ಆಲಿಕಲ್ಲು ಮಳೆಗೆ ಬೂದುಗುಂಬಳ ನಾಶ
Team Udayavani, Apr 21, 2019, 5:05 PM IST
ಕೆ.ಆರ್.ಪೇಟೆ: ತಾಲೂಕಿನ ಹರಿಹರಪುರ ಗ್ರಾಮದಲ್ಲಿ ಸುರಿದ ಆಲಿಕಲ್ಲು ಸಹಿತ ಮಳೆಯಿಂದಾಗಿ ಕೊಯ್ಲಿಗೆ ಬಂದಿದ್ದ ಬೂದುಗುಂಬಳ ಸಂಪೂರ್ಣ ಹಾಳಾಗಿ ರೈತರನಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಹರಿಹರಪುರ ಗ್ರಾಮದ ರೈತ ಸ್ವಾಮಿ ಅವರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಬೂದುಗುಂಬಳ ಬೆಳೆ ಇನ್ನೇನು ಒಂದೆರಡು ದಿನಗಳಲ್ಲಿ ಬೆಳೆ ಕೊಯ್ಲು ಮಾಡಿ ಮಾರಾಟಕ್ಕೆ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಅಷ್ಟರಲ್ಲಿ ಆಲಿಕಲ್ಲು ಮಳೆ ಸುರಿದು ಕುಂಬಳಕಾಯಿಗೆ ಹಾನಿಯಾಗಿ ಗದ್ದೆಗಳಲ್ಲಿಯೆ ಕೊಳೆಯಲು ಆರಂಭಿಸಿದೆ.
ಸ್ವಾಮಿ ಎರಡು ಎಕರೆ ಜಮೀನಿನಲ್ಲಿ ಬೂದುಗುಂಬಳ ಬೆಳದಿದ್ದರು. ನಾಟಿ ಸೇರಿ ಬೆಳೆ ನಿರ್ವಹಣೆಗೆ 2 ಲಕ್ಷ ರೂ. ಖರ್ಚು ಮಾಡಿ ಬೆಳೆದಿದ್ದರು. ಇನ್ನೂ ಒಂದು ವಾರದಲ್ಲಿ ಕೊಯ್ಲು ಮಾಡಬೇಕಿತ್ತು. ತಾಲೂಕಿನಲ್ಲಿ ಸುರಿದ ಆಲಿಕಲ್ಲು ಮಳೆಗೆ ಬೂದುಗುಂಬಳ ಕಾಯಿ ರಂದ್ರಾಕಾರದಲ್ಲಿ ಕೊರೆದಿದ್ದು, ಸಂಪೂರ್ಣ ಬೆಳೆ ನಷ್ಟವಾಗಿದೆ. ಉತ್ತಮ ಇಳುವರಿ ಕೂಡ ಬರಲಿದೆ ಎಂದು ರೈತ ಭರವಸೆಯಲ್ಲಿದ್ದರು.
ಆದರೆ ಮಳೆಯಿಂದಾಗಿ ನಷ್ಟ ಸಂಭವಿಸಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಇದರಿಂದ ಸ್ವಾಮಿ ಕಂಗಲಾಗಿದ್ದು ತಾಲೂಕು ಆಡಳಿತ ಬೆಳೆ ನಷ್ಟ ಪರಿಹಾರ ಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!