“ಕುವೆಂಪು ಪ್ರಕೃತಿಯಯನ್ನೇ ದೈವತ್ವ ಎಂದಿದ್ದರು”


Team Udayavani, Jan 16, 2021, 7:46 PM IST

D. chidananda gowda speech

ನಾಗಮಂಗಲ: ಕುವೆಂಪು ಅವರು ಬರೆದ ಸಾಹಿತ್ಯಗಳು ಸಾಹಿತ್ಯದ 32 ಆಯಾಮಗಳಿಗೆ ಸಂಬಂಧಿಸಿದ್ದು, ಅವರ ಕೃತಿಗಳನ್ನು ವಿಮರ್ಶಕರೇ ಒಪ್ಪಿರುವಂಥ ಶ್ರೇಷ್ಠ ಸಾಹಿತ್ಯಗಳಾಗಿವೆ ಎಂದು ಕುವೆಂಪು ವಿವಿಯ ವಿಶ್ರಾಂತ ಉಪಕುಪಲತಿ ಡಾ. ಚಿದಾನಂದಗೌಡ ತಿಳಿಸಿದರು.

ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶುಕ್ರವಾರ ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 76ನೇ ಜಯಂತ್ಯುತ್ಸವ ಹಾಗೂ 8ನೇ ವರ್ಷದ ಸಂಸ್ಮರಣಾ ಮಹೋತ್ಸವದ ಪ್ರಯುಕ್ತ ನಡೆದ “ರಾಷ್ಟ್ರಕವಿ ಕುವೆಂಪು ಸಂಕಥನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಲೋಸ್ಮಿ ಮಹಾಕಾವ್ಯ ರಚಿಸಲಾಗಲಿಲ್ಲ: ಕುವೆಂಪು ಕಾಲೋಸ್ಮಿ ಮಹಾಕಾವ್ಯ ರಚಿಸಲು ಚಿಂತನೆ ಮಾಡಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಅವರು ಚಿಂತನೆ ಮಾಡಿದ್ದ ಮಹಾಕಾವ್ಯ ರಚನೆಯಾಗಿದ್ದರೆ ನಮ್ಮ ಕನ್ನಡ ಸಾಹಿತ್ಯಕ್ಕೆ ಮೂರು ಸಾವಿರ ಪುಟಗಳ ಮತ್ತೂಂದು ಶ್ರೇಷ್ಠ ಕೃತಿ ಲಭ್ಯವಾಗುತ್ತಿತ್ತು ಎಂದರು.

ಪ್ರಕೃತಿಯಲ್ಲೇ ಸಾಹಿತ್ಯ ರಚನೆ: ಅಲ್ಲದೇ ಅವರು ಪ್ರಕೃತಿಯ ಆಯಾಮದಲ್ಲಿ ಸಾಹಿತ್ಯ ರಚನೆ ಮಾಡಿದ್ದರು. ಪ್ರಕೃತಿಯನ್ನು ದೈವತ್ವವೆಂದು ಕರೆಯುತ್ತಿದ್ದರು. ಕಾಡನ್ನು ಕಂಡರೆ ಕುವೆಂಪು ಅವರಿಗೆ ಅಪಾರ ಪ್ರೀತಿಯಿತ್ತು. ಜತೆಗೆ ಅವರ ಮತ್ತೊಂದು ಆಯಾಮವೆಂದರೆ ಕನ್ನಡ ಭಾಷಾ ಪ್ರೇಮವಾಗಿತ್ತು. ಕನ್ನಡವು ಶಿಕ್ಷಣದ ಮಾಧ್ಯಮವಾಗಬೇಕು ಎಂಬುದು ಅವರ ಚಿಂತನೆಯಾಗಿತ್ತು. ವಿಶ್ವ ಪ್ರೇಮ ಮತ್ತು ಸಾಮಾಜಿಕ ಕಳಕಳಿಎಲ್ಲ ರಚನೆಗಳಲ್ಲೂ ಇತ್ತು ಎಂದು ಹೇಳಿದರು.

ಜ್ಞಾನ ಸಾಧಕನ ಸತ್ತು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ, ಕುವೆಂಪು ಅವರನ್ನು ಅರ್ಥ ಮಾಡಿಕೊಳ್ಳುವುದು ಹಾಗೂ ಅವರ ಕುರಿತು ಮಾತನಾಡುವುದು ಅತ್ಯಂತ ಕಷ್ಟದ ವಿಷಯ. ಎಂದಿಗೂ ಜ್ಞಾನವು ಸಾಧಕನ ಸ್ವತ್ತು ಎಂದು ಸಾಧಿಸಿ ತೋರಿಸಿದವರು. ಅವರು ಮನುಷ್ಯತ್ವಕ್ಕೆ ನಿಜವಾದ ವಿಶ್ವಮಾನವತೆ ದರ್ಶನ ಮಾಡಿಸಿದವರು ಎಂದರು. ಕಾರ್ಯಕ್ರಮದಲ್ಲಿ ಕುವೆಂಪು ಅವರು ಬರೆದ ಹಲವು ಭಾವಗೀತೆಗಳನ್ನು ವೇದಿಕೆಯಲ್ಲಿ ಕಲಾವಿದರು ಹಾಡಿದರು. ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಇದನ್ನೂ ಓದಿ:ಜಿಲ್ಲೆಯ 6 ಲಸಿಕಾ ಕೇಂದ್ರಗಳಲ್ಲಿ ಕೋವಿಡ್ ಲಸಿಕಾ ಅಭಿಯಾನ ಯಶಸ್ವಿ

ಕಾರ್ಯಕ್ರಮದಲ್ಲಿ ಕುವೆಂಪು ಕೃತಿಗಳ ಪ್ರದರ್ಶನ ನಡೆಯಿತು. ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಬಿಇಒ ಜಗದೀಶ್‌, ಗಾಂಧಿಭವನದ ಕಾರ್ಯದರ್ಶಿ ಶಿವರಾಜು, ಮಂಜು  ನಾಥ್‌, ಸುಬ್ಬರಾಯ, ಡಾ.ಪ್ರೊ. ಚಂದ್ರಶೇಖರಯ್ಯ, ಆದಿಚುಂಚನಗಿರಿ ಶಾಖಾ ಮಠಗಳ ಸ್ವಾಮೀಜಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.