ಸಚಿವ ಅಶೋಕ್‌ ವಿರುದ್ಧ ಮುಂದುವರಿದ ಅಭಿಯಾನ


Team Udayavani, Jan 28, 2023, 8:22 PM IST

ಸಚಿವ ಅಶೋಕ್‌ ವಿರುದ್ಧ ಮುಂದುವರಿದ ಅಭಿಯಾನ

ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಅಶೋಕ ವಿರುದ್ಧ ಮೊದಲು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಗೋ ಬ್ಯಾಕ್‌ ಚಳವಳಿ ಆರಂಭಿಸಿದ್ದ ಬಿಜೆಪಿ ಕಾರ್ಯಕರ್ತರು, ಈಗ ನಗರದ ಪ್ರಮುಖ ರಸ್ತೆಗಳ ಗೋಡೆಗಳ ಮೇಲೆ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಗೋಬ್ಯಾಕ್‌ ಜತೆಗೆ ಬಾಯ್ಕಟ್‌ ಅಭಿಯಾನ ನಡೆಸಿದ್ದಾರೆ.

ನಗರದ ಹೊರವಲಯದ ಉಮ್ಮಡಹಳ್ಳಿ ಗೇಟ್‌ನ ಬೆಂಗಳೂರು-ಮೈಸೂರು ಹೆದ್ದಾರಿಯ ಕೆಳಸೇತುವೆಯ ಗೋಡೆಗಳ ಮೇಲೆ ಗೋಬ್ಯಾಕ್‌ ಅಶೋಕ್‌, ಬಾಯ್ಕಟ್‌ ಅಶೋಕ್‌ ಎಂದು ಬರೆಯುವ ಮೂಲಕ ಅಭಿಯಾನ ಮುಂದುವರಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಸಚಿವ ಗೋಪಾಲಯ್ಯ ಅವರನ್ನು ಬದಲಿಸಿ ಆರ್‌.ಅಶೋಕ್‌ ಹೆಗಲಿಗೆ ವಹಿಸಿದ ದಿನದಿಂದಲೇ ಜಿಲ್ಲೆಯ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಆದ್ದರಿಂದ ಕಳೆದ ಮೂರು ದಿನಗಳಿಂದ ಗೋಬ್ಯಾಕ್‌, ಬಾಯ್ಕಟ್‌ ಅಭಿಯಾನ ನಡೆಯುತ್ತಿದೆ. ಈ ಹಿಂದೆ ಉಸ್ತುವಾರಿಯಾಗಿದ್ದ ಸಂದರ್ಭದಲ್ಲಿ ಆರ್‌.ಅಶೋಕ್‌ ಜೆಡಿಎಸ್‌ ಜತೆ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಜಿಲ್ಲೆಯಲ್ಲಿ ಬಿಜೆಪಿ ಬೆಳೆಯಲು ಸಾಧ್ಯವಾಗಲಿಲ್ಲ.

ಈಗ ಚೇತರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಮತ್ತೆ ಅವರನ್ನೇ ನೇಮಕ ಮಾಡಿರುವುದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಸಚಿವ ಅಶೋಕ್‌ ವಿರುದ್ಧ ಸ್ವಪಕ್ಷದ ಕಾರ್ಯಕರ್ತರೇ ನಡೆಸುತ್ತಿರುವ ಗೋಬ್ಯಾಕ್‌ ಹಾಗೂ ಬಾಯ್ಕಟ್‌ ಚಳವಳಿಯ ವರದಿ ಹೈಕಮಾಂಡ್‌ ತಲುಪಿದೆ ಎನ್ನಲಾಗುತ್ತಿದೆ.

ಆರ್‌. ಅಶೋಕ್‌ ಅವರು ಬಿಜೆಪಿ ಹಿರಿಯ ನಾಯಕರು, ಮಂಡ್ಯಕ್ಕೆ ಅವರು ಇದೇ ಮೊದಲ ಬಾರಿಗೆ ಹೋಗುತ್ತಿಲ್ಲ, ಅವರ ನಾಯಕತ್ವದಿಂದ ಮಂಡ್ಯ ಜಿಲ್ಲೆಯಲ್ಲಿ ಮೂರರಿಂದ ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಲಿದ್ದು, ಇದನ್ನು ಸಹಿಸಲಾರದೆ ಕೆಲವರು ಷಡ್ಯಂತ್ರ ರೂಪಿಸಿದ್ದಾರೆ. ಷಡ್ಯಂತ್ರ ರೂಪಿಸಿದವರು ಯಾರು ಎಂಬ ಬಗ್ಗೆ ಈಗಾಗಲೇ ಹಲವು ಮಾಹಿತಿ ಲಭ್ಯವಾಗಿದೆ.
-ಡಾ.ಸುಧಾಕರ್‌, ಸಚಿವ

ಟಾಪ್ ನ್ಯೂಸ್

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

tdy-17

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

1-wqewqe

ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಕೇಸ್

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-13

ಶ್ರೀರಂಗಪಟ್ಟಣ ಕೈನಲ್ಲಿ ಭುಗಿಲೆದ್ದ ಭಿನ್ನಮತ

ಮುಂದಿನ ಚುನಾವಣೆಗೆ ಕೈ ಬೆಂಬಲಿಸಿದರೆ ಹೊಸ ಇತಿಹಾಸ ಸೃಷ್ಟಿ: ಡಿ.ಕೆ. ಶಿವಕುಮಾರ್‌

ಮುಂದಿನ ಚುನಾವಣೆಗೆ ಕೈ ಬೆಂಬಲಿಸಿದರೆ ಹೊಸ ಇತಿಹಾಸ ಸೃಷ್ಟಿ: ಡಿ.ಕೆ. ಶಿವಕುಮಾರ್‌

tdy-14

ಜನರಿಗೆ ಪರಿಸರ, ಜಲ ಜಾಗೃತಿ ಅಗತ್ಯ

TDY-12

ಜೆಡಿಎಸ್‌ ಭದ್ರಕೋಟೆಗೆ ಮೂರು ಬಾಗಿಲು

ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ?

ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

tdy-17

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ