ಲಕ್ಷ್ಮೀನಾರಾಯಣ ದೇಗುಲಕ್ಕೆ ಡಿಸಿಎಂ ಭೇಟಿ
Team Udayavani, Nov 28, 2019, 5:21 PM IST
ಕೆ.ಆರ್.ಪೇಟೆ: ತಾಲೂಕಿನ ಇತಿಹಾಸ ಪ್ರಸಿದ್ಧ ಹೊಸಹೊಳಲು ಗ್ರಾಮದ ಹೊಯ್ಸಳರ ಕಾಲದ ಶ್ರೀಲಕ್ಷ್ಮೀನಾರಾಯಣಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ದೇವಾಲಯದ ಶಿಲ್ಪಕಲಾ ವೈಭವಕ್ಕೆ ಮನಸೋತರು. ಹೊಸಹೊಳಲು ಶ್ರೀಲಕ್ಷ್ಮೀನಾರಾಯಣ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡರ ಗೆಲುವಿಗಾಗಿ ಪ್ರಾರ್ಥಿಸಿದರು.
ಪ್ರವಾಸಿ ಕೇಂದ್ರವಾಗಿಸಲು ಕ್ರಮ: ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಮಾತನಾಡಿ, ಶ್ರೀ ಲಕ್ಷ್ಮೀನಾರಾ ಯಣ ಸ್ವಾಮಿ ದೇವಸ್ಥಾನ ಪ್ರವಾಸಿಗರಿಂದ ದೂರ ಉಳಿದಿದೆ. ಅದಕ್ಕೆ ಮಾಹಿತಿ ಕೊರತೆಯೇ ಕಾರಣ. ದೇವ ಸ್ಥಾನದ ಅಭಿವೃದ್ಧಿಗೆ ಕ್ರಮ ಕೈಗೊಂಡು, ಪ್ರವಾಸಿ ಕೇಂದ್ರವಾಗಿಸಿ ಟೂರ್ ಗೈಡ್ ಮ್ಯಾಪಿನಲ್ಲಿ ಸೇರಿಸಲು ಕ್ರಮ ಕೈಗೊಳ್ಳ ಲಾಗುವುದು ಎಂದು ತಿಳಿಸಿದರು.
ವಿವಿಧ ದೇಗುಲಗಳ ಅಭಿವೃದ್ಧಿ: ತಾಲೂಕಿನಲ್ಲಿರುವ ಸುಪ್ರಸಿದ್ಧ ಹೊಯ್ಸಳ ದೇವಾಲಯಗಳಾದ ಕಿಕ್ಕೇ ರಿಯ ಶ್ರೀ ಬ್ರಹ್ಮೇಶ್ವರ ದೇವಾಲಯ, ಗೋವಿಂದನ ಹಳ್ಳಿಯ ಪಂಚಲಿಂಗೇಶ್ವರ ದೇವಾಲಯ, ಕಲ್ಲಹಳ್ಳಿಯ ಭೂವರಾಹನಾಥ ದೇವಾಲಯ ಮತ್ತು ಸಾಸಲು ಕ್ಷೇತ್ರದ ಶಂಭುಲಿಂಗೇಶ್ವರ, ಸೋಮೇ ಶ್ವರದೇವಸ್ಥಾನಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ಹಾಗೂ ಮುಜುರಾಯಿ ಸಚಿ ವ ರಲ್ಲಿ ಮನವಿ ಮಾಡುತ್ತೇನೆ ಎಂದೂ ಹೇಳಿದರು.
ಇದೇ ಸಂದರ್ಭದಲ್ಲಿ ಹೊಸಹೊಳಲು ಗ್ರಾಮದಲ್ಲಿ ಮತಪ್ರಚಾರ ಮಾಡಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡರ ಪರ ಮತಯಾಚಿಸಿ, ಕೆಸಿಎನ್ ಅವರನ್ನು ಗೆಲ್ಲಿಸಿದರೆ ಮಂಡ್ಯ ಜಿಲ್ಲೆ ಸಮಗ್ರ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್