ಮದರ್‌ ಆಫ್‌ ಅರ್ಥ್ ಪರಿಕಲ್ಪನೆಯನ್ನು ಜನಪ್ರಿಯಗೊಳಿಸುವ ವಾಕಥಾನ್‌ ಕಾರ್ಯಕ್ರಮವನ್ನು ಯುಎಸ್‌ನ ಪ್ರಥಮ ಮಹಿಳೆ ಜಿಲ್‌ ಬಿಡೆನ್‌ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಸೆ.10ರಂದು ವಾಷಿಂಗ್ಟನ್‌ ಡಿಸಿಯಲ್ಲಿ ಉದ್ಘಾಟಿಸಲಿದ್ದಾರೆ. ಅಲ್ಲದೆ ವಿದೇಶದ ಬೇರೆ ಬೇರೆ ನಗರಗಳಲ್ಲೂ ಇದೇ ರೀತಿಯ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದು ಡಾ| ಮೂರ್ತಿ ತಿಳಿಸಿದ್ದಾರೆ.

ನಮ್ಮ ಕುಟುಂಬವು ಹಲವಾರು ಚಾರಿಟಿ ಚಟುವಟಿಕೆಗಳಿಗೆ ಹಣ ನೀಡಿದೆ. ಈ ಯೋಜನೆಗೆ ಸುಮಾರು 70 ಕೋಟಿ ರೂ. ಬೇಕಾಗಿರುವುದರಿಂದ ನಾವು ಕೆಲವು ದಾನಿಗಳನ್ನು ಸಂಪರ್ಕಿಸಲು ಮುಂದಾಗಿದ್ದೇವೆ. ಒಟ್ಟಾರೆ ಮಂಡ್ಯ ತಾಲೂಕಿನ ಹಲ್ಲೇಗೆರೆ ಗ್ರಾಮದಲ್ಲಿ ವಿಶ್ವದ ಮೊದಲ ಭೂತಾಯಿ ಪ್ರತಿಮೆ ಹಾಗೂ ಆಧ್ಯಾತ್ಮಿಕ ಕೇಂದ್ರವಾಗುತ್ತಿರುವುದು ಖುಷಿಯ ವಿಚಾರ ಎಂದು ಹನಕೆರೆ ಎಂ.ಶ್ರೀನಿವಾಸ್‌ ಪ್ರತಿಷ್ಠಾನದ ಅಧ್ಯಕ್ಷ ಡಿ.ಶಿವರಾಜು ಹಾಗೂ ಡಾ| ಮೂರ್ತಿ ಅವರ ಸಹೋದರ ವಸಂತ್‌ಕುಮಾರ್‌ ತಿಳಿಸಿದರು.

ಬರಾಕ್‌ ಒಬಾಮಾಗೆ ಆಹ್ವಾನ
ಭೂಮಿಪೂಜೆಗೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ಮತ್ತು ಅವರ ಪತ್ನಿ ಮಿಚೆಲ್‌ ಒಬಾಮಾ ಅವರನ್ನು ಆಹ್ವಾನಿಸಲು ತಯಾರಿ ನಡೆಸಿದ್ದಾರೆ. ಎಂಟು ಎಕ್ರೆ ಜಾಗದಲ್ಲಿ ನಿರ್ಮಾಣವಾಗಲಿರುವ ಯೋಗ ಮತ್ತು ಧ್ಯಾನ ಸಾತ್ವಿಕ ಕೇಂದ್ರದ ಶಂಕುಸ್ಥಾಪನೆಗೆ ಟಿಬೆಟಿಯನ್‌ ಆಧ್ಯಾತ್ಮಿಕ ಗುರು ದಲೈಲಾಮಾ ಅವರನ್ನು ಆಹ್ವಾನಿಸಲು ಪ್ರತಿಷ್ಠಾನವು ಯೋಜನೆ ರೂಪಿಸಿದೆ ಎಂದು ಕರ್ನಾಟಕ ಸಂಘದ ಪ್ರೊ| ಜಯಪ್ರಕಾಶ್‌ ಗೌಡ ತಿಳಿಸಿದ್ದಾರೆ.

– ಎಚ್‌.ಶಿವರಾಜು

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.