ಸಾಲಮನ್ನಾ ತಾರತಮ್ಯ ಖಂಡಿಸಿ ಪ್ರತಿಭಟನೆ


Team Udayavani, Dec 18, 2019, 2:56 PM IST

mandya-tdy-1

ಶ್ರೀರಂಗಪಟ್ಟಣ: ಸಾಲಮನ್ನಾ ಯೋಜನೆಯಲ್ಲಿ ರೈತರಿಗೆ ತಾರತಮ್ಯ ಮಾಡುತ್ತಿರುವ ಪಟ್ಟಣದ ಎಸ್‌ಬಿಐ ಶಾಖೆ ಕ್ರಮ ಖಂಡಿಸಿ ರೈತ ಸಂಘದ ಮುಖಂಡರು ಧರಣಿ ನಡೆಸಿದರು.

ಪಟ್ಟಣದ ಮುಖ್ಯ ಬೀದಿಯಲ್ಲಿರುವ ಎಸ್‌ಬಿಐ ಶಾಖೆ ಎದುರು ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಂಜೇಶ್‌ಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಜಮಾಯಿಸಿ ಬ್ಯಾಂಕ್‌ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಬ್ಯಾಂಕಿನಿಂದ ಸಾಲ ಪಡೆದ ರೈತರಿಗೆ ಸರ್ಕಾರದ ಘೋಷಣೆ ಯಂತೆ ಒಂದೇ ಕಂತಿನಲ್ಲಿ ಕಟ್ಟುವ ಸಾಲಕ್ಕೆ ಯಾವುದೇ ಬಡ್ಡಿ ಇಲ್ಲದೆ ಅಸಲು ಮಾತ್ರ ಕಟ್ಟಿಸಿಕೊಂಡು ಅವರಿಗೆ ತೀರುವಳಿ ಪತ್ರ ನೀಡಲಾಗುತ್ತದೆ ಎಂದು ಈಗಾಗಲೇ ಹಲವು ಬ್ಯಾಂಕು ಗಳ ಮುಂದೆ ಬ್ಯಾನರ್‌ ಹಾಕಲಾಗಿದೆ. ಕೆನರಾ, ಕರ್ನಾಟಕ, ವಿಜಯ ಬ್ಯಾಂಕ್‌ ಗಳಲ್ಲಿ ಈ ನಿಯಮ ಪಾಲಿಸುತ್ತಿದ್ದು, ಎಸ್‌ಬಿಐ ಬ್ಯಾಂಕಿನಲ್ಲಿ ಅಸಲು ಕಟ್ಟಿಸಿಕೊಳ್ಳುವ ಬದಲು ಸಾಲ ಪಡೆದ ಹಣಕ್ಕೆ ಬಡ್ಡಿ ಸೇರಿಸಿಕೊಳ್ಳುತ್ತಿದ್ದಾರೆ. ಇದರಿಂದ ಸಾಲ ಪಡೆದ ರೈತರು ಮತ್ತೇ ಸಾಲ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಮಂಜೇಶ್‌ಗೌಡ ಬ್ಯಾಂಕ್‌ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.

ಸ್ವಾರ್ಥಕ್ಕೆ ದುರ್ಬಳಕೆ: ಋಣಮುಕ್ತ ಸಾಲದಲ್ಲಿ ಅಸಲಿಗೆ ಬಡ್ಡಿ ತೆಗೆದುಕೊಂಡು ಸುಸ್ತಿ ಇರುವವರಿಗೆ ಈ ಋಣ ಮುಕ್ತ ಕಾಯಿದೆ ಅನ್ವಯವಾಗಲಿದೆ. ಸರ್ಕಾರದಿಂದ ನೀಡಲಾದ ರೈತರ ಬಡ್ಡಿ ಮತ್ತು ಅಸಲು ಸಾಲ ತಿರುಚಲಾಗುತ್ತಿದೆ. ಒಂದೇ ಕಂತಿನಲ್ಲಿ ಕಟ್ಟುವ(ಓಟಿಪಿ) ಯೋಜನೆ ದುರ್ಬಳಕೆ ಮಾಡಿಕೊಂಡು ರೈತರಿಗೆ ಬ್ಯಾಂಕ್‌ ಅಧಿಕಾರಿಗಳು ಸರಿಯಾದ ಮಾಹಿತಿ ನೀಡದೆ ಯೋಜನೆಯಿಂದ ಆಗುವ ಅನುಕೂಲ ತಮ್ಮ ಬ್ಯಾಂಕಿನ ಸ್ವಾರ್ಥಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಗ್ರಾಹಕರಿಗೆ ವಂಚನೆ: ಬೇರೆಬೇರೆ ಬ್ಯಾಂಕುಗಳಲ್ಲಿ ನೀಡುವ ಸೌಲಭ್ಯ ನೀಡದೆ, ಎಸ್‌ಬಿಐ ಗ್ರಾಹಕರಿಗೆ ವಂಚಿಸಲಾ ಗುತ್ತಿದೆ. ಕೂಡಲೇ ರೈತರ ಸಾಲಮನ್ನಾ ಯೋಜನೆ ಯಿಂದ ಆಗುವ ನಷ್ಟಕ್ಕೆ ಬ್ಯಾಂಕಿನ ಅಧಿಕಾರಿಗಳೇ ಹೊಣೆಗಾರರು. ಹೀಗೆಯೇ ಮುಂದುವರಿದರೆ ರಾಜ್ಯಾದ್ಯಂತ ರೈತ ಸಂಘದ ಕಾರ್ಯಕರ್ತರು ಎಸ್‌ಬಿಐ ಬ್ಯಾಂಕ್‌ ಎದುರು ಉಗ್ರಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಶ್ರೀಕಂಠಯ್ಯ, ಪದ್ಮರಾಜು, ಕೃಷ್ಣಪ್ಪ, ದೇವರಾಜು, ಚಂದ್ರು, ದಸಂಸ ಮುಖಂಡರಾದ ಕುಬೇರಪ್ಪ, ಗಂಜಾಂ ರವಿಚಂದ್ರ, ಮುಂಡಗದೊರೆ ಮೋಹನ್‌ ಇತರರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.