ವಿಕಲಚೇತನರಿಗೆ ಪ್ರಾಮಾಣಿಕವಾಗಿ ಸೌಲಭ್ಯ ತಲುಪಿಸಿ

ಆರ್ಥಿಕ, ಮಾನಸಿಕ, ದೈಹಿಕ ಸಾಮರ್ಥ್ಯ ಕಾಪಾಡಲು ಸಹಕರಿಸಿ: ಜಿಲ್ಲಾಧಿಕಾರಿ ಡಾ.ವೆಂಕಟೇಶ್‌ ಸೂಚನೆ

Team Udayavani, Sep 22, 2020, 2:37 PM IST

ವಿಕಲಚೇತನರಿಗೆ ಪ್ರಾಮಾಣಿಕವಾಗಿ ಸೌಲಭ್ಯ ತಲುಪಿಸಿ

ಮಂಡ್ಯ: ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ವಿಕಲಚೇತನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಮೂಲಕ ಅವರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016ರ ಉಪನಿಯಮ (72)ರಡಿಜಿಲ್ಲಾ ಮಟ್ಟದ ಸಮಿತಿ ರಚಿಸುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ವಿಕಲಚೇತನ ಮಕ್ಕಳಿಗೆ ಅವರಮನೆಗಳಿಗೆ ತೆರಳಿ ಬೋಧಿಸಿ, ಅವರ ಕಲಿಕಸಾಮರ್ಥ್ಯವನ್ನು ಹೆಚ್ಚಿಸಬೇಕು. ಎನ್‌ಜಿಒಗಳಲ್ಲಿ ಅವರಿಗೆ ಅವಶ್ಯಕತೆ ಇರುವ ಪುಸ್ತಕಗಳ ಮಾಹಿತಿ ಪಡೆದು ಅಂಥ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಬೇಕು ಎಂದು ತಿಳಿಸಿದರು.

ಜಾಗೃತಿ ಮೂಡಿಸಿ: 1995ರ ಅಂಗವಿಕಲತೆ ಕಾಯ್ದೆ ಪ್ರಕಾರ ದೈಹಿಕ ಅಂಗವಿಕಲತೆ, ಅಂಧತ್ವ, ವಾಕ್‌ ಮತ್ತು ಶ್ರವಣ ದೋಷ, ಬುದ್ಧಿಮಾಂಧ್ಯತೆ, ಬಹುವಿಧ ಅಂಗವಿಕಲತೆ, ಕುಷ್ಠ ರೋಗ ನಿವಾರಿತ ಅಂಗವಿಕಲತೆ ಮತ್ತು 2016ರ ವಿಕಲಚೇತನರ ಕಾಯ್ದೆ ಪ್ರಕಾರ ದೃಷ್ಟಿದೋಷ, ಮಂದ ದೃಷ್ಟಿ, ಕುಷ್ಠರೋಗದಿಂದ ಗುಣವಾಗಿರುವವರು, ದೈಹಿಕ ಅಂಗವಿಕಲತೆ, ಬೌದ್ಧಿಕ ವಿಕಲತೆ, ಮಾನಸಿಕ ಅಸ್ವಸ್ಥತೆ, ಆಟಿಸಂ ಸ್ಪೆಕ್ಟ್ರಂ ಡಿಸಾರ್ಡರ್, ಮೆದುಳುವಾತ, ಮಸ್ಕ್ಯುಲರ್‌ ಡಿಸ್‌ ಟ್ರೋಪಿ,ಕ್ರೋನಿಕ್‌ನ್ಯೂರೂಲೊಜಿಕಲ್‌ಕಂಡೀಷನ್‌, ನಿರ್ದಿಷ್ಟಕಲಿಕಾ ನ್ಯೂನ್ಯತೆ,ಮಲ್ಟಿಪಲ್‌ ಸ್ಕಿರೋಸಿಸ್‌, ಮಾತು ಮತ್ತು ಭಾಷೆಯ ವಿಕಲತೆ, ತ್ಯಾಲೆಸೀಮಿಯ, ಹೀಮೊಫಿಲಿಯ, ಸ್ಲಕ್‌ ಸೆಲ್‌ ಎನೀಮಿಯ, ಬಹುವಿಧ ಅಂಗವಿಕಲತೆ, ಆಸಿಡ್‌ ದಾಳಿಗೆ ತುತ್ತಾದವರು ಮತ್ತು ಪಾರ್ಕಿನ್ಸನ್‌ ಕಾಯಿಲೆಗಳಿಗೆ ತುತ್ತಾದವರಿಗೆ ಜಾಗೃತಿ ಮೂಡಿಸಬೇಕು ಎಂದರು.

ಎಲ್ಲ ಸೌಲಭ್ಯ ನೀಡಿ: ವಿಕಲಚೇತನರಕಚೇರಿಗೆ ಹೊಸ ಕಟ್ಟಡ ನಿರ್ಮಾಣ ಮಾಡಲು ಸ್ಥಳ ಪರಿಶೀಲಿಸಬೇಕು. ಜಿಲ್ಲೆಯ ಎಲ್ಲ ತಾಲೂಕಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ, ಅಸ್ಪತ್ರೆಗಳಲ್ಲಿ, ಗ್ರಾಮ ಪಂಚಾಯತಿ ಮತ್ತು ನಗರಸಭೆಗಳಲ್ಲಿ ಶೌಚಾಲಯದ ವ್ಯವಸ್ಥೆ ಮಾಡಿ ಹಾಗೂ ಆಧಾರ್‌ ಕಾರ್ಡ್‌ ಇಲ್ಲದೆ ಸಮಸ್ಯೆಇರುವ ವಿಕಲಚೇತನರಿಗೆ ಅವರ ತಂದೆ-ತಾಯಿ ಅಥವಾ ಅವರು ಇರುವ ಸಂಸ್ಥೆಯ ಅಧಿಕಾರಿಗಳ ಹೆಬ್ಬೆರಳಿನ ಮುದ್ರೆಯನ್ನು ಸ್ವೀಕರಿಸಿ, ಆಧಾರ್‌ ಪಡೆದು ಸಿಗುವ ಎಲ್ಲ ಸೌಲಭ್ಯಗಳನ್ನು ನೀಡಬೇಕು ಎಂದು ಸೂಚಿಸಿದರು.

ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಆರ್‌.ರೋಹಿತ್‌, ಜಿಲ್ಲಾಆರೋಗ್ಯಾಧಿಕಾರಿ ಡಾ.ಎಚ್‌.ಪಿ.ಮಂಚೇಗೌಡ,  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜುಮೂರ್ತಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿರಿದ್ದರು.

ನರೇಗಾದಲ್ಲಿ ಉದ್ಯೋಗವ್ಯವಸ್ಥೆ ಮಾಡಿ: ಡೀಸಿ :  ವಿಕಲಚೇತನರ ಆರ್ಥಿಕ, ಸಬಲೀಕರಣವಾಗಿ ಮಾಡಲು ನರೇಗಾದಲ್ಲಿ ಉದ್ಯೋಗದ ವ್ಯವಸ್ಥೆ ಮಾಡಿ ಆರ್ಥಿಕವಾಗಿ, ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರ ಸಾಮರ್ಥ್ಯವನ್ನು ಹೆಚ್ಚಿಸಬೇಕು.ಕೆಎಸ್‌ಆರ್‌ಟಿಸಿ, ಪೊಲೀಸ್‌ ಇಲಾಖೆ, ಲೋಕೋಪಯೋಗಿ ಮತ್ತು ಬಂದರು ಇಲಾಖೆ, ಶಿಕ್ಷಣ ಇಲಾಖೆ ಮತ್ತು ಆಸ್ಪತ್ರೆಗಳಲ್ಲಿನ ಸಿಬ್ಬಂದಿಗಳಿಗೆ ವಿಕಲಚೇತನರ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಅಧಿಕಾರಿಗಳಿಗೆ ತಿಳಿಸಿದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.