ಮರಗಳ ಮಾರಣಹೋಮ, ಪಕ್ಷಿಗಳ ಮರಣ ಮೃದಂಗ


Team Udayavani, Jan 8, 2018, 6:00 AM IST

Ban08011806Medn-a.jpg

ಕೆ.ಆರ್‌.ಪೇಟೆ: ಪಟ್ಟಣದ ಕಾವೇರಿ ನೀರಾವರಿ ನಿಗಮದ ಕಚೇರಿ ಆವರಣದಲ್ಲಿದ್ದ ಮರಗಳನ್ನು ಇಲಾಖೆ ಅಧಿಕಾರಿಗಳು ಕಡಿದು ಹಾಕಿದ್ದು, ಈ ಮರಗಳನ್ನೇ ಆಶ್ರಯಿಸಿದ್ದ ವಿವಿಧ ಜಾತಿಯ ಪಕ್ಷಿಗಳು ಸಾವಿಗೀಡಾಗಿವೆ. ಈ ಕೃತ್ಯವೆಸಗಿರುವ ಅಧಿಕಾರಿಗಳ ವಿರುದ್ಧ ಪಕ್ಷಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಕಾವೇರಿ ನೀರಾವರಿ ನಿಗಮದ ಹೇಮಾವತಿ ಜಲಾಶಯ ಯೋಜನೆ ಕಚೇರಿ ಮತ್ತು ವಸತಿ ಸಮುಚ್ಚಯದೊಳಗೆ ಸುಮಾರು 50ಕ್ಕೂ ಹೆಚ್ಚು ಮರಗಳಿವೆ. ವಿವಿಧ ಬಗೆಯ ನೂರಾರು ಪಕ್ಷಿಗಳು ಇದೇ ಮರಗಳನ್ನೇ ಆಶ್ರಯಿಸಿಕೊಂಡಿದ್ದವು.

ಹಕ್ಕಿಜ್ವರದ ನೆಪ: ಸುಮಾರು 30ರಿಂದ 40ಮರಗಳನ್ನು ಕಡಿದಿರುವುದಕ್ಕೆ ನಿಗಮದ ಅಧಿಕಾರಿಗಳು ಹಕ್ಕಿಜ್ವರದ ನೆಪವೊಡಿದ್ದಾರೆ. ಹಕ್ಕಿಜ್ವರದ ಸೋಂಕಿನಿಂದ ಕೊಕ್ಕರೆ ಬೆಳ್ಳೂರಿನಲ್ಲಿ ಪೆಲಿಕಾನ್‌ ಹಕ್ಕಿಗಳು ಸಾವನ್ನಪ್ಪಿದ್ದವು ಎಂದಿದ್ದಾರೆ. ಹಕ್ಕಿಜ್ವರದ ಭೀತಿ ಇದ್ದಲ್ಲಿ ಪಶುಸಂಗೋಪನಾ ಇಲಾಖೆ ಅಧಿಕಾರಿಗಳ ಮಾರ್ಗದರ್ಶನ ಪಡೆದು ಅರಣ್ಯ ಇಲಾಖೆಯವರ ನೆರವಿನೊಂದಿಗೆ ಮರದ ಬುಡಕ್ಕೆ ಔಷಧ ಸಿಂಪಡಿಸುವುದು ಸಾಮಾನ್ಯ ಜಾnನ. ಅದನ್ನು ಬಿಟ್ಟು ಮರದ ಬುಡವನ್ನೇ ಕತ್ತರಿಸಿರುವ ನಿಗಮದ ಅಧಿಕಾರಿಗಳ ವಿರುದ್ಧ ಪರಿಸರ ಪ್ರೇಮಿಗಳು ಕಿಡಿಕಾರಿದ್ದಾರೆ.

ಇಲಾಖೆ ಅಧಿಕಾರಿಗಳಿಗೆ ತರಾಟೆ: ಮರದಲ್ಲಿ ವಾಸವಿದ್ದ ಪಕ್ಷಿಗಳು ಹಾಕುವ ಇಕ್ಕೆಯಿಂದ ಕಚೇರಿಯ ಆವರಣ ಮಲಿನಗೊಳ್ಳುತ್ತಿದೆ ಎಂಬ ಕಾರಣದಿಂದ ಹೀಗೆ ಮಾಡಿದ್ದಾರೆ. ಮನುಷ್ಯರಂತೆ ಅವುಗಳಿಗೂ ಬದುಕುವ ಹಕ್ಕಿಲ್ಲವೇ? ಮರ ಕಡಿಯಲು ಅರಣ್ಯ ಇಲಾಖೆಯಿಂದ ಅನುಮತಿ ಪಡೆದಿದ್ದೀರಾ? ಎಂದು ಎಂಜಿನಿಯರ್‌ಗಳನ್ನು ಆಸರೆ ಮಂಜುನಾಥ್‌ ತರಾಟೆಗೆ ತೆಗೆದುಕೊಂಡರು. ಅವರೊಂದಿಗೆ ಸಾರ್ವಜನಿಕರು ನೀರಾವರಿ ನಿಗಮದ ಎಂಜಿನಿಯರ್‌ಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕ್ರಮದ ಭರವಸೆ: ತಾಲೂಕು ಅರಣ್ಯ ಅಧಿಕಾರಿ ರವೀಂದ್ರ ಹಾಗೂ ಉಪ ಅರಣ್ಯಾಧಿಕಾರಿ ರಾಘವೇಂದ್ರ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಸಾವಿಗೀಡಾಗಿರುವ ಪಕ್ಷಿಗಳು, ಕಡಿದುಹಾಕಿದ್ದ ಮರಗಳನ್ನು ವೀಕ್ಷಿಸಿದರು. ಅಧಿಕಾರಿಗಳು ಅನುಮತಿಯಿಲ್ಲದೆ ಏಕಾಏಕಿ ಮರಗಳನ್ನು ಕಡಿದು ಹಾಕಿದ್ದಾರೆ. ಇದರಿಂದ ನೂರಾರು ಪಕ್ಷಿಗಳ ಸಾವಿಗೆ ಕಾರಣವಾಗಿರುವುದು ವನ್ಯಜೀವಿ ಸಂರಕ್ಷಣಾ ಕಾಯಿದೆ ಪ್ರಕಾರ ಅಪರಾಧ. ಹೀಗಾಗಿ ಕಠಿಣ ಕಾನೂನು ಕ್ರಮ ಜರುಗಿಸುವ ಭರವಸೆ ನೀಡಿದರು.

ಜಿಲ್ಲೆಯಲ್ಲಿ ಹಕ್ಕಿಜ್ವರದ ಭೀತಿ ಕಾರಣ ಮರದ ಕೊಂಬೆಗಳನ್ನು ಕತ್ತರಿಸಿ ಪಕ್ಷಿಗಳನ್ನು ಬೇರೆಡೆಗೆ ಹೋಗುವಂತೆ ಮಾಡುವುದು ನಮ್ಮ ಉದ್ದೇಶವಾಗಿತ್ತು. ಮರದಲ್ಲಿ ಪಕ್ಷಿಗಳು ಗೂಡುಕಟ್ಟಿ ಮರಿ ಹಕ್ಕಿಗಳೊಂದಿಗೆ ವಾಸಿಸುತ್ತಿರುವುದು ನಮ್ಮ ಅರಿವಿಗೆ ಬಂದಿರಲಿಲ್ಲ. ಮರಗಳನ್ನು ಸಂಪೂರ್ಣವಾಗಿ ಕಡಿಯದೆ ಕೇವಲ ರೆಂಬೆ-ಕೊಂಬೆಗಳನ್ನು ಮಾತ್ರ ಕತ್ತರಿಸಿದ್ದೇವೆ.
– ನಾರಾಯಣ, ಕಾರ್ಯಪಾಲಕ ಅಭಿಯಂತರ, ಕಾವೇರಿ ನೀರಾವರಿ ನಿಗಮ
 

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.