ಏಕಲವ್ಯ ವಸತಿ ಶಾಲೆಯಲ್ಲಿ ಕೋವಿಡ್ ಚಿಕಿತ್ಸೆ
ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ವ್ಯವಸ್ಥೆ: ತಹಶೀಲ್ದಾರ್
Team Udayavani, Jul 16, 2020, 12:24 PM IST
ಎಚ್.ಡಿ.ಕೋಟೆ: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಕೇಂದ್ರಗಳಲ್ಲಿಯೂ ಕೋವಿಡ್ ಚಿಕಿತ್ಸೆಗೆ ಕೋವಿಡ್ ಕೇರ್ ಸೆಂಟರ್ಗಳಿಗೆ ಸರ್ಕಾರ ಆದೇಶಿಸಿದೆ. ತಾಲೂಕಿನ ಸೊಳ್ಳಾಪುರ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 60 ಹಾಸಿಗೆಗಳ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ನಲ್ಲಿ ಎಲ್ಲಾ ವ್ಯವಸ್ಥೆಗಳ ಸಿದ್ಧತೆ ಮಾಡಲಾಗಿದೆ.
ತಾಲೂಕು ಕೇಂದ್ರ ಸ್ಥಾನದಿಂದ ಸುಮಾರು 6-7 ಕಿ.ಮೀ. ಅಂತರದಲ್ಲಿರುವ ಮೇಟಿಕುಪ್ಪೆ ರಸ್ತೆಯ ಸೊಳ್ಳಾಪುರ ಏಕಲವ್ಯ ವಸತಿ ಶಾಲೆಯಲ್ಲಿ ಕೊರೊನಾ ಸೋಂಕಿತರಿಗಾಗಿ 60 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಕಾರ್ಯಾರಂಭ ಮಾಡಲಿದೆ. ಮುಂದಿನ ದಿನಗಳಲ್ಲಿ ಅಗತ್ಯ ಎನಿಸಿದರೆ ಅದೇ ವಸತಿ ಶಾಲೆಯ ಮತ್ತೂಂದು ಭಾಗದಲ್ಲಿ ಹೆಚ್ಚುವರಿಯಾಗಿ ಮತ್ತೆ 60 ಹಾಸಿಗಳ ಕೋವಿಡ್ ಕೇರ್ ಸೆಂಟರ್ಗೆ ವ್ಯವಸ್ಥೆ ಮಾಡಲು ಚಿಂತನೆ ನಡೆದಿದೆ.
ಏಕಲವ್ಯ ಮಾದರಿ ವಸತಿ ಶಾಲೆಗೆ ತಹಶೀಲ್ದಾರ್ ಆರ್. ಮಂಜುನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್, ಸಾರ್ವಜನಿಕ ಆಡಳಿತಾಧಿಕಾರಿ
ಡಾ.ಭಾಸ್ಕರ್, ಪುರಸಭಾ ಮುಖ್ಯಾಧಿಕಾರಿ ವಿಜಯ ಕುಮಾರ್ ಮತ್ತು ಸರಗೂರಿನ ಸ್ವಾಮಿ ವಿವೇಕಾನಂದ ಆಸ್ಪತ್ರೆಯ ವೈದ್ಯರ ತಂಡ ಏಕಲವ್ಯ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ತಾಲೂಕಿನ ಕೋವಿಡ್ ಸೋಂಕಿತರನ್ನು ಇಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುವುದು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗುವುದು. ಆರಂಭದಲ್ಲಿ ಕೋವಿಡ್ ಕೇರ್ ಸೆಂಟರ್ಗೆ ಒಂದು ಮಿನಿ ಬಸ್, 2 ತುರ್ತು ವಾಹನ, ಎಚ್ .ಡಿ. ಕೋಟೆ ಸರ್ಕಾರಿ ಆಸ್ಪತ್ರೆ ಮತ್ತು ಸರಗೂರು ವಿವೇಕಾನಂದ ಆಸ್ಪತ್ರೆಯ ವೈದ್ಯರು ನಿರ್ವಹಿಸಲಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್