ಕಲ್ಲು ಗಣಿಗಾರಿಕೆ ನಿಷೇಧಕ್ಕಾಗಿ ಪಾದಯಾತ್ರೆ
Team Udayavani, Aug 9, 2020, 11:17 AM IST
ಶ್ರೀರಂಗಪಟ್ಟಣ: ಕೆಆರ್ಎಸ್ ಜಲಾಶಯದ 20 ಕಿ. ಮೀ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ನಿಷೇಧಿಸಬೇಕು ಎಂದು ಆಗ್ರಹಿಸಿ, ಪ್ರಗತಿಪರ ಸಂಘಟನೆಗಳು ಆ.10 ರಂದು ಕೆಆರ್ಎಸ್ನಿಂದ ಶ್ರೀರಂಗಪಟ್ಟಣವರೆಗೆ ಪಾದಯಾತ್ರೆ ನಡೆಸಲಿವೆ ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜೇಶ್ ಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆ.10ರ ಬೆಳಗ್ಗೆ 10 ಗಂಟೆಗೆ ಕೆಆರ್ಎಸ್ ಮುಖ್ಯ ದ್ವಾರದಿಂದ ಪಾದಯಾತ್ರೆ ಆರಂಭವಾಗಲಿದೆ. ಹುಲಿಕೆರೆ, ಬೆಳಗೊಳ, ಪಂಪ್ಹೌಸ್, ಪಾಲಹಳ್ಳಿ ಮಾರ್ಗವಾಗಿ ಶ್ರೀರಂಗ ಪಟ್ಟಣ ತಾಲೂಕು ಕಚೇರಿ ತಲುಪಲಿದೆ. ಕಾವೇರಿ- ಕೆಆರ್ಎಸ್ ಉಳಿವಿಗಾಗಿ ಜನಾಂದೋಲನ ಸಮಿತಿ ರಚಿಸಿದ್ದು, ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ಚಿಂತಕರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
85 ವರ್ಷಗಳ ಇತಿಹಾಸವಿರುವ ಕೆಆರ್ಎಸ್ ಅಣೆ ಕಟ್ಟೆಯ ಕಲ್ಲುಗಣಿ ಸ್ಫೋಟ ಮತ್ತು ಭೂಮಿ ಕುಸಿತದಿಂದ ರಕ್ಷಣೆ ಮಾಡಿ, ಇದರ ಸುರಕ್ಷತೆಗಾಗಿ ಮಂಡ್ಯ ಜಿಲ್ಲೆಯ ಅಕ್ರಮ ಗಣಿಗಾರಿಕೆಯನ್ನು ನಿಷೇಧಕ್ಕೆ ಸಮಿತಿ ಸದಸ್ಯರು ಒತ್ತಾಯ ಮಾಡಲಿದ್ದಾರೆ. ಪಾದಯಾತ್ರೆಯ ನಂತರ ಅಂದೇ ಮಧ್ಯಾಹ್ನ 3 ಗಂಟೆಗೆ ತಾಲೂಕು ಕಚೇರಿ ಎದುರು ಬಹಿರಂಗ ಸಭೆ ನಡೆಯಲಿದೆ. ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳ ಹೆಸರಾಂತ ಚಳವಳಿಗಾರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ದಲಿತ ಸಂಘಟನೆ ಸಂಚಾ ಲಕ ನಂಜುಂಡ ಮೌರ್ಯ, ರೈತ ಸಂಘದ ಸಂಚಾಲಕ ನಾಗೇಂದ್ರಸ್ವಾಮಿ, ಕರವೇ ಹರೀಶ್ಗೌಡ, ಮುಂಡಗ ದೊರೆ ಮೋಹನ, ತೇಜು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ