ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹೆಚ್ಚಳ


Team Udayavani, Jan 19, 2022, 1:08 PM IST

ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹೆಚ್ಚಳ

ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆದಿದ್ದು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೂ ಹರಡುತ್ತಿದೆ. ಇದರಿಂದ ಪೋಷಕರಿಗೆ ಆತಂಕ ಹೆಚ್ಚಾಗುವಂತೆ ಮಾಡಿದೆ.

ಈಗಾಗಲೇ 1ರಿಂದ 7ನೇ ತರಗತಿ ವರೆಗಿನ ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಇನ್ನುಳಿದಂತೆಪ್ರೌಢ ಶಾಲೆ ಹಾಗೂ ಕಾಲೇಜುಗಳಲ್ಲಿ ಕೋವಿಡ್‌ನಿಯಮಗಳನ್ನು ಕೈಗೊಂಡು ವಿದ್ಯಾರ್ಥಿಗಳಿಗೆ ತರಗ ತಿ ಗಳು ನಡೆಯುತ್ತಿದ್ದರೂ ಸೋಂಕು ಕಾಣಿಸಿಕೊಳ್ಳುತ್ತಿದೆ.

322 ವಿದ್ಯಾರ್ಥಿಗಳಿಗೆ ಸೋಂಕು: ಇದುವರೆಗೂಜಿಲ್ಲೆಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಸುಮಾರು 322 ಮಂದಿ ವಿದ್ಯಾರ್ಥಿಗಳಿಗೆಸೋಂಕು ಕಾಣಿಸಿಕೊಂಡಿದೆ. ಈಗಾಗಲೇ ಕೆಲವು ವಿದ್ಯಾರ್ಥಿಗಳು ಗುಣಮುಖರಾಗಿದ್ದು, ಇನ್ನೂ ಕೆಲವು ವಿದ್ಯಾರ್ಥಿಗಳು ಚೇತರಿಸಿಕೊಳ್ಳುವ ಹಂತದಲ್ಲಿದ್ದಾರೆ. 87 ಶಿಕ್ಷಕರಿಗೆ ಕೋವಿಡ್‌: ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಸುಮಾರು 87 ಶಿಕ್ಷಕರಿಗೆ ಕೊರೊನಾ ಆವರಿಸಿದೆ. ಇದರಿಂದ ಶಾಲಾ ಶಿಕ್ಷಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರು ಚೇತರಿಸಿಕೊಂಡಿದ್ದಾರೆ.

12 ಮಂದಿ ಉಪನ್ಯಾಸಕರು: ಕಾಲೇಜುಗಳಲ್ಲೂಸೋಂಕು ಕಾಣಿಸಿಕೊಳ್ಳುತ್ತಿದೆ. ಈಗಾಗಲೇಜಿಲ್ಲೆಯಲ್ಲಿ 12 ಮಂದಿ ಉಪನ್ಯಾಸಕರು ಹಾಗೂಅಧ್ಯಾಪಕರಿಗೆ ಸೋಂಕು ಕಾಣಿಸಿಕೊಂಡಿದೆ.ವಿದ್ಯಾರ್ಥಿಗಳಿಗೂ ಸೋಂಕು: ಕಾಲೇಜಿನ ವಿದ್ಯಾರ್ಥಿಗಳಿಗೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಜಿಲ್ಲೆಯ ಕೆಲವು ಕಾಲೇಜುಗಳಲ್ಲಿ 1ರಿಂದ 3 ವಿದ್ಯಾರ್ಥಿಗಳಿಗೆಸೋಂಕು ದೃಢಪಟ್ಟಿದೆ. ಇದುವರೆಗೂ ಕಾಲೇಜಿನ12 ವಿದ್ಯಾರ್ಥಿಗಳಿಗೆ ಸೋಂಕು ಪತ್ತೆಯಾಗಿದೆ.

ಲಸಿಕೆ: ಈಗಾಗಲೇ ಪ್ರೌಢಶಾಲೆ ಹಾಗೂ ಕಾಲೇಜಿನ 15ರಿಂದ 18 ವರ್ಷದ ವಿದ್ಯಾರ್ಥಿಗಳಿಗೆ ಲಸಿಕೆಹಾಕಲಾಗುತ್ತಿದೆ. ಪ್ರೌಢ ಶಾಲಾ ಹಂತದಲ್ಲಿಗುರುವಾರದೊಳಗೆ ಎಲ್ಲ ವಿದ್ಯಾರ್ಥಿಗಳಿಗೂಮೊದಲ ಲಸಿಕೆ ಪೂರ್ಣವಾಗಲಿದೆ. ಅದರಂತೆಕಾಲೇಜಿನ 29,064 ವಿದ್ಯಾರ್ಥಿಗಳ ಪೈಕಿ 26 ಸಾವಿರ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗಿದೆ. ಇನ್ನುಳಿದಂತೆ 3 ಸಾವಿರ ವಿದ್ಯಾರ್ಥಿಗಳಿಗೆ ಲಸಿಕೆಬಾಕಿ ಉಳಿದಿದೆ. ಶಾಲಾ-ಕಾಲೇಜಿಗೆ ಹಾಜರಾಗದವಿದ್ಯಾರ್ಥಿಗಳಿಗೂ ಕರೆ ಮಾಡಿ ಲಸಿಕೆ ಪಡೆಯುವಂತೆ ಸೂಚಿಸಲಾಗುತ್ತಿದೆ.

ಎರಡು ಡೋಸ್ ಲಸಿಕೆ ಪಡೆದಿದ್ದರೂ ಸೋಂಕು: ಶಾಲೆ ಆರಂಭಕ್ಕೂ ಮುನ್ನ ಶಿಕ್ಷಕರು ಹಾಗೂಉಪನ್ಯಾಸಕರು ಎರಡು ಡೋಸ್‌ ಲಸಿಕೆಪಡೆದವರಿಗೆ ತರಗತಿ ನಡೆಸಲು ಅವಕಾಶನೀಡಲಾಗಿತ್ತು. ಅದರಂತೆ ಲಸಿಕೆ ಪಡೆದವರಿಗೂಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕಹೆಚ್ಚುವಂತೆ ಮಾಡಿದೆ.

ಬಿಸಿ ನೀರು ವ್ಯವಸ್ಥೆ: ಎಲ್ಲ ಶಾಲಾ-ಕಾಲೇಜುಗಳಲ್ಲಿಸೋಂಕು ಹರಡದಂತೆ ನಿಯಂತ್ರಿಸಲು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಬಿಸಿ ನೀರು, ಸಾಮಾಜಿಕಅಂತರ, ಮಾಸ್ಕ್ ಕಡ್ಡಾಯ, ಸ್ಯಾನಿಟೈಸರ್‌ ಸೇರಿ ದಂತೆ ಕೊರೊನಾ ನಿಯಮಗಳನ್ನು ಪಾಲಿಸಲಾಗುತ್ತಿದೆ. ಆದರೂ ಸೋಂಕು ದಿನದಿಂದ ದಿನಕ್ಕೆ ಏರುತ್ತಲೇ ಇದೆ.ನೆಗಡಿ, ಕೆಮ್ಮು ಹೆಚ್ಚಳ: ಚಳಿಯ ವಾತಾವರಣದಲ್ಲಿವಿದ್ಯಾರ್ಥಿಗಳಿಗೆ ನೆಗಡಿ, ಕೆಮ್ಮು ಹೆಚ್ಚು ಕಂಡು

ಬರುತ್ತಿದೆ. ಅಂಥ ವಿದ್ಯಾರ್ಥಿಗಳು ಮನೆಯಲ್ಲಿಯೇಉಳಿದು ವೈದ್ಯರ ಬಳಿ ಚಿಕಿತ್ಸೆ ಪಡೆದುಗುಣಮುಖರಾದ ನಂತರ ಶಾಲೆಗೆ ಬರಲು ಅವಕಾಶ ಕಲ್ಪಿಸಲಾಗಿದೆ.

ಪೋಷಕರ ಸಭೆ: ಶಾಲೆಗಳಲ್ಲಿ ಪೋಷಕರ ಸಭೆ ನಡೆಸಿ ಕೊರೊನಾ ನಿಯಮಗಳ ಬಗ್ಗೆ ಅರಿವುಮೂಡಿಸ ಲಾಗುತ್ತಿದೆ. ಮಕ್ಕಳ ಆರೋಗ್ಯದ ಬಗ್ಗೆಗಮನಹರಿಸುವಂತೆ ತಿಳಿ ಹೇಳಲಾಗುತ್ತಿದೆ. ಜತೆಗೆಶಾಲೆಗೆ ಕಳುಹಿಸುವಾಗ ಮಾಸ್ಕ್, ಸ್ಯಾನಿಟೈಸರ್‌,ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಪೋಷಕರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗುತ್ತಿದೆ.

ಶಾಲೆಗಳಲ್ಲಿ ಕೋವಿಡ್‌ ನಿಯಮಗಳನ್ನು ಕೈಗೊಳ್ಳಲಾಗಿದೆ.ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗುತ್ತಿದ್ದು ,ಗುರುವಾರದೊಳಗೆ ಪೂರ್ಣಗೊಳ್ಳಲಿದೆ.ಪೋಷಕರ ಸಭೆ ನಡೆಸಿ ಮನೆಯಲ್ಲೂಕೊರೊನಾ ನಿಯಮ ಪಾಲಿಸುವಂತೆ ಅರಿವು ಮೂಡಿಸಲಾಗುತ್ತಿದೆ. ಚಂದ್ರಶೇಖರ್, ಶಿಕ್ಷಣ ಸಂಯೋಜಕರು, ಡಿಡಿಪಿಐ ಕಚೇರಿ, ಮಂಡ್ಯ

ಕಾಲೇಜಿನ ಕೆಲವು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗೆ ಸೋಂಕುಕಾಣಿಸಿಕೊಂಡಿದೆ. ಎಲ್ಲ ಕಾಲೇಜಿನಲ್ಲೂಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ.ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆಹಾಕಲಾಗುತ್ತಿದ್ದು, ಇನ್ನು ಮೂರುಸಾವಿರ ವಿದ್ಯಾರ್ಥಿಗಳು ಬಾಕಿಉಳಿದಿದ್ದು, ಶೀಘ್ರದಲ್ಲಿ ಲಸಿಕೆ ಹಾಕಲಾಗುವುದು. ಉಮೇಶ್, ಡಿಡಿಪಿಯು, ಮಂಡ್ಯ

ಎಚ್.ಶಿವರಾಜು

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.