ಮಂಡ್ಯ ಅಭಿವೃದ್ಧಿಗೆ 660 ಕೋಟಿ ರೂ. ಪ್ರಸ್ತಾವನೆ


Team Udayavani, Feb 21, 2022, 2:36 PM IST

ಮಂಡ್ಯ ಅಭಿವೃದ್ಧಿಗೆ 660 ಕೋಟಿ ರೂ. ಪ್ರಸ್ತಾವನೆ

ಮಂಡ್ಯ: ಬೆಂಗಳೂರು-ಮೈಸೂರು ದೊಡ್ಡ ಹಳ್ಳಿಯಂತಿರುವ ಮಂಡ್ಯ ನಗರ ಅಭಿವೃದ್ಧಿಗೆಸುಮಾರು 660 ಕೋಟಿ ರೂ.ಗಳ ಅನುದಾನಕ್ಕೆನಗರಸಭೆ ಆಡಳಿತ ಮಂಡಳಿ ಪ್ರಸ್ತಾವನೆ ಸಲ್ಲಿಸಿದ್ದು,ಬಜೆಟ್‌ನಲ್ಲಿ ನಗರ ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ನಿರೀಕ್ಷಿಸಲಾಗಿದೆ.

ನಗರದಲ್ಲಿ ಅನೇಕ ಸಮಸ್ಯೆಗಳಿವೆ. ಪ್ರತಿನಿತ್ಯನಗರ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ನಗರದ ಬಹುತೇಕ ರಸ್ತೆಗಳು ಅದ್ವಾನಗೊಂಡಿವೆ. ಯುಜಿಡಿ ಆಧುನೀಕರಣ,ಸುಸಜ್ಜಿತ ಮಾರುಕಟ್ಟೆ ನಿರ್ಮಾಣ, ಮಹಾವೀರವೃತ್ತದ ರೈಲ್ವೆ ಮೇಲ್ಸುತುವೆ ನಿರ್ಮಾಣ,ಉದ್ಯಾನಗಳ ಅಭಿವೃದ್ಧಿ, ಕುಡಿಯುವ ನೀರುಸರಬರಾಜಿಗೆ ಪೈಪ್‌ಲೈನ್‌ ಅಳವಡಿಕೆ, ಡ್ರೆçನೇಜ್‌, ವಿದ್ಯುತ್‌ ದೀಪಗಳು ಸೇರಿದಂತೆ ವಿವಿಧ ಅಭಿವೃದ್ಧಿಗೆಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಹದಗೆಟ್ಟಿರುವ ರಸ್ತೆಗಳು: ಅಮೃತ್‌ ಯೋಜನೆಯಡಿ ಜಲಮಂಡಳಿಯಿಂದ ಕುಡಿಯುವ ನೀರು ಸರಬರಾಜುಮಾಡುವ ಕಾಮಗಾರಿ ಪ್ರಗತಿಯಲ್ಲಿದ್ದು, ಪೈಪ್‌ಲೈನ್‌ಹಾಗೂ ಮನೆ ಮನೆಗೆ ನಲ್ಲಿ ಅಳವಡಿಸುತ್ತಿ ರುವುದರಿಂದ ನಗರದ ಬಹುತೇಕ ರಸ್ತೆಗಳನ್ನು ಗುಂಡಿ ತೋಡಲಾಗಿದೆ.ಇದರಿಂದ ಎಲ್ಲ ರಸ್ತೆಗಳು ಹಳ್ಳ ದಿಣ್ಣೆಗಳಿಂದ ಕೂಡಿದ್ದು,ಮಳೆ ಬಂದರೆ ಎಲ್ಲ ರಸ್ತೆಗಳಲ್ಲಿ ನೀರು ನಿಂತು ಕೊಚ್ಚೆಗುಂಡಿಗಳಂತಾಗುತ್ತವೆ. ಪ್ರತಿನಿತ್ಯ ವಾಹನ ಸವಾರರು ಪರದಾಡುವಂತಾಗಿದೆ. ನಗರದ ಎಲ್ಲ ರಸ್ತೆಗಳ ಸಂಪೂರ್ಣಅಭಿವೃದ್ಧಿಗೆ 350 ಕೋಟಿ ರೂ. ಅಗತ್ಯವಾಗಿದೆ.

ಯುಜಿಡಿ ಆಧುನೀಕರಣಕ್ಕೆ 150 ಕೋಟಿ ರೂ.:ನಗರದಲ್ಲಿ ಯುಜಿಡಿ ಸಮಸ್ಯೆ ತಲೆ ನೋವಾಗಿಪರಿಣಮಿಸಿದೆ. ಈಗಾಗಲೇ ಸುಮಾರು ವರ್ಷಗಳಹಿಂದೆ ಮಾಡಿರುವುದರಿಂದ ತುಂಬಾಹಳೆಯದಾಗಿದ್ದು, ಅದನ್ನು ಆಧುನೀಕರಣಗೊಳಿಸಿಸುಸಜ್ಜಿತ ಯುಜಿಡಿ ಅಭಿವೃದ್ಧಿ ಮಾಡಲು 150 ಕೋಟಿರೂ. ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಪಾರ್ಕ್‌ಗಳ ಅಭಿವೃದ್ಧಿ: ನಗರದಲ್ಲಿರುವ ಪಾರ್ಕ್‌ಗಳ ಅಭಿವೃದ್ಧಿ ಮಾಡಲು ಅನುದಾನ ಅಗತ್ಯವಾಗಿದೆ. ಎಲ್ಲಪಾರ್ಕ್‌ಗಳಲ್ಲಿ ಮೂಲ ಸೌಲಭ್ಯಗಳ ಕೊರತೆ ಇದೆ.ವಾಯು ವಿಹಾರಕ್ಕೆ ಬೇಕಾದ ಎಲ್ಲ ಸೌಲಭ್ಯ, ಸ್ವಚ್ಛತೆ,ಕಸ ನಿರ್ವಹಣೆ ಮಾಡುವ ಅಗತ್ಯವಿದೆ.

ಅಮೃತ್‌ ಯೋಜನೆ ಪೂರ್ಣಕ್ಕೆ 85 ಕೋಟಿ ರೂ.: ನಗರದಲ್ಲಿ ಪ್ರಗತಿಯಲ್ಲಿರುವ ಅಮೃತ್‌ ಯೋಜನೆ ಅರ್ಧಕ್ಕೆ ನಿಂತಿದ್ದು, ಪೂರ್ಣಗೊಳಿಸಲು ಇನ್ನೂ 85 ಕೋಟಿ ರೂ. ಅಗತ್ಯವಿದೆ. ಈಗಾಗಲೇ 12 ವಾರ್ಡ್ ಗಳಿಗೆ ಮಾತ್ರ 24 ಗಂಟೆಗಳ ಕುಡಿಯುವ ನೀರುಸರಬರಾಜು ಮಾಡು ವ ಕಾಮಗಾರಿ ಮುಗಿದಿದೆ. ಉಳಿದ 19 ವಾರ್ಡ್‌ಗಳಿಗೆ 24 ಗಂಟೆಗಳ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿ ಪೂರ್ಣಗೊಂಡಿಲ್ಲ. ಶೀಘ್ರ ಕಾಮಗಾರಿ ಮುಗಿಸಲು ಅನುದಾನ ಬಿಡುಗಡೆಗೆ ಕೋರಲಾಗಿದೆ.

ಮಹಾವೀರ ವೃತ್ತದ ಕಾಮಗಾರಿಗೆ ಅನುದಾನ: ಮಳೆಬಂದರೆ ಬೆಂಗಳೂರು-ಮೈಸೂರು ಹೆದ್ದಾರಿ ನಗರಸಭೆಕಚೇರಿ ಪಕ್ಕದಲ್ಲಿಯೇ ಇರುವ ಮಹಾವೀರ ವೃತ್ತದಲ್ಲಿನೀರು ನಿಂತು ಕೆರೆಯಂತಾಗುತ್ತದೆ. ಇದರಿಂದ ಸಾಕಷ್ಟು ತೊಂದರೆಗಳಾಗುತ್ತಿವೆ. ಇದು ಪ್ರತಿ ವರ್ಷವೂಮಳೆಗಾಲ ಸಂದರ್ಭದಲ್ಲಿ ಸಮಸ್ಯೆ ತಲೆದೋರುತ್ತದೆ. ಆದ್ದರಿಂದ ಮಳೆ ಬಂದಾಗ ನೀರು ಸರಾಗವಾಗಿ ಹರಿಯುವಂತೆ ಮಾಡಲು ಕಾಮಗಾರಿ ನಡೆಸಲು ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮಾರುಕಟ್ಟೆ ನಿರ್ಮಾಣಕ್ಕೆ  48 ಕೋಟಿ ರೂ. ಮಂಡ್ಯದ ಹೃದಯಭಾಗದಲ್ಲಿರುವ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸುವ ಯೋಜನೆ ಬಹಳವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಅದಕ್ಕಾಗಿ ಸುಮಾರು 48 ಕೋಟಿ ರೂ. ಅನುದಾನ ಅಗತ್ಯವಾಗಿದೆ. ಈಗಾಗಲೇ ಮಾರುಕಟ್ಟೆ ನಿರ್ಮಾಣಕ್ಕೆ ಬೇಕಾದ ಎಲ್ಲ ಸಿದ್ಧತೆಗಳು ನಡೆದಿದೆ. ಆದರೆ ಅನುದಾನದ ಕೊರತೆಯಿಂದ ವಿಳಂಬವಾಗುತ್ತಲೇ ಬಂದಿದೆ. ವರ್ಷದಿಂದ ವರ್ಷಕ್ಕೆ ಅನುದಾನದ ಅವಶ್ಯಕತೆ ಹೆಚ್ಚುತ್ತಲೇ ಇದೆ. ಆದ್ದರಿಂದ ಬಜೆಟ್‌ನಲ್ಲಿ ಹಣ ನೀಡುವ ಬಗ್ಗೆ ನಿರೀಕ್ಷಿಸಲಾಗಿದೆ.

50 ಕೋಟಿ ರೂ. ಬಿಡುಗಡೆಗೆ ಮನವಿ :

ಹಿಂದೆ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಂಡ್ಯ ನಗರದ ರಸ್ತೆಗಳ ಅಭಿವೃದ್ಧಿಗೆ ಬಿಡುಗಡೆಮಾಡಲಾಗಿದ್ದ 50 ಕೋಟಿ ರೂ. ಅನುದಾನವನ್ನುಬಿಜೆಪಿ ಸರ್ಕಾರ ವಾಪಸ್‌ ಪಡೆದಿತ್ತು. ಅದನ್ನುಮತ್ತೆ ಬಿಡುಗಡೆ ಮಾಡಬೇಕು ಎಂದು ಪ್ರಸ್ತಾವನೆಯಲ್ಲಿ ಕೋರಲಾಗಿದೆ.

ಮಂಡ್ಯ ನಗರದ ಸಮಗ್ರ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಅನುದಾನ ಘೋಷಣೆಗೆ 660 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. ಚರಂಡಿ,ಯುಜಿಡಿ ಆಧುನೀಕರಣ, ರಸ್ತೆಗಳ ಅಭಿವೃದ್ಧಿ, ಅಮೃತ್‌ ಯೋಜನೆ ಕಾಮಗಾರಿ ಪೂರ್ಣಗೊಳಿಸುವ, ಉದ್ಯಾನಗಳ ಅಭಿವೃದ್ಧಿ ಸೇರಿದಂತೆ ಇಡೀ ನಗರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಚ್‌.ಎಸ್‌.ಮಂಜು, ಅಧ್ಯಕ್ಷರು, ನಗರಸಭೆ, ಮಂಡ್ಯ

 

ಎಚ್‌.ಶಿವರಾಜು

ಟಾಪ್ ನ್ಯೂಸ್

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.