ಬೇಬಿಬೆಟ್ಟದಲ್ಲಿ 92 ಸಜೀವ ಜಿಲೆಟಿನ್‌ ಸ್ಫೋಟಕ ಪತ್ತೆ


Team Udayavani, Aug 10, 2021, 4:43 PM IST

ಬೇಬಿಬೆಟ್ಟದಲ್ಲಿ 92 ಸಜೀವ ಜಿಲೆಟಿನ್‌ ಸ್ಫೋಟಕ ಪತ್ತೆ

ಪಾಂಡವಪುರ: ತಾಲೂಕಿನ ಬೇಬಿಬೆಟ್ಟದ ಅಮೃತಮಹಲ್‌ ಕಾವಲ್‌ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಕಳೆದ ಶನಿವಾರದಿಂದ ಸ್ಫೋಟಕ ಪತ್ತೆ ಮತ್ತು ನಿಷ್ಕ್ರಿಯ ತಂಡದ (ಎಸಿ ಮತ್ತು ಬಿಡಿಡಿಎಸ್‌) ಸಿಬ್ಬಂದಿಗಳು ಸ್ಫೋಟಕಗಳ ಶೋಧಕಾರ್ಯ ನಡೆಸಿ ನಿರ್ಗಮಿಸಿದ್ದು, ಸೋಮವಾರ ಬನ್ನಂಗಾಡಿ ಸರ್ವೆ ನಂ 24ರ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಕುರಿಗಾಹಿಗಳಿಗೆ ಸುಮಾರು 92 ಸಜೀವ ಜಿಲೆಟಿನ್‌ ಸ್ಫೋಟಕ ಮತ್ತು ಅದಕ್ಕೆ ಬಳಸುವ ವಾಹಕ (ತಂತಿ)ಗಳು ಕಣ್ಣಿಗೆ ಬಿದ್ದಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಾಲೂಕಿನ ಬೇಬಿ ಬೆಟ್ಟದ ಕಾವಲ್‌ ಪ್ರದೇಶದಲ್ಲಿ ಪದೇ ಪದೆ ಸ್ಫೋಟಕಗಳು ಪತ್ತೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಸ್ಫೋಟಕ ಪತ್ತೆ ಮತ್ತು ನಿಷ್ಕ್ರಿಯ ದಳದ ತಂಡ ಶನಿವಾರದಿಂದ ನಿರಂತರವಾಗಿ ಶೋಧ ಕಾರ್ಯ ನಡೆಸಿದರೂ ನಿರೀಕ್ಷಿತ ಮಟ್ಟದಲ್ಲಿ ಪತ್ತೆಯಾಗದ ಸ್ಫೋಟಕಗಳು ಕುರಿಗಾಹಿಗಳ ಕಣ್ಣಿಗೆ ಸೋಮವಾರ ಕಾಣಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಆ.7 ರಿಂದ ಸತತ ಮೂರು ದಿನಗಳ ಕಾಲ ಸ್ಫೋಟಕ ಪತ್ತೆ ದಳ ಮತ್ತು ಬಾಂಬ್‌ ನಿಷ್ಕ್ರಿಯ ತಂಡದ ಅಧಿಕಾರಿಗಳು ಬೇಬಿ ಬೆಟ್ಟದ ಅಮೃತ ಮಹಲ್‌ ಕಾವಲ್‌ ಸೇರಿದಂತೆ ಚಿನಕುರಳಿ, ಹೊನಗಾನಹಳ್ಳಿ, ರಾಗಿಮುದ್ದನಹಳ್ಳಿ, ಶಿಂಡಬೋಗನಹಳ್ಳಿ ವ್ಯಾಪ್ತಿಯ ಕ್ವಾರಿ ಮತ್ತು ಕ್ರಷರ್‌ಗಳ ನಿರಂತರ ಶೋಧಕಾರ್ಯ ಕೈಗೊಂಡಿತ್ತು.

ಕಾರ್ಯವೈಖರಿ ಬಗ್ಗೆ ಅನುಮಾನ: ಶೋಧ ಕಾರ್ಯದಲ್ಲಿ ಮೊದಲನೇ ದಿನ ಹಲವು ಸ್ಫೋಟಕಗಳು ಪತ್ತೆಯಾದರೂ ಎರಡನೇ ಮತ್ತು ಮೂರನೇ ದಿನ ಸ್ಫೋಟಕಗಳು ನಿರೀಕ್ಷೆ ಮಟ್ಟದಲ್ಲಿ ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಹಾಸನ, ಮೈಸೂರು ಹಾಗೂ ಮಂಡ್ಯದಿಂದ ಆಗಮಿಸಿದ್ದ ಸ್ಫೋಟಕ ಪತ್ತೆ ದಳ ವಾಪಸ್ಸಾಗಿತ್ತು. ಆದರೆ, ಅವರು ಶೋಧ ನಡೆಸದ ಹಲವು ಸ್ಥಳಗಳಲ್ಲಿ ಸೋಮವಾರ ಸ್ಫೋಟಕಗಳು ಕುರಿಗಾಹಿಗಳ ಕಣ್ಣಿಗೆ ಬಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವುದು ಸ್ಫೋಟಕ ಪತ್ತೆ ದಳದ ಕಾರ್ಯವೈಖರಿ ಬಗ್ಗೆ ಹಲವು ಅನುಮಾನ ಮೂಡಿಸಿದೆ.

ಸ್ಫೋಟಕಗಳು ವಶಕ್ಕೆ: ಸೋಮವಾರ ಬನ್ನಂಗಾಡಿ ವ್ಯಾಪ್ತಿಯ ಸರ್ವೆನಂ 24ರ ಗೋಮಾಳದಲ್ಲಿ 92 ಜಿಲೆಟಿನ್‌ ಟ್ಯೂಬ್‌ಗಳು ಹಾಗೂ 50 ಮೀ.ಉದ್ದದ ಮೆಗ್ಗರ್‌ ಬ್ಲಾಸ್ಟ್‌ಗೆ ಬಳಸುವ ವಾಹಕ (ತಂತಿ) ಕುರಿಗಾಹಿಗಳ ಕಣ್ಣಿಗೆ ಬಿದ್ದಿದೆ. ತಕ್ಷಣ ಎಚ್ಚೆತ್ತ ಪೊಲೀಸರು, ಸ್ಥಳಕ್ಕೆ ತೆರಳಿ ಸ್ಫೋಟಕಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಬಿಡಿಡಿಎಸ್‌ ತಂಡ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ತೆರಳಿ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.

ಗಂಭೀರ ಶೋಧ ಕಾರ್ಯ ಅಗತ್ಯ
ಮೂರು ದಿನಗಳ ಕಾಲ ಸ್ಫೋಟಕ ಪತ್ತೆ ಮತ್ತು ನಿಷ್ಕ್ರಿಯ ದಳದವರು ನಿರಂತರವಾಗಿ ಶೋಧ ಕಾರ್ಯ ನಡೆಸಿದ್ದರೂ, ನಿರೀಕ್ಷಿತ ಮಟ್ಟದಲ್ಲಿ
ಸ್ಫೋಟಕಗಳನ್ನು ಪತ್ತೆ ಹಚ್ಚಲು ಕಾರಣವಾಗದ ಪರಿಣಾಮ ಸ್ಫೋಟಕಗಳು ಕುರಿಗಾಹಿಗಳ ಕಣ್ಣಿಗೆ ಬೀಳುತ್ತಿವೆ. ನೆಪ ಮಾತ್ರಕ್ಕೆ ಶೋಧ ನಡೆಸುವುದನ್ನು ಬಿಟ್ಟು ಗಂಭೀರವಾಗಿ ಶೋಧ ಕಾರ್ಯ ನಡೆಸಿದರೆ ಸಾವಿರಗಟ್ಟಲೇ ಸ್ಫೋಟಕಗಳು ಪತ್ತೆಯಾಗುವುದು ನಿಶ್ಚಿತ ಎನ್ನಲಾಗುತ್ತಿದೆ

ಅನಧಿಕೃತ 10 ಕ್ರಷರ್‌ ವಿರುದ್ಧಕ್ರಮ: ಪ್ರಕರಣ ದಾಖಲು
ಮಂಡ್ಯ: ಶ್ರೀರಂಗಪಟ್ಟಣ ತಾಲೂಕು ವ್ಯಾಪ್ತಿಯಲ್ಲಿ ಗಣಿ ಮತ್ತು ಭೂ ವಿಜಾnನ ಇಲಾಖೆಯಿಂದ ಯಾವುದೇ ಪರವಾನಗಿ ಹಾಗೂ ಅರ್ಜಿ ಸಲ್ಲಿಸದೆ ಅನಧಿಕೃತವಾಗಿ ಸ್ಥಾಪಿಸಲಾಗಿದ್ದ 10 ಕ್ರಷರ್‌ ಘಟಕಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಗಣಿ ಮತ್ತು ಭೂವಿಜ್ಞಾನಿ ಎಂ.ವಿ.ಪದ್ಮಜಾ ತಿಳಿಸಿದ್ದಾರೆ.

ಶ್ರೀರಂಗಪಟ್ಟಣ ತಾಲೂಕಿನ ಜಕ್ಕನಹಳ್ಳಿ, ಆಲಗೋಡು, ಗಣಂಗೂರು, ಹಂಗರಹಳ್ಳಿ, ಗೌಡಹಳ್ಳಿ, ಮುಂಡುಗದೊರೆ, ನೀಲನಕೊಪ್ಪಲು ಗ್ರಾಮಗಳ ವ್ಯಾಪ್ತಿಯಲ್ಲಿ ಯಾವುದೇ ಪರವಾನಗಿ ಪಡೆಯದೇ ಹಾಗೂ ಅರ್ಜಿ ಸಲ್ಲಿಸದೆ ಅನಧಿಕೃತವಾಗಿ ಕ್ರಷರ್‌ ಘಟಕಗಳನ್ನು ಸ್ಥಾಪಿಸಿದ್ದ 10 ಕ್ರಷರ್‌ಗಳ ಮೇಲೆ ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ನಿಯಂತ್ರಣ ಮತ್ತು ಲೈಸೆನ್ಸಿಂಗ್‌ ಪ್ರಾಧಿಕಾರದ ಸೂಚನೆಯಂತೆ 17 ಮಂದಿ ಮೇಲೆ ಶ್ರೀರಂಗಪಟ್ಟಣ ನ್ಯಾಯಾಲಯದಲ್ಲಿ ಖಾಸಗಿ ಪ್ರಕರಣ(ಪಿಸಿಆರ್‌) ದಾಖಲಿಸಲಾಗಿದೆ.

ಇದನ್ನೂ ಓದಿ:ಎಲ್ ಐ ಸಿಯ ಈ ಪಾಲಿಸಿ ನೀವು ಪಡೆದರೇ, ಇಷ್ಟು ಪ್ರಮಾಣದಲ್ಲಿ ನಿಮಗೆ ಪಿಂಚಣಿ ಲಭ್ಯವಾಗುತ್ತದೆ.!?

ಕ್ರಷರ್‌ ಮಾಲೀಕರಾದ ಜಕ್ಕನಹಳ್ಳಿ ವ್ಯಾಪ್ತಿಯ ಜೆ.ದೇವರಾಜು, ಜೆ.ಮಹದೇವು, ಶ್ರೀಕಾಂತ್‌, ಆಲಗೋಡು ವ್ಯಾಪ್ತಿಯ ಚೆನ್ನವೆಂಕಟಯ್ಯ,
ಜಿ.ಆರ್‌.ನಂದೀಶ್‌, ಗಣಂಗೂರು ವ್ಯಾಪ್ತಿಯ ವೆಂಕಟಸ್ವಾಮಿ, ಎಂ.ವಿ.ಸತೀಶ್‌, ಹಂಗರಹಳ್ಳಿ ವ್ಯಾಪ್ತಿಯ ಸಿ.ಆರ್‌.ರಮೇಶ್‌, ಪುನೀತ್‌ಗೌಡ
ಗೌಡಹಳ್ಳಿ ವ್ಯಾಪ್ತಿಯ ಕೃಷ್ಣಯ್ಯ ಭಾಸ್ಕರ, ಲಿಂಗೇಗೌಡ, ಮುಂಡುಗದೊರೆ ವ್ಯಾಪ್ತಿಯ ಸಿ.ಬಿ.ನಾರಾಯಣಗೌಡ, ಸಿ.ಎನ್‌.ಸೋನಿಯಾ,
ಕೆ.ಶಿವಕುಮಾರ್‌, ನೀಲನಕೊಪ್ಪಲು ವ್ಯಾಪ್ತಿಯ ಮೋಟಯ್ಯ, ಸೋಮಶೇಖರ್‌ ಅವರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

ಜಂಟಿ ತಂಡ ರಚನೆ: ಜಿಲ್ಲೆಯಾದ್ಯಂತ ಅನಧಿಕೃತ ಗಣಿಗಾರಿಕೆ ಹೊಂಡಗಳಲ್ಲಿ ಹೊರ ತೆಗೆದಿರುವ ಕಟ್ಟಡ ಕಲ್ಲಿನ ಪ್ರಮಾಣವನ್ನು ಅಂದಾಜಿಸಿ ನಕ್ಷೆಯೊಂದಿಗೆ ವರದಿ ನೀಡಲು ಜಂಟಿ ತಂಡವನ್ನು ಜಿಲ್ಲಾಧಿಕಾರಿ ಎಸ್‌.ಅಶ್ವಥಿ ರಚಿಸಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.