ತಾಲೂಕು ಕಚೇರಿ ಆವರಣ ಕೋವಿಡ್ ತ್ಯಾಜ್ಯದ ತೊಟ್ಟಿ!

ನಾಗಮಂಗಲ ತಾಲೂಕು ಕಚೇರಿಯಲ್ಲಿ ಕೋವಿಡ್‌ ಪರೀಕ್ಷೆ ತ್ಯಾಜ್ಯ

Team Udayavani, Nov 3, 2020, 5:24 PM IST

mandya-tdy-2

ನಾಗಮಂಗಲ: ಕೋವಿಡ್ ಪರೀಕ್ಷೆಗೆ ಬಳಕೆ ಮಾಡಲಾಗುವ ಪರಿಕರಗಳು ಸೇರಿದಂತೆ ಇನ್ನಿತರೆ ತ್ಯಾಜ್ಯ ವಸ್ತುಗಳನ್ನು ತಾಲೂಕಿನ ಆಡಳಿತ ಶಕ್ತಿ ಕೇಂದ್ರ ಮಿನಿವಿಧಾನಸೌಧದ ಆವರಣದಲ್ಲಿ ಬಿಸಾಡಿರುವುದು ತಾಲೂಕು ಆಡಳಿತದಬೇಜವಾಬ್ದಾರಿಯನ್ನು ಸಾಕ್ಷೀಕರಿಸುತ್ತಿದೆ. ಮಿನಿ ವಿಧಾನಸೌಧಕ್ಕೆ ತಾಲೂಕಿನನೂರಾರು ಸಾರ್ವಜನಿಕರು ತಮ್ಮ ಕೆಲಸ ಮಾಡಿಸಿಕೊಳ್ಳಲು ಆಗಮಿಸುತ್ತಾರೆ. ಆರ್‌ಟಿಸಿ, ಎಂಆರ್‌, ವಿಧವಾ ವೇತನ ಸೇರಿದಂತೆ ಇನ್ನೂ ಅನೇಕ ಕಾರ್ಯ ನಿರ್ವಹಿಸುವ ಕೊಠಡಿಗಳು ಇವೆ. ಇದರ ಪಕ್ಕದಲ್ಲೇ ಕೊರೊನಾ ತಪಾಸಣೆ ತ್ಯಾಜ್ಯ ಬಿಸಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ತಾಲೂಕು ಕಚೇರಿ ಸಿಬ್ಬಂದಿ ಹಾಗೂ ತಾಲೂಕು ಕಚೇರಿಗೆ ಆಗಮಿಸುವ ಎಲ್ಲಾ ಸಾರ್ವಜನಿಕರಿಗೆ ಕಳೆದ ಕೆಲವು ದಿನಗಳ ಹಿಂದೆ ಕೋವಿಡ್‌ ಟೆಸ್ಟ್‌ ಮಾಡಿಸಲಾಗಿತ್ತು. ಕಳೆದ 10 ದಿನಗಳಿಗೂ ಹೆಚ್ಚು ದಿನಗಳಿಂದ ಈ ತ್ಯಾಜ್ಯ ಇಲ್ಲೇ ಬಿದ್ದಿದ್ದರೂ ಅದನ್ನು ವಿಲೇವಾರಿ ಮಾಡುವ ಗೋಜಿಗೆ ಹೋಗಿಲ್ಲ. ವಯೋವೃದ್ಧರು, ಮಹಿಳೆಯರು ಸೇರಿದಂತೆ ಮುಂತಾದ ಸಾರ್ವಜನಿಕರು ಈ ತ್ಯಾಜ್ಯದ ಪಕ್ಕದಲ್ಲಿಯೇಕೆಲಸ ಕಾರ್ಯ ಮಾಡಿಸಿಕೊಳ್ಳಬೇಕಾಗಿದೆ.

ದಿನನಿತ್ಯ ಆತಂಕದಲ್ಲಿಯೇ ಕಚೇರಿಗೆ ಆಗಮಿಸುತ್ತಿದ್ದಾರೆ. ಕೋವಿಡ್‌ ನಿಯಮ ಪಾಲನೆ ಮಾಡದ ಸಾರ್ವಜನಿಕರಿಗೆ ದಂಡ ವಿಧಿಸುವ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಕೋವಿಡ್‌ ನಿಯಮ ಪಾಲನೆ ಬಗ್ಗೆ ದಿನಪ್ರತಿ ಭಾಷಣ ಬಿಗಿಯುವ ಅಧಿಕಾರಿಗಳಿಂದಲೇ ಈ ರೀತಿಯ ನಿಯಮ ಉಲ್ಲಂಘನೆಯಾಗಿರುವುದು ಅಧಿಕಾರಿಗಳ ಕಾರ್ಯದಕ್ಷತೆಗೆ ಸಾಕ್ಷಿಯಾಗಿದೆ.

ಆವರಣ ಕಸದ ತೊಟ್ಟಿ: ಕೋವಿಡ್‌ ನಿಯಮದ ಪ್ರಕಾರ ಕೋವಿಡ್‌ ಟೆಸ್ಟ್‌ಗೆ ಬಳಕೆ ಮಾಡಲಾಗುವ ಪರಿಕರ ಹಾಗೂ ಪಿಪಿಇ ಕಿಟ್‌ ಸೇರಿದಂತೆ ಕೋವಿಡ್‌ ತ್ಯಾಜ್ಯಗಳನ್ನು ಬೆಂಕಿಯಲ್ಲಿ ಸುಟ್ಟುಹಾಕಬೇಕಿದೆ. ಆದರೆ, ಈ ಯಾವ ನಿಯಮಗಳನ್ನೂ ಪಾಲನೆ ಮಾಡದೆ ಕಳೆದ ಹಲವು ದಿನಗಳಿಂದ ಮಿನಿವಿಧಾನಸೌಧದ ಆವರಣದ ಒಂದು ಚರಂಡಿಯಲ್ಲಿ ಬಿಸಾಡಲಾಗಿದೆ. ಇಷ್ಟು ಮಾತ್ರವಲ್ಲದೆ, ಮಿನಿ ವಿಧಾನಸೌಧದ ಪಕ್ಕದಲ್ಲಿನ ಚರಂಡಿಯಲ್ಲಿ ಕಚೇರಿಯಲ್ಲಿನ ದಿನನಿತ್ಯದ ತ್ಯಾಜ್ಯ ಸುರಿಯುತ್ತಿದ್ದು, ಚರಂಡಿ ಗಬ್ಬೆದ್ದು ನಾರುತ್ತಿದೆ. ಕಳೆದ 2 ದಿನಗಳ ಹಿಂದೆ ತಾಲೂಕಿನಾದ್ಯಂತ ನಾಗಮಂಗಲ ನ್ಯಾಯಾಲಯದ ನ್ಯಾಯಾಧೀಶರ ನೇತೃತ್ವದಲ್ಲಿ ತಹಶೀಲ್ದಾರ್‌ ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಪಾಲ್ಗೊಂಡು ಎಲ್ಲಾ ಹೋಬಳಿ ಕೇಂದ್ರದಲ್ಲಿ ಕೋವಿಡ್ ನಿಯಂತ್ರಣ ಕುರಿತಾಗಿ ಜಾಗೃತಿ ಮೂಡಿಸಲಾಗಿತ್ತು. ಆದರೆ, ತಮ್ಮ ಕಚೇರಿ ಆವರಣದಲ್ಲಿಯೇ ಇರುವ ತ್ಯಾಜ್ಯವನ್ನು ನಿಯಮದಂತೆ ವಿಲೇವಾರಿ ಮಾಡದೆ ಜಾಗೃತಿ ಮೂಡಿಸಲು ಮುಂದಾಗಿರುವ ಅಧಿಕಾರಿಗಳ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.

ತೆರವುಗೊಳಿಸಲಾಗುತ್ತದೆ: ತಹಶೀಲ್ದಾರ್ ಸಾರ್ವಜನಿಕರ ಹಿತದೃಷ್ಟಿಯಿಂದ ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ಕಚೇರಿಗೆ ಬರುವ ಸಿಬ್ಬಂದಿಗಳು ಮತ್ತು ಸಾರ್ವಜನಿಕರಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿತ್ತು. ಆಸ್ಪತ್ರೆ ಸಿಬ್ಬಂದಿ ಕೋವಿಡ್‌ ಪರೀಕ್ಷೆಗೆ ಬಳಸಿದ್ದ ಪರಿಕರಗಳ ಕವರ್‌ ಮತ್ತು ಅದರ ತ್ಯಾಜ್ಯಗಳನ್ನು ಬಿಟ್ಟು ಹೋಗಿದ್ದಾರೆ. ಇದು ನಮ್ಮ ಗಮನಕ್ಕೆ ಬಂದಿರಲಿಲ್ಲ. ಈಗ, ಗಮನಕ್ಕೆ ಬಂದಿದ್ದು ತಕ್ಷಣ ತೆರವುಗೊಳಿಸಲಾಗುತ್ತದೆ ಎಂದು ತಹಶೀಲ್ದಾರ್‌ ಕುಂಞ ಅಹಮದ್‌ ತಿಳಿಸಿದ್ದಾರೆ.

ಕಳೆದ 4-5 ದಿನಗಳಿಂದ ನನ್ನ ಜಮೀನಿಗೆ ಸಂಬಂಧಿಸಿದ ದಾಖಲೆಗಳಿಗಾಗಿ ತಾಲೂಕು ಕಚೇರಿಗೆ ಬರುತ್ತಿದ್ದೇನೆ. ಆಗಿನಿಂದಲೂ ಈ ಕಸ ಇಲ್ಲಿಯೇ ಇದೆ. ಕೋವಿಡ್ ನಿಯಮ ಪಾಲನೆಗೆ ಸೂಚಿಸುವ ಅಧಿಕಾರಿಗಳೇ ನಿಯಮ ಉಲ್ಲಂಘನೆ ಮಾಡಿದ್ದಾರೆ. ತೆರವುಗೊಳಿಸಲಾಗುತ್ತದೆ: –ರಾಮಕೃಷ್ಣ, ಸಾರ್ವಜನಿಕ

 

ಪಿ.ಜೆ.ಜಯರಾಂ

 

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.