ಕೋವಿಡ್ ಬಂದರೆ ಮನೆಯಲ್ಲೇ ಆನ್ಲೈನ್ ತರಗತಿ
Team Udayavani, Nov 14, 2020, 9:07 PM IST
ಮಂಡ್ಯ: ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಲ್ಲಿ ಯಾರಿಗಾದರೂ ಕೋವಿಡ್ ಕಂಡು ಬಂದರೆ ಮನೆಯಲ್ಲಿಯೇ ಆನ್ ಲೈನ್ ಮೂಲಕ ತರಗತಿ ನಡೆಸಲುಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ ಉಸ್ತುವಾರಿ ಮತ್ತು ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ಭೌತಿಕ ತರಗತಿಗಳು ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಪ್ರತಿ ಕೊಠಡಿಗಳಿಗೂ ಸ್ಯಾನಿಟೈಸರ್ ಸಿಂಪಡಿಸಿ ಹಾಗೂ ಪ್ರತಿ ವಿದ್ಯಾರ್ಥಿಗಳು ಆರೋಗ್ಯ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವಂತೆ ಅರಿವು ಮೂಡಿಸಿ ಎಂದು ತಿಳಿಸಿದರು.
ಮಾರ್ಗಸೂಚಿ ಬಿಡುಗಡೆ: ಉನ್ನತ ಶಿಕ್ಷಣ ಇಲಾಖೆಯಲ್ಲಿ ನ.17ರಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ನಡೆಸಲು ಸರ್ಕಾರದ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆದ್ದರಿಂದ ಕಾಲೇಜಿನ ಹಂತದಲ್ಲಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲು ವಿದ್ಯಾರ್ಥಿಗಳಲ್ಲಿ3 ರೀತಿಯ ತಂಡವನ್ನು ರಚಿಸಿ, 15 ದಿನಕ್ಕೊಮ್ಮೆ ವಿದ್ಯಾರ್ಥಿಗಳಲ್ಲಿ ಕೆಮ್ಮು, ನೆಗಡಿ ಲಕ್ಷಣಗಳು ಕಂಡು ಬಂದರೆ ಪಿಪಿಇ ಕಿಟ್ ಧರಿಸಿ ಅವರನ್ನು ಪರೀಕ್ಷಿಸುವಂತೆ ಸೂಚಿಸಿದರು.
ವೇಳಾಪಟ್ಟಿ ಸಿದ್ಧಪಡಿಸಿಕೊಳ್ಳಿ: ಭೌತಿಕ ತರಗತಿ ನಡೆಸುವಾಗ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ಒಟ್ಟು ತರಗತಿ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಇಲಾಖೆಯಿಂದ ಹೊರಡಿಸಲಾಗಿರುವ ಮತ್ತು ಪ್ರಸ್ತುತ ಮಾರ್ಗಸೂಚಿಗಳ ಪ್ರಕಾರ ದೈಹಿಕ ಅಂತರ ಕಾಪಾಡಿಕೊಂಡು ಸುರಕ್ಷಿತವಾಗಿ ತರಗತಿಗಳನ್ನು ನಡೆ ಸಲು ಅವಶ್ಯವಿರುವಂತೆ ತರಗತಿ ವೇಳಾಪಟ್ಟಿಯನ್ನು ಕಾಲೇಜಿನ ಹಂತದಲ್ಲೇ ಸಿದ್ಧಪಡಿಸಿಕೊಳ್ಳಿ ಎಂದರು.
ವಿದ್ಯಾರ್ಥಿ ನಿಲಯಗಳಲ್ಲಿ, ಸ್ನಾನದ ಕೊಠಡಿಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಜಾಗೃತಿ ಮೂಡಿಸುವಂಥ ಫಲಕಗಳನ್ನು ಹಾಕಬೇಕು. ವಿದ್ಯಾರ್ಥಿಗಳಲ್ಲಿ ಕೋವಿಡ್ ಕಂಡುಬಂದರೆ ಮನೆಯಲ್ಲೇ ಆನ್ಲೈನ್ ತರಗತಿಯಲ್ಲಿ ಹಾಜರಾಗುವಂತೆ ತಿಳಿಸಬೇಕು ಎಂದರು.
ಜಿಪಂ ಉಪಕಾರ್ಯದರ್ಶಿ ಎನ್ .ಡಿ.ಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದಲಿಂಗೇಶ್, ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಪುಪ್ಪಲತಾ ಮತ್ತು ಜಿಲ್ಲಾ ಲೀಡ್ ಕಾಲೇಜಿನ ಪ್ರಾಂಶುಪಾಲ ನಟರಾಜ್ ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು