ಭ್ರಷ್ಟಾಚಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ


Team Udayavani, May 9, 2019, 3:47 PM IST

man-1

ಮದ್ದೂರು: ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಕೆಲಸಗಳಿಗೆ ಅನಗತ್ಯ ವಿಳಂಬ, ನಿರ್ಲಕ್ಷ್ಯ ತೋರಿದಲ್ಲಿ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳಿಗೆ ದೂರು ನೀಡಬಹುದೆಂದು ದಕ್ಷಿಣ ವಲಯ ಎಸಿಬಿ ಪೊಲೀಸ್‌ ವರಿಷ್ಠಾಧಿಕಾರಿ ರಶ್ಮಿ ತಿಳಿಸಿದರು.

ಪಟ್ಟಣದಲ್ಲಿ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳು ಸಾರ್ವಜನಿಕರ ಕುಂದು ಕೊರತೆಗಳ ದೂರು ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿಗಳು ರೈತರು ಹಾಗೂ ಸಾರ್ವಜ ನಿಕರಿಂದ ಲಂಚ ಕೇಳಿದಲ್ಲಿ ಎಸಿಬಿಗೆ ದೂರು ನೀಡಬಹುದು. ಅಧಿಕಾರಿಗಳು ಸಮರ್ಪಕ ವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಇಲಾಖೆಗಳಲ್ಲಿ ಯಾವುದೇ ಭ್ರಷ್ಟಾಚಾರ ನಡೆಯದಂತೆ ಅಗತ್ಯ ಕ್ರಮ ವಹಿಸಬೇಕೆಂದರು.

ಲಂಚ ಆರೋಪ: ಕೆಲ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ ಕ್ರಮ ಕೈಗೊಳ್ಳುವ ಜತೆಗೆ ಅಧಿಕಾರಿಗಳು ಸರ್ಕಾರಿ ಸೌಲಭ್ಯಗಳನ್ನು ಅರ್ಹ ಫ‌ಲಾನುಭವಿಗಳಿಗೆ ಸಮರ್ಪಕವಾಗಿ ವಿತರಿಸುವ ಜತೆಗೆ ಯಾವುದೇ ಅಕ್ರಮ ವೆಸಗದಂತೆ ಸೂಚಿಸಿದರು.

ಕಳೆದ ಸಾಲಿನಲ್ಲಿ 153 ಹಾಗೂ ಪ್ರಸಕ್ತ ಸಾಲಿನಲ್ಲಿ 50 ದೂರು ಸಾರ್ವಜನಿಕರಿಂದ ಬಂದಿದ್ದು, ಈ ಪೈಕಿ 195 ಪ್ರಕರಣಗಳನ್ನು ಇತ್ಯರ್ಥ ಪಡಿಸಿದ್ದೇವೆ. ಬಾಕಿ ಉಳಿದಿರುವ 8 ಪ್ರಕರಣಗಳ ಸಂಬಂದ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.

ಗೋಮಾಳ ಒತ್ತುವರಿ: ತಾಲೂಕಿನ ಮೆಣ ಸಗೆರೆ ಜಯರಾಮು ಸರ್ಕಾರಿ ಗೋಮಾಳ ವನ್ನು ಅಕ್ರಮವಾಗಿ ಒತ್ತುವರಿ ಮಾಡಿ ಕೊಂಡಿದ್ದು ತಹಶೀಲ್ದಾರ್‌ರಿಗೆ ಹಲ ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ದೂರು ನೀಡಿದರು.

ಅರ್ಜಿ ಸ್ವೀಕರಿಸಿದ ಎಸಿಬಿ ಅಧಿಕಾರಿ ರಶ್ಮಿ, ಅರ್ಜಿ ಪರಿಶೀಲಿಸಿ ಕೂಡಲೇ ಒತ್ತುವರಿ ಜಾಗ ತೆರವುಗೊಳಿಸಿ ಜನ ಜಾನುವಾರುಗಳು, ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮ ವಹಿಸುವಂತೆ ಕಂದಾಯ ಅಧಿಕಾರಿಗೆ ಸೂಚಿಸಿದರು.

ತ್ಯಾಜ್ಯ ನೀರು ರಸ್ತೆಗೆ: ಮದ್ದೂರು ಪುರಸಭೆ ವ್ಯಾಪ್ತಿಯ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಯುಜಿಡಿ ಸಂಪರ್ಕದ ತ್ಯಾಜ್ಯ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ಸಾರ್ವಜನಿಕರ ಸಂಚಾರಕ್ಕೆ ಅನಾನುಕೂಲವಾಗಿದೆ. ಪುರಸಭೆ ಅಧಿಕಾರಿಗಳಿಗೆ 9 ತಿಂಗಳಿಂದಲೂ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯ ನಿವಾಸಿ ನಾರಾಯಣ್‌ ದೂರು ನೀಡಿದರು. ಆರೋಗ್ಯಾಧಿಕಾರಿ ಶಿವಕುಮಾರ್‌ರನ್ನು ತರಾಟೆಗೆ ತೆಗೆದುಕೊಂಡ ಎಸಿಬಿ ಡಿವೈಎಸ್‌ಪಿ ಮಂಜುನಾಥ್‌, 9 ತಿಂಗಳಿಂದಲೂ ಯುಜಿಡಿ ಸಂಪರ್ಕ ದುರಸ್ತಿ ಗೊಳಿಸದೆ ನಿರ್ಲಕ್ಷ್ಯ ವಹಿಸಿದ್ದೇಕೆ? ಒಂದು ವಾರದೊಳಗಾಗಿ ಅಗತ್ಯ ಕ್ರಮ ವಹಿಸದಿದ್ದಲ್ಲಿ ಮೇಲಧಿಕಾರಿಗಳಿಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪುರಸಭಾ ಅಧಿಕಾರಿಗಳಿಗೆ ಎಚ್ಚರಿಸಿದರು.

ಅಕ್ರಮ ಖಾತೆ: ಮದ್ದೂರು ನಿವಾಸಿ ಯೊಬ್ಬರಿಗೆ ಪುರಸಭೆ ಮುಖ್ಯಾಧಿಕಾರಿ ಮಹೇಶ್‌ ನಿವೇಶನಕ್ಕೆ ಅಕ್ರಮ ಖಾತೆ ಮಾಡಿ ಕೊಟ್ಟಿದ್ದು ಅವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಪುರಸಭೆ ಸದಸ್ಯೆ ಪ್ರಿಯಾಂಕ ಅಪ್ಪುಗೌಡ ದೂರು ನೀಡಿದರು.

ಅಕ್ರಮ ಖಾತೆ ಮಾಡಿಕೊಟ್ಟಿರುವ ಬಗ್ಗೆ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆ ದಿದ್ದು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಾಧಿಕಾರಿ ಮಹೇಶ್‌ ಬೇರೆಡೆಗೆ ವರ್ಗಾ ವಣೆಗೊಂಡಿದ್ದಾರೆ. ಈಗಾಗಲೇ ಈ ಸಂಬಂಧ ಮಾಹಿತಿ ಪಡೆಯುತ್ತಿರುವುದಾಗಿ ತಿಳಿಸಿದರು.

ಎಸಿಬಿ ಡಿವೈಎಸ್‌ಪಿ ಮಂಜುನಾಥ, ವೃತ್ತ ನಿರೀಕ್ಷಕ ಪ್ರದೀಪ್‌ ಇತರರಿದ್ದರು.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.