ಮಳೆಯಿಂದ ಗ್ರಾಮೀಣ ರಸ್ತೆಗಳು ಹಾಳು


Team Udayavani, Sep 19, 2022, 3:35 PM IST

tdy-11

ಮದ್ದೂರು: ಹಲವು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದ ಗ್ರಾಮೀಣ ಪ್ರದೇಶದ ರಸ್ತೆ ಗಳೂ ಸೇರಿದಂತೆ ಜಮೀನಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಳಾಗಿದ್ದರೂ, ಅಗತ್ಯ ಕ್ರಮ ಕೈಗೊಳ್ಳದ ಅಧಿ ಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳ ವಿರುದ್ಧ ಸ್ಥಳೀಯರು, ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಚನ್ನೇಗೌಡನದೊಡ್ಡಿ ಗ್ರಾಮದಿಂದ ಸಂಪರ್ಕ ಕಲ್ಪಿಸುವ ಬಸವನಗುಡಿ ರಸ್ತೆ ಮಾರ್ಗವಾಗಿ ಮೊಬ್ಬಳಗೆರೆ, ಗೆಜ್ಜಲಗೆರೆ, ಹನಕೆರೆ, ವಳಗೆರೆಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಹಲವು ವರ್ಷಗಳಿಂದ ಅದ್ವಾನಗೊಂಡು, ರೈತರು ಸಂಕಷ್ಟ ಪರಿಸ್ಥಿತಿ ಅನುಭವಿಸುತ್ತಿದ್ದರೂ ಇದುವರಿಗೂ ದುರಸ್ತಿಗೆ ಮುಂದಾಗದಿರುವುದು ಶೋಚನೀಯವಾಗಿದೆ. ಕಳೆದ 15 ವರ್ಷಗಳ ಹಿಂದೆ ರಸ್ತೆಗೆ ಜಲ್ಲಿ, ಮಣ್ಣು ಹಾಕಿ ಸಂಚಾರಕ್ಕೆ ಅನುಕೂಲ ಕಲ್ಪಿಸಿದ್ದ ಕಾವೇರಿ ನೀರಾವರಿ ನಿಗಮ ಹಾಗೂ ಜಿಪಂ ಉಪವಿಭಾಗ ಇಲಾಖೆ ಅಧಿಕಾರಿಗಳು ಇಷ್ಟು ವರ್ಷ ಕಳೆದಿದ್ದರೂ, ಇತ್ತ ತಲೆಹಾಕದೆ ಮೌನಕ್ಕೆ ಶರಣಾಗಿರುವ ಜತೆಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಕೆಸರುಗದ್ದೆಯಾದ ರಸ್ತೆ: ಕಳೆದ ಹಲವು ದಿನದಿಂದ ಸುರಿದ ಮಳೆಯಿಂದ ರಸ್ತೆಯು ಕೆಸರುಗದ್ದೆ ಯಂತಾಗಿದ್ದು, ಪಿಕಪ್‌ ನಾಲೆಯ ನೀರು ರಸ್ತೆ ಯುದ್ಧಕ್ಕೂ ಹರಿಯುತ್ತಿದೆ. ಇದರಿಂದ ಆಳೆತ್ತರದ ಗುಂಡಿಗಳು ಬಿದ್ದು, ಸಂಚಾರಕ್ಕೂ ತೊಂದರೆಯಾಗಿದೆ. ಈ ಮಾರ್ಗದ ರಸ್ತೆಯಲ್ಲಿ ಸಂಚರಿಸಲು ಹೆಣಗಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಮಾರ್ಗದ ರಸ್ತೆಯಲ್ಲೇ ರೈತರು ಕಬ್ಬು, ಭತ್ತ, ರಾಗಿ ಬೆಳೆಗಳನ್ನು ಸಾಗಿಸುವ ಜತೆಗೆ ಮತ್ತು ಜಮೀನುಗಳಿಗೆ ತೆರಳುವ ಪ್ರಮುಖ ರಸ್ತೆಯಾಗಿದೆ. ಹಾಳಾಗಿರುವ ರಸ್ತೆಯಲ್ಲೇ ಜನ, ಜಾನುವಾರುಗಳು ಸಂಚರಿಸುವುದನ್ನು ಕಂಡಲ್ಲಿ ಎಂತಹವರಿಗೂ ಮನ ಕಲಕುವಂತಹ ಸ್ಥಿತಿ ನಿರ್ಮಾಣಗೊಂಡಿದೆ.

ಕ್ರಮ ಕೈಗೊಂಡಿಲ್ಲ: ರಸ್ತೆಯಲ್ಲಿ ಕಿತ್ತು ನಿಂತಿರುವ ಜಲ್ಲಿಕಲ್ಲು, ಆಳೇತ್ತೆರದ ಗುಂಡಿಗಳು, ರಸ್ತೆಯುದ್ದಕ್ಕೂ ಬೆಳೆದು ನಿಂತಿರುವ ಗಿಡಗಂಟೆಗಳು, ಎರಡೂ ಬದಿಯಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ರೈತರಿಂದ ಕಿರಿದಾದ ರಸ್ತೆಯಲ್ಲೇ ಜಮೀನುಗಳಿಗೆ ತೆರಳಬೇಕಾದ ಸ್ಥಿತಿ ಬಂದಿದೆ. ಈ ಸಂಬಂಧ ರೈತರು ರಸ್ತೆ ದುರಸ್ತಿಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತು ಚುನಾಯಿತ ಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಈ ಮಾರ್ಗದಲ್ಲಿ ಇತಿಹಾಸ ಪ್ರಸಿದ್ಧ ಪುರಾತನ ಬಸವನಗುಡಿ, ಶನಿಮಹಾತ್ಮ ದೇವಾಲಯಗಳಿದ್ದು ಹಾಗೂ ಮೊಬ್ಬಳಗೆರೆ ಮಾರ್ಗವಾಗಿ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶಕ್ಕೂ ತೆರಳುವ ರಸ್ತೆಯು ಹಲವು ಅದ್ವಾನಗಳ ಜತೆಗೆ ಸಮಸ್ಯೆಗಳೊಟ್ಟಿಗೆ ಹಾಸಿ ಮಲಗಿದ್ದು, ಇಂತಹ ಪರಿಸ್ಥಿತಿಯಲ್ಲೇ ಸ್ಥಳೀಯ ರೈತರು ದಿನನಿತ್ಯ ಸಂಚರಿಸಬೇಕಾದ ದುಸ್ಥಿತಿ ಕಾಣಸಿಗುತ್ತಿದೆ.

ವಿಳಂಬ ಧೋರಣೆ: ಚುನಾವಣೆ ಸಂದರ್ಭಗಳಲ್ಲಿ ಗ್ರಾಮದ ರಸ್ತೆಗಳಿಗೆ ಭೇಟಿ ನೀಡಿ, ರೈತರಿಗೆ ಆಶ್ವಾಸನೆ ನೀಡಿ, ತೆರಳುವ ಜನಪ್ರತಿನಿಧಿಗಳು ಬಳಿಕ ಯಾವುದೇ ಕ್ರಮಕ್ಕೆ ಮುಂದಾಗದೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಕೆಲ ನಾಯಕರು ಭೇಟಿ ನೀಡಿ, ರಸ್ತೆ ವೀಕ್ಷಿಸಿ ತೆರಳಿದ್ದರೂ ಅದರ ದುರಸ್ತಿ ಕಾರ್ಯಕ್ಕೆ ಮುಂದಾಗದಿರುವುದು ಹಲವಾರು ಊಹಾಪೋಹಗಳಿಗೆ ಕಾರಣವಾಗಿದೆ. ಕೂಡಲೇ ಕಾವೇರಿ ನೀರಾವರಿ ನಿಗಮ ಮತ್ತು ಜಿಪಂ ಉಪವಿಭಾಗಾಧಿಕಾರಿಗಳು ಭೇಟಿ ನೀಡಿ, ರಸ್ತೆ ಪರಿಶೀಲನೆ ನಡೆಸುವ ಜತೆಗೆ ದುರಸ್ತಿ ಕಾರ್ಯಕ್ಕೆ ಮುಂದಾಗುವ ಮೂಲಕ ಈ ಭಾಗದ ರೈತರಿಗೆ ಅನುಕೂಲ ಕಲ್ಪಿಸಬೇಕಿದೆ. ತಪ್ಪಿದಲ್ಲಿ ಸ್ಥಳೀಯ ರೈತರೊಂದಿಗೆ ಪ್ರತಿಭಟನೆ ಹಾದಿ ಹಿಡಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಭಾಗದ ಮತ್ತು ಜಮೀನಿಗೆ ತೆರಳುವ ರಸ್ತೆಗಳು ಹಾಳಾಗಿದೆ. ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿದ್ದು, ಅನುದಾನ ಬಿಡುಗಡೆ ಬಳಿಕ ದುರಸ್ತಿ ಕಾರ್ಯಕ್ಕೆ ಕ್ರಮವಹಿಸಲಾಗುವುದು. ಶಿವಕುಮಾರ್‌ ನಾಯಕ್‌, ಎಇ, ಕಾವೇರಿ ನೀರಾವರಿ ನಿಗಮ, ಮದ್ದೂರು

ಹಲವು ವರ್ಷದಿಂದ ಬಸವನಗುಡಿ ರಸ್ತೆ ಅದ್ವಾನವಾಗಿದೆ. ಈ ಸಂಬಂಧ ಚುನಾಯಿತ ಪ್ರತಿನಿಧಿಗಳು ಮತ್ತು ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮಕ್ಕೆ ನಿರ್ಲಕ್ಷ್ಯ ಅನುಸರಿಸಿದ್ದು, ಈ ಸಂಬಂಧ ರೈತರೊಂದಿಗೆ ಪ್ರತಿಭಟನೆ ಕೈಗೊಂಡು ಸರ್ಕಾರದ ಗಮನ ಸೆಳೆಯಲಾಗುವುದು.-ಕೆ.ಪುಟ್ಟಸ್ವಾಮಿ, ಚನ್ನೇಗೌಡನದೊಡ್ಡಿ ಗ್ರಾಮದ ನಿವಾಸಿ

ಎಸ್‌.ಪುಟ್ಟಸ್ವಾಮಿ

ಟಾಪ್ ನ್ಯೂಸ್

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.