ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ
Team Udayavani, Dec 25, 2019, 3:44 PM IST
ಕೆ.ಆರ್.ಪೇಟೆ: ವಿದ್ಯಾರ್ಥಿಗಳು ಬಾಲ್ಯದಿಂದಲೇ ಸಂಸ್ಕಾರ, ಶಿಸ್ತು, ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಚಲನಚಿತ್ರ ನಟ ಅರವಿಂದ್ ರಾವ್ ಹೇಳಿದರು.
ಪಟ್ಟಣದ ಆಚಾರ್ಯ ಪ್ರೋಕ್ಯಾಂಪಸ್ ಶಾಲೆ ವಿದ್ಯಾರ್ಥಿಗಳಿಂದ ಮೌಡ್ಯದ ವಿರುದ್ಧ ಹಾಗೂ ಸುಸ್ಥಿರ ಸಮಾಜಕ್ಕಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿ, ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾದ್ದರಿಂದ ಬಾಲ್ಯದಿಂದಲೇ ಶಿಸ್ತು, ಸೇವಾಗುಣ ಹಾಗೂ ಮಾನವೀಯ ಮೌಲ್ಯ ಬೆಳೆಸಿಕೊಂಡು ಸಮಾಜಮುಖೀ ಹೆಜ್ಜೆ ಹಾಕಬೇಕು ಎಂದರು.
ಪರಿಸರ ಕಾಪಾಡಿ: ಪರಿಸರದ ಮೇಲೆ ನಿರಂತರ ದೌರ್ಜನ್ಯದಿಂದಾಗಿ ಜಾಗತಿಕ ತಾಪಮಾನದಲ್ಲಿ ವ್ಯತ್ಯಯ ಉಂಟಾಗಿ ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಆದ್ದರಿಂದ ಗಿಡಮರ ನೆಟ್ಟು ಬೆಳೆಸುವ ಕಾಳಜಿ ವಿದ್ಯಾರ್ಥಿಗಳು ಬೆಳೆಸಿಕೊಳ್ಳ ಬೇಕು. ಪರಿಸರಕ್ಕೆ ಹಾನಿಕಾರಕ ಪ್ಲಾಸ್ಟಿಕ್ ಉತ್ಪನ್ನಗಳು ತ್ಯಜಿಸಿ ಬಟ್ಟೆ ಬ್ಯಾಗ್ಗಳನ್ನೇ ಬಳಸಬೇಕು ಎಂದು ತಿಳಿಸಿದರು. ಪುರಸಭಾ ಮಾಜಿ ಸದಸ್ಯ ಕೆ.ಆರ್. ನೀಲಕಂಠ ಮಾತನಾಡಿ, ಜಗತ್ತಿನಲ್ಲಿ ಮಾನವ ಧರ್ಮಕ್ಕಿಂತ ಮಿಗಿಲಾದ ಧರ್ಮ ಯಾವುದೂ ಇಲ್ಲ. ನಾವು ಮಾನವ ರಾಗಿ ಪರಸ್ಪರ ಕಷ್ಟಸುಖ ಹಂಚಿಕೊಂಡು ಕೂಡಿ ಬಾಳಬೇಕು. ಸಮಾಜದಲ್ಲಿ ಶೋಷಿತರು ಹಾಗೂ ತುಳಿತ ಕ್ಕೊಳಗಾದವರಿಗೆ ಕೈಲಾದ ಸಹಾಯ ಮಾಡಬೇಕು ಎಂದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವಿದ್ಯಾರ್ಥಿ ಗಳು ವಿವಿಧ ಘೋಷಣೆಗಳಿರುವ ಭಿತ್ತಿ ಪತ್ರ ಹಿಡಿದು ಘೋಷಣೆ ಕೂಗಿ ಜಾಗೃತಿ ಜಾಥಾ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ