ಪ್ಲಾಸ್ಮಾ ಥೆರಪಿ ಚಿಕಿತ್ಸೆ ಆರಂಭಿಸಲು ಡೀಸಿ ಸೂಚನೆ
Team Udayavani, Aug 28, 2020, 4:17 PM IST
ಮಂಡ್ಯ: ಜಿಲ್ಲೆಯಲ್ಲಿ ಕೊವೀಡ್-19 ಸಂಬಂಧಸಾವುಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ಲಾಸ್ಮಾ ಥೆರಪಿ ಚಿಕಿತ್ಸೆಯನ್ನು ಶುಕ್ರವಾರದಿಂದಲೇ ಪ್ರಾರಂಭಿಸಬೇಕು. ಪೂರ್ವ ನಿಯೋಜಿತವಾಗಿ ಆ್ಯಂಬುಲೆನ್ಸ್ ವ್ಯವಸ್ಥೆಯಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೊವೀಡ್ ಹಿನ್ನೆಲೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆಯನ್ನು ನಿಯಂತ್ರಿಸುವ ಸಲುವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕೊವೀಡ್ ದೃಢಪಟ್ಟ ವ್ಯಕ್ತಿಗಳಿಗೆ ಪ್ಲಾಸ್ಮ ಥೆರಪಿ ಚಿಕಿತ್ಸೆಯನ್ನು ನೀಡುವ ಮೂಲಕ ರೋಗ ನಿರೋಧ ಶಕ್ತಿಯನ್ನು ಹೆಚ್ಚಿಸಿ ಸಾವಿನ ಪ್ರಮಾಣವನ್ನು ನಿಯಂತ್ರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಪಿ.ಮಂಚೇಗೌಡ, ಮಿಮ್ಸ್ನ ವೈದ್ಯಾಧಿಕಾರಿಗಳು, ಆದಿಚುಂಚನಗಿರಿಯ ವೈದ್ಯಾಧಿಕಾರಿಗಳು ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿಯಿಂದ ಆರೋಗ್ಯ ಕೇಂದ್ರ ಪರಿಶೀಲನೆ : ಮಂಡ್ಯ: ತಾಲೂಕಿನ ಕ್ಯಾತುಂಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಗುರುವಾರ ಭೇಟಿ ನೀಡಿ, ರೋಗಿಗಳ ಕುಂದು-ಕೊರತೆ ಆಲಿಸಿದರು. ಪ್ರತಿನಿತ್ಯ ಆರೋಗ್ಯ ಕೇಂದ್ರವನ್ನು ಸ್ಯಾನಿಟೈಸರ್ ಮಾಡಬೇಕು. ಪ್ರತಿಯೊಬ್ಬ ಸಿಬ್ಬಂದಿ, ಸಾರ್ವಜನಿಕರು ಮತ್ತು ರೋಗಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜೊತೆಗೆ ಖುದ್ದಾಗಿ ಗಂಟಲು ದ್ರವ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಸುತ್ತ-ಮುತ್ತಲಿನ ಗ್ರಾಮಸ್ಥರಿಗೆ ಕೊವೀಡ್ ಪರೀಕ್ಷೆ ಮಾಡಲು ವೈದ್ಯಾಧಿಕಾರಿಗೆ ಸೂಚನೆ ನೀಡಿ, ಆಸ್ಪತ್ರೆಯನ್ನು ಸ್ವತ್ಛವಾಗಿ ಇಟ್ಟುಕೊಂಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕು ಆರೋಗ್ಯ ಅಧಿಕಾರಿಗಳು ಮತ್ತು ಆಸ್ಪತ್ರೆ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ