ತಾಳ್ಮೆಯಿಂದ ಸಹಕರಿಸಿ: ಪುಟ್ಟ ರಾಜು
Team Udayavani, May 8, 2020, 5:45 PM IST
ಪಾಂಡವಪುರ: ಕೋವಿಡ್ 19 ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಸವಿತಾ ಸಮುದಾಯ, ಆಟೋ ಚಾಲಕರು ಹಾಗೂ ಛಾಯಾಗ್ರಾಹಕರಿಗೆ ವೈಯಕ್ತಿಕವಾಗಿ ಪಡಿತರ ಕಿಟ್ಗಳನ್ನು ವಿತರಿಸಲಾಗುವುದು ಎಂದು ಶಾಸಕ ಪುಟ್ಟರಾಜು ಹೇಳಿದರು.
ಸವಿತಾ ಸಮುದಾಯದ ಮುಖಂಡರ ಸಭೆ ಬಳಿಕ ಮಾತನಾಡಿದ ಅವರು, ಲಾಕ್ಡೌನ್ನಿಂದಾಗಿ ಸವಿತಾ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ. ಹಾಗಾಗಿ ನಮಗೆ ಕ್ಷೌರಿಕ ಅಂಗಡಿಯ ಬಾಗಿಲು ತೆಗೆಯಲು ಅವಕಾಶ ಮಾಡಿಕೊಡಬೇಕು ಎಂದು ಸವಿತಾ ಸಮುದಾಯದ ತಾಲೂಕು ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಶಾಸಕರಲ್ಲಿ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಲಾಕ್ಡೌನ್ ನಿಂದಾಗಿ ಸವಿತಾ ಸಮುದಾಯ ಸೇರಿದಂತೆ ಬಡವರೆಲ್ಲರೂ ಸಮಸ್ಯೆಗೆ ಸಿಲುಕಿದ್ದಾರೆ. ಇದೀಗ ಬಾಗಿಲು ತೆಗೆಯಲು ಅವಕಾಶ ಮಾಡಿಕೊಟ್ಟರೆ ಇದರಿಂದ ಸಮಸ್ಯೆಯಾಗಬಹುದು. ಇಷ್ಟು ದಿನಗಳ ಕಾಲ ತಾಳ್ಮೆಯಿಂದ ಇದ್ದೀರಿ, ಇನ್ನೂ ಸ್ವಲ್ಪದಿನ ಸಹಕರಿಸುವಂತೆ ಹೇಳಿದರು. ಸವಿತಾ ಸಮುದಾಯದ ಎಷ್ಟು ಕುಟುಂಬಗಳಿವೆ ಗುರುತಿಸಿ ಮಾಹಿತಿ ನೀಡುವಂತೆ ತಿಳಿಸಿದ ಶಾಸಕರು, ತಾಲೂಕಿನಲ್ಲಿರುವ ಎಲ್ಲಾ ನೋಂದಾಯಿತ ಆಟೋ ಚಾಲಕರಿಗೆ ಹಾಗೂ ಛಾಯಾಗ್ರಾಹಕರಿಗೂ ಪಡಿತರ ಕಿಟ್ಗಳನ್ನು ವಿತರಿಸಲಾಗುವುದು ಎಂದು ಹೇಳಿದರು.
ಮುಂಬೈನಿಂದ ನುಸುಳಿ ಬರುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಅವುಗಳ ಬಗ್ಗೆ ಅಧಿಕಾರಿಗಳು ಕ್ರಮ ವಹಿಸಬೇಕು. ತಾಲೂಕಿನ ಬಿ.ಕೊಡಗಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಾನು ಈ ಹಿಂದೆ ಗ್ರಾಮದ ಎಲ್ಲಾ ಕುಟುಂಬಗಳಿಗೆ ಉಚಿತ ಕಿಟ್ ಗಳನ್ನು ವಿತರಣೆ ಮಾಡಿದ್ದೇನೆ. ಗ್ರಾಮ ಸೀಲ್ಡೌನ್ ಆಗಿರುವುದರಿಂದ ಮತ್ತೂಂದು ಬಾರಿ ಗ್ರಾಮಕ್ಕೆ ಪಡಿತರ ಕಿಟ್ಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ತಹಶೀಲ್ದಾರ್ ಪ್ರಮೋದ್, ತಾಪಂ ಇಒ ಮಹೇಶ್, ಸವಿತಾ ಸಮುದಾಯದ ತಾಲೂಕು ಅಧ್ಯಕ್ಷ ತಿಮ್ಮರಾಜು, ಕಾರ್ಯದರ್ಶಿ ವೆಂಕಟೇಶ್, ಮುಖಂಡ ಜಗನಾಥ್, ಸ್ವಾಮಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ
Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
MUST WATCH
ಹೊಸ ಸೇರ್ಪಡೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್