ನಗರಸಭೆ ಅಧಿಕಾರಿಗಳ ಸರ್ವಾಧಿಕಾರಿ ಧೋರಣೆ

50 ಕೋಟಿ ರೂ. ಕಾಮಗಾರಿಗೆ ವರ್ಷದ ಬಳಿಕ ಡಿಪಿಆರ್‌ • ಅಧಿಕಾರಿಗಳ ನಡುವೆ ಸಾಮರಸ್ಯ ಕೊರತೆ, ಹಳ್ಳ ಹಿಡಿದ ಆಡಳಿತ

Team Udayavani, Jun 11, 2019, 11:19 AM IST

mandya-tdy-1..

ಮಂಡ್ಯದ ನೂರಡಿ ರಸ್ತೆ ಅಭಿವೃದ್ಧಿ ಕಾಮಗಾರಿ ಆಮೆಗತಿಯಲ್ಲಿ ಸಾಗಿರುವುದು.

ಮಂಡ್ಯ: ಕಳೆದ ವರ್ಷ ಬಜೆಟ್‌ನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ನಗರಾಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ನಡಿ ನೀಡಿದ 50 ಕೋಟಿ ರೂ. ಹಣಕ್ಕೆ ಒಂದು ವರ್ಷದ ಬಳಿಕ ಈಗ ಯೋಜನಾ ವರದಿ (ಡಿಪಿಆರ್‌) ಸಿದ್ಧಗೊಂಡಿದೆ. ಹದಿನೈದು ಅಥವಾ ಒಂದು ತಿಂಗಳೊಳಗೆ ಪೂರ್ಣಗೊಳಿಸಬಹುದಾದ ಡಿಪಿಆರ್‌ಗೆ ಒಂದು ವರ್ಷ ಹಿಡಿದಿರುವುದು ನಗರಸಭೆ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಈಗ ಯೋಜನಾ ವರದಿ ಸಿದ್ಧಗೊಂಡಿದೆಯಾದರೂ ಅದಕ್ಕಿನ್ನೂ ತಾಂತ್ರಿಕ ಹಾಗೂ ಆಡಳಿತಾತ್ಮಕ ಅನುಮೋದನೆ ಸಿಗಬೇಕಿದೆ. ಈ ಪ್ರಕ್ರಿಯೆ ವೇಗವಾಗಿ ನಡೆದರೆ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳಬಹುದು. ಇಲ್ಲದಿದ್ದರೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಗಳನ್ನೂ ತಳ್ಳಿಹಾಕುವಂತಿಲ್ಲ. ಅಧ್ಯಕ್ಷ-ಉಪಾಧ್ಯಕ್ಷರಿಲ್ಲದ ನಗರಸಭೆಯಲ್ಲಿ ಅಧಿಕಾರಿಗಳ ನಡುವೆ ಸಾಮರಸ್ಯದ ಕೊರತೆಯಿಂದ ಆಡಳಿತ ಹಳ್ಳ ಹಿಡಿದಿದೆ.

50 ಕೋಟಿ ವಿಶೇಷ ಪ್ಯಾಕೇಜ್‌: 2018-19ನೇ ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡ್ಯ ನಗರದ ಸರ್ವತೋಮುಖ ಅಭಿವೃದ್ಧಿಗೆ 50 ಕೋಟಿ ರೂ. ವಿಶೇಷ ಪ್ಯಾಕೇಜ್‌ ಘೋಷಿಸಿದ್ದರು. ಅಧಿಕಾರಿಗಳಿಗೆ ಅಭಿವೃದ್ಧಿಯ ಕಾಳಜಿ ಇದ್ದಿದ್ದರೆ ಹಣ ಘೋಷಿಸಿದ ಬೆನ್ನಲ್ಲೇ ಸಮಗ್ರ ಯೋಜನಾ ವರದಿಯನ್ನು ರೂಪಿಸಿಟ್ಟುಕೊಂಡು ಸರ್ಕಾರದ ಆದೇಶ ಹೊರಬಿದ್ದ ಕೂಡಲೇ ತಾಂತ್ರಿಕ ಹಾಗೂ ಆಡಳಿತಾತ್ಮಕ ಅನುಮೋದನೆ ಪಡೆದು ಜನವರಿಯಲ್ಲಿ ಕಾಮಗಾರಿ ಆರಂಭಿಸಬಹುದಿತ್ತು.

ಆದರೆ, ಸರ್ಕಾರ ಬಜೆಟ್‌ನಲ್ಲಿ 50 ಕೋಟಿ ರೂ. ಹಣ ಘೋಷಿಸಿದ್ದರೂ ಅಧಿಕಾರಿಗಳು ಆ ಬಗ್ಗೆ ಕಿಂಚಿತ್ತೂ ತಲೆಕೆಡಿಸಿಕೊಳ್ಳಲೇ ಇಲ್ಲ. ಸರ್ಕಾರದ ಆದೇಶ ಬರುವವರೆಗೂ ಡಿಪಿಆರ್‌ ತಯಾರಿ ಸಿಟ್ಟುಕೊಳ್ಳುವ ಗೋಜಿಗೇ ಹೋಗಲಿಲ್ಲ. ಸರ್ಕಾರದ ಆದೇಶ 30 ನವೆಂಬರ್‌ 2018ರಲ್ಲಿ ಹೊರಬಿದ್ದ ಬಳಿಕ ಯೋಜನಾ ವರದಿ ಸಿದ್ಧಪಡಿಸುವುದಕ್ಕೆ ಮುಂದಾಗಿ ದ್ದಾರೆ. ಈ ವರದಿ ಸಿದ್ಧಪಡಿಸುವುದಕ್ಕೂ ಎರಡು ಹಂತದಲ್ಲಿ ಟೆಂಡರ್‌ ನಡೆಸಿದ್ದಾರೆ. ಅದೆಲ್ಲಾ ನಡೆಸಿ ಅಂತಿಮವಾಗಿ ಸಮಗ್ರ ಯೋಜನಾ ವರದಿ ಜೂ.10ಕ್ಕೆ ಸಿದ್ಧಗೊಂಡು ಜಿಲ್ಲಾಧಿಕಾರಿ ಬಳಿಗೆ ಹೋಗಿದೆ.

ಇನ್ನು ಇದಕ್ಕೆ ತಾಂತ್ರಿಕ ಹಾಗೂ ಆಡಳಿತಾತ್ಮಕ ಅನುಮೋದನೆ ಪಡೆದುಕೊಂಡು ಕಾಮಗಾರಿ ಆರಂಭಿಸಬೇಕಾದರೆ ಆಗಸ್ಟ್‌ ಇಲ್ಲವೇ ಸೆಪ್ಟೆಂಬರ್‌ ತಿಂಗಳವರೆಗೆ ಕಾಯಲೇಬೇಕು. ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನದಿಂದ ನಗರಾಭಿವೃದ್ಧಿ ಎನ್ನುವುದು ಕೇವಲ ಮರೀಚಿಕೆಯಾಗಿ ಉಳಿಯುವಂತಾಗಿದೆ.

17 ಕೋಟಿ ಕಾಮಗಾರಿಗೆ ಬ್ರೇಕ್‌: ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸಿರುವ 50 ಕೋಟಿ ರೂ. ಕಾಮಗಾರಿಯಲ್ಲಿ 17 ಕೋಟಿ ರೂ. ಕಾಮಗಾರಿ ನಡೆಯುವ ಸಾಧ್ಯತೆಗಳು ಕಡಿಮೆ ಇದೆ. ಏಕೆಂದರೆ, ಈ ಹಣದಲ್ಲಿ 10 ಕೋಟಿ ರೂ.ಗಳನ್ನು ನಗರವ್ಯಾಪ್ತಿಯ ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆ ಅಭಿವೃದ್ಧಿಗೆ ನಿಗದಿಪಡಿಸಿದೆ.

ಹೆದ್ದಾರಿ ರಸ್ತೆಯನ್ನು ಲೋಕೋಪ ಯೋಗಿ ಇಲಾಖೆ ನಿರ್ಮಾಣ ಮಾಡುತ್ತಿದ್ದು, ನಗರಸಭೆಯಿಂದ ಆ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಮುಂದಾದಲ್ಲಿ ವ್ಯತ್ಯಾಸಗಳಾಗುವ ಸಾಧ್ಯತೆಗಳಾಗು ವುದರಿಂದ ಈ ಹಣವನ್ನು ಲೋಕೋಪಯೋಗಿ ಇಲಾಖೆಗೆ ನೀಡಿ ಆ ಇಲಾಖೆಯಿಂದಲೇ ಕಾಮಗಾರಿ ನಡೆಸಲು ನಗರಸಭೆ ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಸಿಮೆಂಟ್ ಕಾಂಕ್ರೀಟ್: ಇನ್ನು ಕುಂಟುತ್ತಾ ತೆವಳುತ್ತಾ ಸಾಗಿರುವ ನಗರದ ನೂರಡಿ ರಸ್ತೆ ಕಾಮಗಾರಿಗೆ 7.50 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಇದೂ ಸಹ ಸದ್ಯಕ್ಕೆ ಖರ್ಚು ಮಾಡಲಾಗುವುದಿಲ್ಲ. ಏಕೆಂದರೆ, ನೂರಡಿ ರಸ್ತೆಗೆ ಡಾಂಬರು ಹಾಕಿದ ಬಳಿಕ ಆರು ತಿಂಗಳ ಕಾಲ ವಾಹನಗಳ ಸಂಚಾರದಿಂದ ತಹಬದಿಗೆ ಬಂದ ಬಳಿಕ ಸಿಮೆಂಟ್ ಕಾಂಕ್ರೀಟ್ ಹಾಕಲು ನಿರ್ಧರಿಸಲಾಗಿದೆ. ಈಗ ನೂರಡಿ ರಸ್ತೆಯ ಒಂದು ಭಾಗದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಇನ್ನೊಂದು ಭಾಗದ ರಸ್ತೆ ಅಭಿವೃದ್ಧಿಗೆ ಅದೆಷ್ಟು ಕಾಲ ಹಿಡಿಯುವುದೋ ಗೊತ್ತಿಲ್ಲ. ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿಗಳೆಲ್ಲವೂ ಆಮೆಗತಿಯಲ್ಲಿ ಸಾಗುತ್ತಾ ನಗರದ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದೆ.

● ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.