ಕೊರೊನಾದಿಂದ ಸಹಸ್ರಾರು ಕುಟುಂಬ ಅನಾಥ
Team Udayavani, Jun 15, 2021, 7:24 PM IST
ಮಂಡ್ಯ: ಪ್ರಕೃತಿ ವಿಕೋಪ ಬಂದಾಗ ದೊಡ್ಡ ಮಟ್ಟದಅನಾಹುತಗಳು ಸಂಭವಿಸಲಿದೆ. ಅದರಂತೆಕೊರೊನಾ ದಿಂದ ರಾಜ್ಯದಲ್ಲಿ ಅನೇಕ ಕುಟುಂಬಗಳು ಅನಾಥವಾಗಿವೆ ಎಂದು ಮಾಜಿ ಮುಖ್ಯಮಂತ್ರಿಎಚ್. ಡಿ.ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಹನಕೆರೆ ಗ್ರಾಮದಲ್ಲಿ ಶಾಸಕ ಎಂ. ಶ್ರೀನಿವಾಸ್ ಅಭಿಮಾನಿ ಬಳಗದಿಂದ ನಡೆದ ಕಾರ್ಯ ಕ್ರಮದಲ್ಲಿ ಕೊರೊನಾ ವಾರಿಯರ್ ಹಾಗೂ ಬಡವ ರಿಗೆಆಹಾರ, ಆರೋಗ್ಯ ಕಿಟ್ ವಿತರಿಸಿ ಮಾತನಾಡಿದರು.
ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು,ಅನೇಕ ಕುಟುಂಬಗಳು ಮಕ್ಕಳು, ಹಿರಿಯ ತಂದೆ-ತಾಯಿ, ದುಡಿಯುವ ಮಂದಿಯನ್ನು ಕಳೆದುಕೊಂಡು ಅನಾಥವಾಗಿವೆ. ಸಾವಿರಾರು ಕುಟುಂಬಗಳಲ್ಲಿ ಸಮಸ್ಯೆಗಳಿವೆ. ಇದು ಯಾರ ತಪ್ಪು, ಯಾರದ್ದುಸರಿ ಎಂದು ಚರ್ಚೆ ಮಾಡುವ ಸಮಯವಲ್ಲ. ಆದರೆಪ್ರತಿಯೊಬ್ಬರಿಗೂ ಜವಾಬ್ದಾರಿ ಇದೆ. ಅದರಲ್ಲೂಜವಾಬ್ದಾರಿಯುತ ಸ್ಥಾನದಲ್ಲಿರುವವರು ನಿಸ್ವಾರ್ಥಭಾವದಿಂದ ಬಡವರಿಗೆ ನೆರವಾಗಬೇಕು ಎಂದರು.
ಶಾಸಕರಾದ ಎಂ.ಶ್ರೀನಿವಾಸ್, ಕೆ.ಟಿ.ಶ್ರೀಕಂಠೇಗೌಡ, ಎನ್.ಅಪ್ಪಾಜಿಗೌಡ, ರಾಜ್ಯ ಯುವ ಘಟಕದಅಧ್ಯಕ್ಷ ನಿಖೀಲ್ಕುಮಾರಸ್ವಾಮಿ, ನಗರಸಭೆ ಅಧ್ಯಕ್ಷಎಚ್.ಎಸ್.ಮಂಜು, ಮನ್ಮುಲ್ ಅಧ್ಯಕ್ಷ ರಾಮಚಂದ್ರು, ಉಪಾಧ್ಯಕ್ಷ ಎಂ.ಎಸ್.ರಘುನಂದನ್,ಜಿಪಂ ಸದಸ್ಯ ಎಚ್.ಎನ್.ಯೋಗೇಶ್, ಜೆಡಿಎಸ್ಜಿಲ್ಲಾ ಧ್ಯಕ್ಷ ಡಿ.ರಮೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ