ಚಿಕ್ಕರಸಿನಕೆರೆ ಸಹಕಾರ ಸಂಘದಲ್ಲಿ ಅವ್ಯವಹಾರ

ಸಿಇಒ ಅವ್ಯವಹಾರದ ವಿರುದ್ಧ ಸದಸ್ಯರು, ನಿರ್ದೇಶಕರ ಆಕ್ರೋಶ • ಪ್ರತಿಭಟನೆ, ದೂರುಗಳಿಗೂ ಕಿಮ್ಮತ್ತಿಲ್ಲ

Team Udayavani, May 7, 2019, 3:20 PM IST

mandya-tdy-2..

ಭಾರತೀನಗರ: ರೈತರಿಗೆ ಕೃಷಿ ಮಾಹಿತಿ, ಸಾಲ ಸೌಲಭ್ಯ ಒದಗಿಸಲು ರೂಪುಗೊಂಡಿದ್ದೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು. ರಾಜ್ಯಾದ್ಯಂತ ರೈತ ಕುಟುಂಬಗಳಿಗೆ ಅನುಕೂಲ ಕಲ್ಪಿಸಿದೆ. ಆದರೆ ಚಿಕ್ಕರಸಿನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರಿಜಮ್ಮ ಸರ್ವಾಧಿಕಾರಿ ಧೋರಣೆ, ಅವ್ಯವಹಾರಕ್ಕೆ ಕಡಿವಾಣ ಹಾಕಬೇಕೆಂದು ಸಂಘದ ನಿರ್ದೇಶಕರು, ಸದಸ್ಯರ ಆಗ್ರಹಿಸಿದ್ದಾರೆ.

ಸಹಕಾರ ಸಂಘದಲ್ಲಿ 13 ಮಂದಿ ನಿರ್ದೇಶಕರು ಆಯ್ಕೆಗೊಂಡಿದ್ದಾರೆ. ಆದರೆ ಚುನಾಯಿತ ಪ್ರತಿನಿಧಿಗಳಿಗಿಂತ ಸಿಇಒ ಗಿರಿಜಮ್ಮ ಅವರೇ ಸೂಪರ್‌ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ. ಇವರ ಅಕ್ರಮ, ಅವ್ಯವಹಾರ ಒಂದೆರಡಲ್ಲ. ಸಂಘಕ್ಕೆ ಬರುವ ಸರ್ಕಾರಿ ಯೋಜನೆಗಳ ಸೌಲಭ್ಯಗಳಲ್ಲಿ ಬಹುಪಾಲು ಈಕೆಯೇ ಗುಳುಂ ಮಾಡುತ್ತಿದ್ದಾರೆ. ಮೇಲಧಿಕಾರಿಗಳು ಜಾಣಕುರುಡುತನದಿಂದ ವರ್ತಿಸುತ್ತಿರುವುದು ಮತ್ತಷ್ಟು ಅನುಮಾನಕ್ಕೆಡೆ ಮಾಡಿಕೊಟ್ಟಿದೆ.

ಸಾಲ ಮನ್ನಾ: ಚಿಕ್ಕರಸಿನಕೆರೆ ಕೆಲ ರೈತರಿಂದ ಹೆಬ್ಬೆಟ್ಟು ಸಹಿ ಪಡೆದು ತಾನೇ ಸಾಲ ಪಡೆದುಕೊಂಡು ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸಿದ ಸಾಲಮನ್ನಾ ಸೌಲಭ್ಯವನ್ನೂ ಪಡೆದಿದ್ದಾರೆ. ಸಂಘದಲ್ಲಿ 195 ರೈತರು ಸಾಲ ಪಡೆದಿದ್ದು, ಅವರಲ್ಲಿ ಸುಮಾರು 67 ಮಂದಿಗೆ ಸಾಲ ಮನ್ನಾ ಸೌಲಭ್ಯ ದೊರೆತಿಲ್ಲ. ಆದರೆ, ಇವರು ಹೆಬ್ಬೆಟ್ಟು ಹಾಕಿಸಿಕೊಂಡು ಪಡೆದಿರುವ ಸಾಲಕ್ಕೆ ಮಾತ್ರ ಮನ್ನಾ ಸೌಲಭ್ಯ ದೊರೆತಿದೆ.

ವೇತನ ನೀಡಿಲ್ಲ: ಸಂಘದ ನೌಕರರಿಗೂ ಒಂದು ವರ್ಷದಿಂದ ವೇತನ ನೀಡಿಲ್ಲ. ಜೊತೆಗೆ ನೌಕರರ ಪಿಎಫ್ 3.80 ಲಕ್ಷ ರೂ. ದುರ್ಬಳಕೆ ಮಾಡಿಕೊಂಡಿದ್ದಾರೆಂದು ನೌಕರರು ಆರೋಸಿದ್ದಾರೆ. ಇದಲ್ಲದೆ ಪಡಿತರ ವಿತರಣೆ, ಸ್ತ್ರೀಶಕ್ತಿ ಸಂಘಗಳ ಹಣ ದುರುಪಯೋಗ ಮಾಡಿಕೊಂಡಿರುವ ಸಿಇಒ ಗಿರಿಜಮ್ಮ ದಬ್ಟಾಳಿಕೆ ಖಂಡಿಸಿ ಸಂಘದ ಸದಸ್ಯರು, ನಿರ್ದೇಶಕರು ಆಡಳಿತ ಮಂಡಳಿಯ ವಾರ್ಷಿಕ ಸಭೆಯನ್ನೂ ರದ್ದು ಪಡಿಸಿ ಅನೇಕ ಬಾರಿ ಪ್ರತಿಭಟನೆ ನಡೆಸಿದ್ದರು. ಇದಕ್ಕೂ ಕ್ಯಾರೇ ಎನ್ನದ ಗಿರಿಜಮ್ಮನ ಡೋಂಟ್ ಕೇರ್‌ ವರ್ತನೆಯಿಂದ ಬೇಸತ್ತ ಗ್ರಾಮಸ್ಥರು ಅವರ ಅನ್ಯಾಯ, ಅಕ್ರಮಗಳನ್ನು ಕರಪತ್ರದಲ್ಲಿ ಮುದ್ರಿಸಿ ಇಡೀ ಗ್ರಾಮಕ್ಕೆ ಹಂಚಿಸಿದ್ದರು.

ಚಿಕ್ಕರಸಿನಕೆರೆ, ಗುರುದೇವರಹಳ್ಳಿ ಮತ್ತು ಕೆಂಚೇಗೌಡನದೊಡ್ಡಿ ವ್ಯಾಪ್ತಿಗೊಳಪಡುವ ಈ ಕೃಷಿ ಪತ್ತಿನ ಸಹಕಾರ ಸಂಘ ದಿವಾಳಿಯಾಗುತ್ತದೆಂಬ ಆತಂಕ ಗ್ರಾಮಸ್ಥದ್ದು. ಸಿಇಒ ಗಿರಿಜಮ್ಮ ನನಗೆ ಮೇಲಧಿಕಾರಿಗಳು, ರಾಜಕಾರಣಿಗಳು ನನ್ನ ಸಂಪರ್ಕದಲ್ಲಿದ್ದಾರೆ. ನನ್ನನ್ನು ಯಾರೂ ಏನೂ ಮಾಡಲಾಗಲ್ಲ ಎಂದು ಬೆದರಿಸುವುದಲ್ಲದೆ, ಹಿಟ್ಲರ್‌ ಆಡಳಿತ ನಡೆಸುತ್ತಿದ್ದಾರೆ ಎಂದು ಸಂಘದ ಸದಸ್ಯರು, ನಿರ್ದೇಶಕರು ಆರೋಪಿಸಿದ್ದಾರೆ.

ಕಳೆದ 10 ವರ್ಷಗಳಿಂದಲೂ ಸಹಕಾರ ಸಂಘದಲ್ಲಿ ಹಣ ದುರುಪಯೋಗವಾಗುತ್ತಲೇ ಇದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಸಂಘದ ಆಡಳಿತ ವ್ಯವಸ್ಥಾಪಕರಾಗಲಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕರಾಗಲಿ ಯಾರೂ ಸಿಇಒ ಗಿರಿಜಮ್ಮ ಅವರನ್ನು ಪ್ರಶ್ನಿಸುತ್ತಿಲ್ಲ. ಮೂರು ಗ್ರಾಮಗಳಲ್ಲಿ ಗಿರಿಜಮ್ಮ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಗಿರಿಜಮ್ಮ ಮಾಡಿರುವ ಅಕ್ರಮ ಅವ್ಯವಹಾರಗಳ ಕುರಿತು ತನಿಖೆಯೂ ನಡೆಯುತ್ತಿದೆ. ಆದರೂ ಪ್ರಭಾವಿ ರಾಜಕಾರಣಿಗಳು ಮತ್ತು ಮೇಲಧಿಕಾರಿಗಳಿಂದ ಪ್ರಭಾವ ಬೀರಿ ಅಕ್ರಮಗಳನ್ನು ಮುಚ್ಚಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ.

● ಅಣ್ಣೂರು ಸತೀಶ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.