ಸೋಂಕಿನಿಂದ ಪಾರಾಗಲು ಲಸಿಕೆಯೇ ಪರಿಹಾರ: ಅಶ್ವಥ್ನಾರಾಯಣ
Team Udayavani, May 20, 2021, 7:45 PM IST
ಮಂಡ್ಯ: ಕೊರೊನಾ ಸೋಂಕಿನ ವಿರುದ್ಧ ಹೋರಾಡಬೇಕಾದರೆ ಲಸಿಕೆಯಿಂದಲೇ ಸಾಧ್ಯ ಎಂದು ಉಪಮುಖ್ಯಮಂತ್ರಿ ಅಶ್ವಥ್ನಾರಾಯಣ ಹೇಳಿದರು.
ನಗರದ ಮಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ವಾರ್ಡ್ಗೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಪಿಪಿಇ ಕಿಟ್ ಧರಿಸಿ ಸೋಂಕಿತರ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಗೆ ಅಗತ್ಯದಷ್ಟು ಲಸಿಕೆಗಳನ್ನು ಪೂರೈಸಲಾಗುತ್ತಿದೆ. ಅಲ್ಲದೆ, ಲಸಿಕೆ ತಯಾರಿಸಲು ದೊಡ್ಡ ಮಟ್ಟದಲ್ಲಿ ಯೋಜನೆ ತಯಾರಾಗಿದೆ. ಫ್ರಂಟ್ಲೈನ್ ವಾರಿರ್ಸ್ಗಳಿಗೂ ಲಸಿಕೆ ನೀಡಲಾಗುತ್ತಿದ್ದು, ಸಾರ್ವಜನಿಕರು ಲಸಿಕೆ ಪಡೆದುಕೊಳ್ಳಬೇಕು ಎಂದರು.
ಗುಣಮಟ್ಟಕ್ಕೆ ಚಿಕಿತ್ಸೆಗೆ ಆದ್ಯತೆ:
ಜಿಲ್ಲೆಯಾದ್ಯಂತ ಮನೆ ಮನೆಗೆ ತೆರಳಿ ಪರೀಕ್ಷೆ ನಡೆಸಲಾಗುವುದು. ಸೋಂಕಿನ ಲಕ್ಷಣ ಇರುವವರನ್ನು ಗುರುತಿಸಿ ಚಿಕಿತ್ಸೆ ನೀಡಲು ಎಲ್ಲ ರೀತಿಯ ಕ್ರಮ ವಹಿಸಲಾಗಿದೆ. ಮಿಮ್ಸ್ನಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಗುಣಮಟ್ಟ ಚಿಕಿತ್ಸೆ ಹೆಚ್ಚಿಸಲು ಆದ್ಯತೆ ನೀಡಲಾಗುವುದು. ವೈದ್ಯಕೀಯ ಸೇವೆ, ಚಿಕಿತ್ಸೆ, ಸಿಬ್ಬಂದಿಗಳ ನೇಮಕ, ಐಸಿಯು ಬೆಡ್, ಆಕ್ಸಿಜನ್ ಜನರೇಟರ್ ಅಳವಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಪರೀಕ್ಷಾ ವರದಿ ಶೀಘ್ರ:
ಮೊದಲು ಐದು ಮಂದಿಯ ಪರೀಕ್ಷೆಯನ್ನು ಒಂದೇ ಕಿಟ್ನಲ್ಲಿ ನಡೆಸಲಾಗುತ್ತಿತ್ತು. ಇದರಿಂದ ವರದಿ ಬರುವುದು ತಡವಾಗುತ್ತಿತ್ತು. ಆದರೆ ಇನ್ನು ಮುಂದೆ ಒಬ್ಬರಿಗೆ ಒಂದೇ ಪರೀಕ್ಷೆ ನಡೆಸಿ ಅಂದೇ ವರದಿ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದರು.
ಮೂವರಿಗೆ ಬ್ಲಾಕ್ ಫಂಗಸ್:
ಜಿಲ್ಲೆಯಲ್ಲಿ ಮೂವರಿಗೆ ಬ್ಲಾಕ್ ಫಂಗಸ್ ಪತ್ತೆಯಾಗಿರುವ ವರದಿಯಾಗಿದೆ. ಇದರಲ್ಲಿ ಈಗಾಗಲೇ ಇಬ್ಬರಿಗೆ ನೆಗೆಟಿವ್ ಬಂದಿದ್ದು, ಒಬ್ಬರ ವರದಿ ಬರಬೇಕಾಗಿದೆ. ಬ್ಲಾಕ್ ಫಂಗಸ್ ನಿಯಂತ್ರಣಕ್ಕೆ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ