ಚಾಚುತ್ತಿರುವ ಕೊರೊನಾ ಕಬಂಧಬಾಹು


Team Udayavani, Jul 31, 2022, 4:42 PM IST

tdy-13

ಮಂಡ್ಯ: ಮೊದಲ ಹಾಗೂ ಎರಡನೇ ಅಲೆಯಲ್ಲಿ ಸಾಕಷ್ಟು ಸಾವು-ನೋವಿಗೆ ಕಾರಣವಾಗಿದ್ದ ಕೊರೊನಾ ಸೋಂಕು ಮತ್ತೆ ಜಿಲ್ಲೆಯಲ್ಲಿ ನಿಧಾನವಾಗಿ ತನ್ನ ಕಬಂಧ ಬಾಹು ಚಾಚುತ್ತಿದೆ.

ಕಳೆದ ಒಂದು ವಾರದಿಂದ ಏರುಗತಿಯಲ್ಲಿ ಸೋಂಕು ಹೆಚ್ಚಾಗುತ್ತಿದೆ. ಜು.12ರವರೆಗೂ ಯಾವುದೇ ಸೋಂಕುಕಂಡು ಬಂದಿರಲಿಲ್ಲ. ನಂತರ ನಿಧಾನವಾಗಿಯೇಒಂದೊಂದು ಪ್ರಕರಣ ದಾಖಲಾಗುತ್ತಿದೆ.

ಸೋಂಕಿತರಿಗೆ ಹೋಂ ಐಸೋಲೇಷನ್‌: ಸೋಂಕು ಕಂಡು ಬಂದವರಿಗೆ ಹೋಂ ಐಸೋಲೇಷನ್‌ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರಿಗೆ ಯಾವುದೇ ಲಕ್ಷಣ ಕಂಡು ಬರದಿದ್ದರೆ ಅವರನ್ನು ಮನೆಯಲ್ಲಿಯೇ ಐಸೋಲೇಷನ್‌ ಮಾಡಿ ಔಷಧ ವಿತರಿಸಲಾಗುತ್ತಿದೆ.

101410 ಪ್ರಕರಣ: ಮೊದಲ ಹಾಗೂ ಎರಡನೇ ಅಲೆಯಲ್ಲಿ 1,01,410 ಪ್ರಕರಣ ದಾಖಲಾಗಿವೆ. ಮಂಡ್ಯ 29625, ಮದ್ದೂರು 13247, ಮಳವಳ್ಳಿ 11675,ಪಾಂಡವಪುರ 10913, ಶ್ರೀರಂಗಪಟ್ಟಣ 11496, ಕೆ. ಆರ್‌.ಪೇಟೆ 11804, ನಾಗಮಂಗಲ 11660 ಹಾಗೂಹೊರ ಜಿಲ್ಲೆಯ 990 ಪ್ರಕರಣ ದಾಖಲಾಗಿದ್ದವು.

100623 ಗುಣಮುಖ: ಮಂಡ್ಯ 29391, ಮದ್ದೂರು 13143, ಮಳವಳ್ಳಿ 11569, ಪಾಂಡವಪುರ 10857, ಶ್ರೀರಂಗಪಟ್ಟಣ 11429, ಕೆ.ಆರ್‌.ಪೇಟೆ 11703, ನಾಗಮಂಗಲ 11575 ಹಾಗೂ ಹೊರ ಜಿಲ್ಲೆಯ956 ಮಂದಿ ಸೇರಿ ಒಟ್ಟು 1,00,623 ಮಂದಿ ಗುಣಮುಖರಾಗಿದ್ದಾರೆ.

705 ಮಂದಿ ಸಾವು: ಮೊದಲ ಹಾಗೂ ಎರಡನೇ ಅಲೆಯಲ್ಲಿ ಕೊರೊನಾ ಸೋಂಕಿಗೆ ಇದುವರೆಗೂ ಜಿಲ್ಲೆಯಲ್ಲಿ 705 ಮಂದಿ ಮೃತಪಟ್ಟಿದ್ದಾರೆ.ಮೊದಲ ಅಲೆಯಲ್ಲಿ 150ಮಂದಿ ಸಾವನ್ನಪ್ಪಿದ್ದರೆ, 2ನೇಅಲೆಯಲ್ಲಿ ಅತಿ ಹೆಚ್ಚು ಸೋಂಕಿಗೆ ಬಲಿಯಾದರು. ಪ್ರಸ್ತುತ ಸಂದರ್ಭದಲ್ಲಿ ಯಾವುದೇ ಸಾವು ಸಂಭವಿಸಿಲ್ಲದಿರುವುದು ಸಮಾಧಾನಕರವಾಗಿದೆ.

ಶೇ.100 ಕೊರೊನಾ ಲಸಿಕೆ: ಜಿಲ್ಲಾದ್ಯಂತ ಮೊದಲ ಹಾಗೂ ಎರಡನೇ ಕೊರೊನಾ ಲಸಿಕೆ ಶೇ.100ರಷ್ಟು ನೀಡಲಾಗಿದೆ. ಪ್ರಸ್ತುತ 18 ವರ್ಷ ಮೇಲ್ಪಟ್ಟ ಎಲ್ಲರಿಗೂಬೂಸ್ಟರ್‌ ಡೋಸ್‌ ನೀಡಲಾಗಿದೆ. ಇದು ಜಿಲ್ಲಾದ್ಯಂತ ಶೇ.6ರಷ್ಟಿದೆ. ಹಿರಿಯ ನಾಗರಿಕರಿಗೆ ಬೂಸ್ಟರ್‌ ಡೋಸ್‌ ಶೇ.60ರಷ್ಟಾಗಿದೆ. ಪ್ರಸ್ತುತ 75 ದಿನ ಬೂಸ್ಟರ್‌ ಡೋಸ್‌ ನೀಡುವ ಕಾರ್ಯಕ್ರಮ ನಡೆಯುತ್ತಿದೆ.

80 ಸಕ್ರಿಯ ಪ್ರಕರಣ :

ಈವರೆಗೆ 80 ಸಕ್ರಿಯ ಪ್ರಕರಣಗಳಿವೆ. ಇದರಲ್ಲಿ ಮಂಡ್ಯ 19, ಮದ್ದೂರು, ಮಳವಳ್ಳಿ ತಲಾ 15, ಪಾಂಡವಪುರ 9, ಶ್ರೀರಂಗಪಟ್ಟಣ 17, ಕೆ.ಆರ್‌.ಪೇಟೆ 2, ನಾಗಮಂಗಲ 3 ಪ್ರಕರಣಗಳಿವೆ. ಇದರಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆಯೇ ಮೊದಲ ಹಾಗೂ ಎರಡನೇ ಅಲೆಯಲ್ಲಿ ಒಟ್ಟು 16,76,493ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ12,98,177 ಮಂದಿಗೆ ಆರ್‌ಟಿಪಿಸಿಆರ್‌ ಹಾಗೂ 3,78,316 ಮಂದಿಗೆ ರ್ಯಾಪಿಡ್‌ ಪರೀಕ್ಷೆ ನಡೆಸಲಾಗಿದೆ.

ಚಳಿ ಜ್ವರಕ್ಕೆ ನಲುಗಿದ ಸಾರ್ವಜನಿಕರು:

ಕಳೆದ ಒಂದು ತಿಂಗಳಿನಿಂದ ಜಿಲ್ಲಾದ್ಯಂತ ಮಳೆ ಸುರಿಯುತ್ತಿರುವ ಹಿನ್ನೆಲೆ ಚಳಿ, ಜ್ವರ, ಕೆಮ್ಮು, ನೆಗಡಿ ಹಾಗೂ ಮೈಕೈ ನೋವು ಹೆಚ್ಚಾಗಿದೆ. ನಗರದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಕ್ಲಿನಿಕ್‌ಗಳು ರೋಗಿಗಳಿಂದ ತುಂಬಿವೆ. ಪ್ರತಿದಿನ ಮೋಡ ಕವಿದ ವಾತಾವರಣವಿದ್ದು, ಸಂಜೆಯಾಗುತ್ತಲೇ ಸೋನೆ ಮಳೆಯಾಗುತ್ತಿದೆ. ಅಲ್ಲದೆ, ಒಂದು ದಿನ ಬಿಡುವು ನೀಡಿದರೆ ಮತ್ತೆ ಒಂದು ವಾರ ಸೂರ್ಯನ ಬೆಳಕೆ ಇಲ್ಲದಂತಾಗಿದೆ. ಇದರಿಂದ ಶೀತಗಾಳಿ ಬೀಸುತ್ತಿದೆ. ಇದು ಜ್ವರ, ನೆಗಡಿ, ಕೆಮ್ಮು ಬರಲು ಕಾರಣವಾಗುತ್ತಿದೆ.

ಡೆಂಗ್ಯೂ, ಚಿಕೂನ್‌ಗುನ್ಯಾಕ್ಕೆ ದಾರಿ  :

ಶೀತಗಾಳಿ ವಾತಾವರಣದಿಂದ ಸೊಳ್ಳೆಗಳ ಉತ್ಪತ್ತಿಯೂ ಹೆಚ್ಚಾಗಿದೆ. ಇದು ಡೆಂಗ್ಯೂ, ಚಿಕೂನ್‌ಗುನ್ಯಾ ಬರಲುಕಾರಣವಾಗಬಹುದು. ಆದ್ದರಿಂದ ಸಾರ್ವಜನಿಕರು ಜ್ವರ, ಶೀತ, ಕೆಮ್ಮು, ನೆಗಡಿ ಬಂದರೆ ಕೂಡಲೇ ವೈದ್ಯರನ್ನು ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಮೆಡಿಕಲ್‌ ಸ್ಟೋರ್‌ನಲ್ಲಿ ಮಾತ್ರೆ ಪಡೆದು ಸುಮ್ಮನಾಗಬಾರದು. ಅಲ್ಲದೆ, ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಬೂಸ್ಟರ್‌ ಡೋಸ್‌ ಪಡೆಯಬೇಕು. 75 ದಿನಗಳಅಭಿಯಾನ ನಡೆಯುತ್ತಿದೆ. ಸಾರ್ವಜನಿಕರು ಹತ್ತಿರದ ಸರ್ಕಾರಿ ಆಸ್ಪತ್ರೆಗಳಲ್ಲಿ ಬೂಸ್ಟರ್‌ ಡೋಸ್‌ ಪಡೆಯಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಟಿ.ಎನ್‌.ಧನಂಜಯ ತಿಳಿಸಿದರು.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.