ಸತ್ತ ಮೇಕೆ, ಕುರಿ ಮಾಂಸ ಮಾರಾಟ: ಕ್ರಮಕ್ಕೆ ಆಗ್ರಹ
Team Udayavani, Oct 16, 2021, 4:31 PM IST
ಶ್ರೀರಂಗಪಟ್ಟಣ: ಪಟ್ಟಣದ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗ್ರಾಹಕ ರಿಗೆ ಸತ್ತ ಮೇಕೆ, ಕುರಿಗಳ ಮಾಂಸ ಮಾರಾಟವಾಗುತ್ತಿರುವುದು ಬೆಳಕಿಗೆ ಬಂದಿದೆ. ಆರೋಗ್ಯ ಅಧಿಕಾರಿಗಳು ಗಮನಹರಿಸಿ ಆರೋಪಿಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸತ್ತ ಕುರಿ ಹಾಗೂ ಮೇಕೆಗಳನ್ನು ತಕ್ಷಣ ಸುಲಿದು ಮಾಂಸವನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ಮಾಹಿತಿಗಳು ಲಭ್ಯವಾಗಿದೆ. ಪುರಸಭೆ ಆರೋಗ್ಯ ಅಧಿ ಕಾರಿಗಳು ಇಂತಹ ಮಾಂಸ ಮಾರಾಟ ಗಾರರನ್ನು ಕಂಡು ಹಿಡಿದು ಜನರ ಆರೋಗ್ಯದ ಜೊತೆ ಆಟವಾಡುವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:- ಸಾಲು ಸಾಲು ರಜೆ: ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿಗರ ದಂಡು!
ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ: ಉತ್ತರ ಕರ್ನಾಟಕದಿಂದ ಕುರಿ, ಮೇಕೆ ಗಳನ್ನು ವಾಹನಗಳಲ್ಲಿ ತರುವ ವೇಳೆ ಮೃತಪಟ್ಟ ಕುರಿಗಳನ್ನು ಕತ್ತು ಕೂಯಿದು ಅದನ್ನು ತಂದು ನಂತರ ಪಟ್ಟಣದ ಕುರಿ, ಮೇಕೆ ಗಳನ್ನು ಇಳಿಸುವ ಸ್ಥಳದಲ್ಲಿ ಸುಲಿ ದು ಅದರ ಮಾಂಸವನ್ನು ಆಟೋ ಮೂಲಕ ಮಾಂಸದ ಅಂಗಡಿಗಳಿಗೆ ಸಾಗಿಸಿ, ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಸಾರ್ವಜನಿಕರು, ಸತ್ತ ಕುರಿಗಳನ್ನೇ ಗ್ರಾಹಕರಿಗೆ ಮಾಂಸ ಮಾರಾಟ ಶ್ರೀರಂಗ ಪಟ್ಟಣದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ.
ಈ ದಂಧೆಗೆ ಪಟ್ಟಣ, ಪುರಸಭೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಕಡಿ ವಾಣ ಹಾಕಬೇಕು. ಇಲ್ಲವಾದರೆ, ಆರೋಗ್ಯ ಅಧಿಕಾರಿಗಳ ವಿರುದ್ಧ ಪ್ರತಿ ಭಟನೆ ಮಾಡಲಾಗುವುದು ಎಂದು ಮಂಡ್ಯ ರಕ್ಷಣಾ ವೇದಿಕೆ ಕಾರ್ಯ ಕರ್ತರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ