8 ಸಾವಿರ ಗಡಿದಾಟಿದ ಕೋವಿಡ್ ಸೋಂಕಿತರು
Team Udayavani, Sep 13, 2020, 3:45 PM IST
ಮಂಡ್ಯ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 8 ಸಾವಿರ ಗಡಿದಾಟಿದೆ. ಶನಿವಾರ 192 ಮಂದಿಗೆ ಕೋವಿಡ್ ದೃಢವಾಗಿದೆ. 171 ಮಂದಿ ಸೋಂಕಿನಿಂದ ಮುಕ್ತರಾಗಿ ಬಿಡುಗಡೆಯಾಗಿದ್ದಾರೆ. ಆದರೆ, ಶನಿವಾರ ಯಾವುದೇ ಮರಣ ಪ್ರಕರಣಗಳು ದಾಖಲಾಗಿಲ್ಲ.
ಮಂಡ್ಯ 86, ಮದ್ದೂರು 29, ಮಳವಳ್ಳಿ 2, ಪಾಂಡವಪುರ 31, ಶ್ರೀರಂಗಪಟ್ಟಣ 15, ಕೆ.ಆರ್ .ಪೇಟೆ 21, ನಾಗಮಂಗಲ 7 ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯಲ್ಲಿ 8014 ಸೋಂಕಿನ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಐಸೋಲೇಷನ್ನಲ್ಲಿ 524, ಖಾಸಗಿ ಆಸ್ಪತ್ರೆಗಳ ಐಸೋಲೇಷನ್ನಲ್ಲಿ 116, ಕೋವಿಡ್ ಕೇರ್ ಸೆಂಟರ್ಗಳಲ್ಲಿ 470 ಹಾಗೂ ಹೋಂ ಐಸೋಲೇಷನ್ನಲ್ಲಿ 1097 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1187 ಮಂದಿಗೆ ಪರೀಕ್ಷೆ: ಜಿಲ್ಲೆಯಲ್ಲಿ ಶನಿವಾರ 1187 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. 786 ರ್ಯಾಪಿಡ್ ಹಾಗೂ 401 ಆರ್ಟಿಪಿಸಿಆರ್ ಪರೀಕ್ಷೆ ನಡೆಸಲಾಗಿತ್ತು.
171 ಸೋಂಕು ಮುಕ್ತ: ಶನಿವಾರ 171 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಮಂಡ್ಯ 63, ಮದ್ದೂರು 16, ಮಳವಳ್ಳಿ, ಪಾಂಡವಪುರ ತಲಾ 19, ಶ್ರೀರಂಗಪಟ್ಟಣ 12, ಕೆ.ಆರ್.ಪೇಟೆ 31, ನಾಗಮಂಗಲ 7 ಹಾಗೂ ಹೊರ ಜಿಲ್ಲೆಯ4 ಮಂದಿ ಸೇರಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ 5720 ಮಂದಿ ಗುಣಮುಖರಾಗಿದ್ದು, 2207 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ