8.5 ಕೋಟಿ ರೂ. ಅನುದಾನ ಸಮಾನ ಹಂಚಿಕೆ: ಪುಟ್ಟರಾಜು


Team Udayavani, Feb 28, 2022, 2:02 PM IST

8.5 ಕೋಟಿ ರೂ. ಅನುದಾನ ಸಮಾನ ಹಂಚಿಕೆ: ಪುಟ್ಟರಾಜು

ಪಾಂಡವಪುರ: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಪುರಸಭೆಗೆ ಸರ್ಕಾರದಿಂದ ಹಂಚಿಕೆಯಾಗಿರುವ 8.5 ಕೋಟಿರೂ. ಅನುದಾನವನ್ನು ಪಟ್ಟಣದ ಎಲ್ಲಾ 23 ವಾರ್ಡ್ಗಳಿಗೂ ಸಮಾನವಾಗಿ ಹಂಚಿಕೆ ಮಾಡುವ ಮೂಲಕ ಪಟ್ಟಣದ ಅಭಿವೃದ್ಧಿಗೆ ಶ್ರಮಿಸುವಂತೆ ಶಾಸಕ ಸಿ.ಎಸ್‌.ಪುಟ್ಟರಾಜು ಸೂಚಿಸಿದರು.

ಪುರಸಭೆ ಸಭಾಂಗಣದಲ್ಲಿ ಕರೆಯಲಾಗಿದ್ದ ತುರ್ತುಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದಿಂದ ಬಿಡುಗಡೆಯಾಗಿರುವ 10 ಕೋಟಿ ರೂ. ಅನುದಾನದಲ್ಲಿ 8.5 ಕೋಟಿ ರೂ.ಗಳಿಗೆ ಕ್ರಿಯಾಯೋಜನೆ ತಯಾರಿಸಿದ್ದು,ಪರಿಶಿಷ್ಟ ಜಾತಿ ಕಲ್ಯಾಣ ಕಾರ್ಯಕ್ರಮಗಳಿಗೆ 145.78 ಲಕ್ಷ ರೂ, ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗೆ 59.08 ಲಕ್ಷ ರೂ., ಬಡವರ ಕಲ್ಯಾಣಕ್ಕಾಗಿ 61.63 ಲಕ್ಷ ರೂ. ಅಂಗವಿಕಲರಕಲ್ಯಾಣಕ್ಕಾಗಿ 42.50 ಲಕ್ಷ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದರು.

ಕ್ರಿಯಾ ಯೋಜನೆ: ಪುರಸಭೆ ವ್ಯಾಪ್ತಿಯಲ್ಲಿ ಕೆ.ಬೆಟ್ಟಹಳ್ಳಿ ರಸ್ತೆಯಲ್ಲಿ ಹೊಸದಾಗಿ ಕರ್ನಾಟಕನಗರ ನೀರು ಸರಬರಾಜು ಮಂಡಳಿಯಿಂದನಿರ್ಮಿಸುತ್ತಿರುವ ಓವರ್‌ಹೆಡ್‌ ಟ್ಯಾಂಕ್‌ನಿಂದ ಪ್ರವಾಸಿ ಮಂದಿರವರೆಗೆ 200 ಮಿ.ಮೀ ಎಚ್‌ಡಿಪಿಇ ವಿತರಣಾ ಪೈಪ್‌ ಅಳವಡಿಸುವಕಾಮಗಾರಿಗೆ 11.82 ಲಕ್ಷ ರೂ.ಗಳನ್ನು ಅಮೃತನಗರೋತ್ಥಾನ ಯೋಜನೆಯಡಿ ಬರಿಸಲು ಕ್ರಿಯಾಯೋಜನೆ ತಯಾರಿಸಲಾಗಿದೆ.

ಫಿಲ್ಟರ್‌ಬೆಡ್‌ ಬದಲಾವಣೆ: ಹಾರೋಹಳ್ಳಿ ಪಂಪ್‌ಹೌಸ್‌ನ ಕಾಂಪೌಂಡ್‌ ವೆಲ್‌ಗೆ ನೀರುಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಲು ಗೈಡ್‌ವಾಲ್‌ನಿರ್ಮಾಣ ಮತ್ತು ಪಂಪ್‌ಹೌಸ್‌ ಸುತ್ತಕಾಂಪೌಂಡ್‌ ನಿರ್ಮಾಣ ಹಾಗೂ ದರಸಗುಪ್ಪೆ ಮತ್ತುಕೃಷ್ಣಾನಗರ ನೀರು ಶುದ್ಧೀಕರಣ ಘಟಕಗಳ ಫಿಲ್ಟರ್‌ ಬೆಡ್‌ ಬದಲಾವಣೆ ಕಾಮಗಾರಿಗೆ 50 ಲಕ್ಷ ರೂ, ಸ್ವಚ್ಛಭಾರತ್‌ ಮಿಷನ್‌ ಯೋಜನೆಯಡಿ ಸಮಗ್ರ ಘನತಾಜ್ಯ ನಿರ್ವಹಣೆಗಾಗಿ ವಿಸ್ಕೃತ ಯೋಜನೆಗೆ ಒಟ್ಟು ಮೊತ್ತು 500.19ಲಕ್ಷ ರೂ.ಗಳಿಗೆ.

243.46 ಲಕ್ಷ ರೂ.ಮೀರುವಂತಿಲ್ಲ: ಸ್ಥಳೀಯಸಂಸ್ಥೆ ವಂತಿಕೆ ಮೊತ್ತ 208.43 ಲಕ್ಷ ಬರಿಸಬೇಕಿದ್ದು, ಈಗಾಗಲೇ ಎಸ್‌ಎಫ್‌ಸಿ ಮತ್ತು 14ನೇ ಹಣಕಾಸುವಿವಿಧ ಸಾಲಿನ ಅನುದಾನಗಳಡಿಯಲ್ಲಿ ಈವರೆಗೆ77.02ಲಕ್ಷ ರೂ.ಗಳನ್ನು ಪಾವತಿಸಿದ್ದು, ಉಳಿಕೆಮೊತ್ತ 131.41 ಲಕ್ಷ ರೂ. ಪುರಸಭೆ ವಂತಿಕೆ ಪಾವತಿಸಲು, ರಸ್ತೆ ಅಭಿವೃದ್ಧಿ, ರಸ್ತೆ ಬದಿ ಚರಂಡಿನಿರ್ಮಾಣ ಕಾಮಗಾರಿ, ಪುಟ್‌ಪಾತ್‌ ಟ್ರಾಫಿಕ್‌ ಮ್ಯಾನೆಜ್‌ಮೆಂಟ್‌ ಅಂದರೆ, ರಸ್ತೆ ಸೂಚನಾ ಫಲಕ, ಮಾಹಿತಿ ಫಲಕ ಹಾಗೂ ಇತರೆ ಟ್ರಾಫಿಕ್‌ಗೆ ಸಂಬಂಧಪಟ್ಟ ಅಭಿವೃದ್ಧಿ ಕಾಮಗಾರಿಗಳಿಗೆ ಉಳಿದ ಮೊತ್ತ 347.80 ಲಕ್ಷ ರೂ.ಗಳಲ್ಲಿ ಶೇ.70 ಅಂದರೆ 243.46 ಲಕ್ಷಗಳನ್ನು ಮೀರುವಂತಿಲ್ಲ.

ಸರ್ವಾನುಮತದಿಂದ ಒಪ್ಪಿಗೆ: 228.45ಲಕ್ಷ ಬಳಕೆ ಮಾಡುವುದು, ಮಳೆ ನೀರು, ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ 52 ಲಕ್ಷ ರೂ., ಇತರೆಅಭಿವೃದ್ಧಿ ಕಾಮಗಾರಿಗಳಾದ ಕಚೇರಿ ಕಟ್ಟಡ ನಿರ್ಮಾಣ, ಸಮುದಾಯ ಮತ್ತು ಸಾರ್ವಜನಿಕ ಶೌಚಾಲಯ ನಿರ್ಮಾಣ, ಆಧುನಿಕ ಬಸ್‌ ನಿಲ್ದಾಣ ನಿರ್ಮಾಣ, ಮಾರುಕಟ್ಟೆ ಸಂಕೀರ್ಣ ನಿರ್ಮಾಣ,ಬೀದಿ ದೀಪ ಕಾಮಗಾರಿಗಳು, ಗ್ರಂಥಾಲಯ ಕಟ್ಟಡ ನಿರ್ಮಾಣ, ಅಂಗನವಾಡಿ ಕಟ್ಟಡ ನಿರ್ಮಾಣ ಉದ್ಯಾನವನ ಮತ್ತು ಆಟದ ಮೈದಾನದ ಕಾಮಗಾರಿಗಳನ್ನು ಕೈಗೊಳ್ಳಲು 67.34 ಲಕ್ಷ ರೂ.ಗಳಿಗೆ ಕ್ರಿಯಾಯೋಜನೆ ಸಿದ್ಧಪಡಿಸಿ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆಯಲು ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಲಾಯಿತು.

ಮಧ್ಯವರ್ತಿಗಳನ್ನು ಅವಲಂಬಿಸಬೇಡಿ: ಸದಸ್ಯ ಪಾರ್ಥಸಾರಥಿ ಮಾತನಾಡಿ, ಪುರಸಭೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು,ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆಮಧ್ಯವರ್ತಿಗಳನ್ನೇ ಅವಲಂಬಿಸಬೇಕಾದ ಪರಿಸ್ಥತಿಇದ್ದು, ಇದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು.ಪಟ್ಟಣದ ಡಾ.ರಾಜ್‌ಕುಮಾರ್‌ ವೃತ್ತದಲ್ಲಿ ರಾಜ್‌ಕುಮಾರ್‌ ಹಾಗೂ ಕಾಮನ ಚೌಕದಲ್ಲಿ ಪುನೀತ್‌ರಾಜಕುಮಾರ್‌ ಪುತ್ಥಳಿ ಸ್ಥಾಪಿಸಬೇಕು. ಎಲ್ಲಾವಾರ್ಡ್‌ಗಳಿಗೂ ನಾಮಫಲಕ ಮತ್ತು ಸೂಚನಾ ಫಲಕ ಅಳವಡಿಸಬೇಕು. ಚರಂಡಿಗಳಿಗಳಿಗೆ ಬ್ಲೀಚಿಂಗ್‌ ಪೌಡರ್‌ ಸಿಂಪಡಿಸಿ ಸ್ವತ್ಛತೆಗೆ ಆದ್ಯತೆನೀಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಿದರು.

ಈ ವೇಳೆ ಅಧ್ಯಕ್ಷೆ ವಿ.ಕೆ.ಅರ್ಚನಾ ಚಂದ್ರು,ಉಪಾಧ್ಯಕ್ಷೆ ಶ್ವೇತಾ ಉಮೇಶ್‌, ಮುಖ್ಯಾ ಕಾರಿವೀಣಾ, ಸದಸ್ಯರದ ಶಿವಕುಮಾರ್‌, ಆರ್‌.ಸೋಮಶೇಖರ್‌, ಗೀತಾ ಅರು¾ಗಂ, ಬಿ.ವೈ.ಬಾಬು ಇತರರು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.