
ಅಪಹರಣ ನಾಟಕವಾಡಿ ತಲೆಮರೆಸಿದ್ದ ವ್ಯಕ್ತಿ ಸೆರೆ: ಅರಕೆರೆ ಪೊಲೀಸರಿಂದ 30 ದಿನಗಳ ಕಾರ್ಯಾಚರಣೆ
Team Udayavani, Sep 14, 2022, 11:06 PM IST

ಶ್ರೀರಂಗಪಟ್ಟಣ: ಪ್ರಿಯತಮೆಗೆ ನೀಡಿದ್ದ ಸಾಲವನ್ನು ಮರಳಿ ಪಡೆಯಲು ಅಪಹರಣ ನಾಟಕವಾಡಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಪತ್ತೆಹಚ್ಚಿ, ಪ್ರಕರಣಕ್ಕೆ ಇತಿಶ್ರೀ ಹಾಕಿದ್ದಾರೆ.
ಪ್ರಕರಣದ ವಿವರ: ತಾಲೂಕಿನ ಚೊಟ್ಟನಹಳ್ಳಿ ಗ್ರಾಮದ ಮನು (34) ಅದೇ ಗ್ರಾಮದ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಆಕೆಗೆ 7 ಲಕ್ಷ ರೂ. ಸಾಲ ನೀಡಿ, ಭದ್ರತೆಗಾಗಿ ಚೆಕ್ ಪಡೆದಿದ್ದ. ಇವರ ನಡುವೆ ಸಂಬಂಧ ಹದಗೆಟ್ಟ ಬಳಿಕ ಸಾಲ ಮರು ಪಾವತಿಸುವಂತೆ ಒತ್ತಡ ಹೇಳಿದ್ದ. ಆದರೂ ಮಹಿಳೆ ಹಣವನ್ನು ವಾಪಸ್ ನೀಡಿರಲಿಲ್ಲ. ಬದಲಿಗೆ ಆಕೆಯ ಕಡೆಯವರು ಚೆಕ್ ವಾಪಸ್ ಕೊಡುವಂತೆ ಮನುವಿಗೆ ಬೆದರಿಕೆ ಹಾಕಿದ್ದರು.
ಈ ಕರೆಯನ್ನು ರೆಕಾರ್ಡ್ ಮಾಡಿಕೊಂಡು ಸ್ನೇಹಿತನಿಗೆ ಕಳುಹಿಸಿದ ಮನು, ತನ್ನನ್ನು ಅಪಹರಣ ಮಾಡಿದ್ದಾರೆ ಎಂದು ಹೇಳಿ ಆ. 12ರಿಂದ ನಾಪತ್ತೆಯಾಗಿದ್ದ. ಪೊಲೀಸರು ಮಹಿಳೆ ಮತ್ತು ಕೆಲವರನ್ನು ಬಂಧಿಸಿ, ತನಿಖೆ ನಡೆಸಿದರೂ ಅಪಹರಣದ ಬಗ್ಗೆ ಯಾವುದೇ ಮಾಹಿತಿ ಸಿಗಲಿಲ್ಲ. ತನಿಖೆ ಮುಂದುವರಿಸಿದಾಗ ಮನು ಗೋವಾದಲ್ಲಿರುವುದು ತಿಳಿದು ಬಂತು.
ಆತ್ಮಹತ್ಯೆ ನಾಟಕ: ಪೊಲೀಸರು ಗೋವಾಕ್ಕೆ ಹೋಗುವ ವಿಷಯ ತಿಳಿದು ಅಲ್ಲಿಂದ ಊರಿಗೆ ಬಂದಿದ್ದ ಮನು ನಾಲೆ ಬಳಿ ವಿಷ ಕುಡಿದ ಆಡಿಯೋವನ್ನು ಸ್ನೇಹಿತನಿಗೆ ಕಳುಹಿಸಿ ಮತ್ತೆ ನಾಪತ್ತೆಯಾಗಿದ್ದ. ಈತನಿಗಾಗಿ ನಾಲೆ ಬಳಿ ಸ್ನೇಹಿತರು ಮತ್ತು ಸಂಬಂಧಿಕರ ಹುಟುಕಾಡಿದರೂ ಯಾವುದೇ ಮಾಹಿತಿ ಸಿಗಲಿಲ್ಲ. ಈತ ಸತ್ತಿರುವ ಸಾಧ್ಯತೆ ಕಡಿಮೆ ಎಂದು ಪೊಲೀಸರು ತನಿಖೆ ಮುಂದುವರಿಸಿದರು.
ಬೆಂಗಳೂರಿನಲ್ಲಿ ಪತ್ತೆ: ಕೆಲವು ದಿನಗಳ ಬಳಿಕ ಈತ ಬೆಂಗಳೂರಿನ ಹಾಸ್ಟೆಲ್ನಲ್ಲಿ ಉಳಿದುಕೊಂಡಿರುವುದನ್ನು ಪತ್ತೆ ಹಚ್ಚಿರುವ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಗಾಂಧಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ

ಬಿಆರ್ಟಿಗೂ, ಅರಸರಿಗೂ ಅವಿನಾಭವ ಸಂಬಂಧ

ದ್ವಿಚಕ್ರ ವಾಹನ ಕಳ್ಳರ ಬಂಧನ: 12 ಬೈಕ್ ಪೊಲೀಸರ ವಶಕ್ಕೆ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ