ಸಿಎಸ್ಪಿ ವಿರುದ್ಧ ಅಗೌರವ ನಡೆ ನಿಖೀಲ್ಗೆ ಹಿನ್ನಡೆಯಾಯ್ತೆ?

ಮೇಲುಕೋಟೆ ಕ್ಷೇತ್ರದಲ್ಲಿ ಅಚ್ಚರಿ ತಂದ ಸುಮಲತಾ ಲೀಡ್‌ - ಕುಟುಂಬ ರಾಜಕಾರಣದ ವಿರುದ್ಧ ರೈತಸಂಘ ಒಗ್ಗಟ್ಟು

Team Udayavani, May 26, 2019, 2:03 PM IST

mandya-tdy-1…

ಪಾಂಡವಪುರ: ಲೋಕಸಭಾ ಚುನಾವಣೆ ಸಮಯದಲ್ಲಿ ಜೆಡಿಎಸ್‌ನ ನಿಷ್ಠಾವಂತ ನಾಯಕ ಸಿ.ಎಸ್‌.ಪುಟ್ಟರಾಜು ಅವರಿಗೆ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ ತೋರಿದ್ದರೆನ್ನಲಾದ ಅಗೌರವ ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಮುನ್ನಡೆಗೆ ಕಾರಣವಾಯಿತೇ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ.

ನಿಖೀಲ್ ಕುಮಾರಸ್ವಾಮಿ ಅವರು ರಾಜಕೀಯ ಸಭ್ಯತೆ ಮರೆತು ಹಿರಿಯ ನಾಯಕರು, ಸಚಿವರು ಎಂಬ ಗೌರವ-ಮರ್ಯಾದೆ ಇಲ್ಲದೆ ನಡೆದುಕೊಂಡಿದ್ದು ಸಚಿವ ಸಿ.ಎಸ್‌.ಪುಟ್ಟರಾಜು ಬೆಂಬಲಿಗರ ಅಸಮಾಧಾನಕ್ಕೆ ಕಾರಣವಾಯಿತು ಎಂದು ತಿಳಿದುಬಂದಿದೆ. ಇದೇ ಕಾರಣಕ್ಕೆ ಬೆಂಬಲಿಗರು ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಿಲ್ಲ. ಸಿ.ಎಸ್‌.ಪುಟ್ಟರಾಜು ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ ಸಮಯದಲ್ಲಿ ಅವರನ್ನು ಗೆಲ್ಲಿಸಲು ತೋರಿದ ಆಸಕ್ತಿ ಮತ್ತು ಶ್ರಮವನ್ನು ನಿಖೀಲ್ ವಿಚಾರದಲ್ಲಿ ತೋರ್ಪಡಿಸಲೇ ಇಲ್ಲ. ಇದು ಪಕ್ಷೇತರ ಅಭ್ಯರ್ಥಿ ಮುನ್ನಡೆಗೆ ಕಾರಣವಾಯಿತು ಎಂದು ವಿಶ್ಲೇಷಿಸಲಾಗುತ್ತಿದೆ.

ನಿರೀಕ್ಷೆಯಿತ್ತು: ಜೆಡಿಎಸ್‌ ಪಕ್ಷದೊಳಗೆ ಅತ್ಯಂತ ನಿಷ್ಠ ನಾಯಕರೆಂದು ಗುರುತಿಸಿಕೊಂಡಿರುವ ಸಿ.ಎಸ್‌.ಪುಟ್ಟರಾಜು 2014ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದು ಬಂದು ಮಂತ್ರಿಯಾದರು. ಪಾಂಡವಪುರಕ್ಕೆ ಮೊದಲ ಬಾರಿಗೆ ಸಚಿವ ಸ್ಥಾನ ದೊರಕಿಸಿದ ಕೀರ್ತಿ ಸಿ.ಎಸ್‌.ಪುಟ್ಟರಾಜು ಅವರಿಗೆ ಸಲ್ಲುತ್ತದೆ. ಅಲ್ಲದೆ, ಆ ಗೌರವಕ್ಕೆ ಕಾರಣರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅಪಾರ ಗೌರವವಿಟ್ಟುಕೊಂಡಿದ್ದರು. ಇದೇ ಕಾರಣಕ್ಕೆ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮಟ್ಟದ ಲೀಡ್‌ ಕೊಡಿಸುವರೆಂಬ ಬಗ್ಗೆ ಬಹಳಷ್ಟು ನಿರೀಕ್ಷೆ ಹೊಂದಲಾಗಿತ್ತು.

ಆದರೆ, ಚುನಾವಣಾ ಪ್ರಚಾರ ಸಮಯದಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ ನಡವಳಿಕೆ ಸಹಜವಾಗಿಯೇ ಎಲ್ಲರಲ್ಲೂ ಅಸಮಾಧಾನ ಮೂಡಿಸಿತ್ತು ಎನ್ನಲಾಗಿದೆ. ಜೆಡಿಎಸ್‌ನ ಸ್ಥಳೀಯ ಮುಖಂಡರು ಕಾರ್ಯಕರ್ತರು ತಾವು ಪ್ರೀತಿಸುವ ನಾಯಕರ ಬಗ್ಗೆ ಗೌರವ-ಮರ್ಯಾದೆ ಇಲ್ಲದೆ ಮಾತನಾಡಿದಾಗ ಅವರೆಲ್ಲರೂ ಚುನಾವಣೆ ಬಗ್ಗೆ ಆಸಕ್ತಿಯನ್ನೇ ಕಳೆದುಕೊಂಡರು. ಅಭ್ಯರ್ಥಿ ಗೆಲುವಿನ ಬಗ್ಗೆಯೂ ನಿರ್ಲಕ್ಷ್ಯ, ನಿರಾಸಕ್ತಿ ವಹಿಸಿದರು. ಇದು ಕ್ಷೇತ್ರದಲ್ಲಿ ಲೀಡ್‌ ಸಿಗದಿರುವುದಕ್ಕೆ ಕಾರಣವಾಯಿತು.

ಕಳೆದ ಮೇಲುಕೋಟೆ ವಿಧಾನಸಭಾ ಚುನಾವಣಾ ಸಮಯದಲ್ಲಿ ರೈತಸಂಘದ ವೋಟುಗಳು ಸಾಕಷ್ಟು ಸಿ.ಎಸ್‌.ಪುಟ್ಟರಾಜು ಅವರ ಕಡೆಗೂ ಹರಿದುಬಂದಿದ್ದವು. ಆದರೆ, ಲೋಕಸಭೆಗೆ ಜೆಡಿಎಸ್‌ ಅಭ್ಯರ್ಥಿ ನಿಖೀಲ್ಕುಮಾರಸ್ವಾಮಿ ಅಭ್ಯರ್ಥಿಯಾಗುತ್ತಿದ್ದಂತೆ ರೈತಸಂಘದ ಕಾರ್ಯಕರ್ತರು ಸುಮಲತಾ ಬೆಂಬಲಕ್ಕೆ ನಿಂತರು. ದೇವೇಗೌಡರ ಕುಟುಂಬ ರಾಜಕಾರಣ ಬೆಳೆಸುವುದಕ್ಕೆ ಮನಸ್ಸು ಕೊಡಲಿಲ್ಲ. ಇದು ನಿಖೀಲ್ಗೆ ಹಿನ್ನಡೆಯಾಗುವುದಕ್ಕೆ ಮತ್ತೂಂದು ಕಾರಣ.

ಕಾರ್ಯಕರ್ತರಿಗೆ ಬೇಸರ ತರಿಸಿತ್ತು: ರಾಜಕೀಯ ಸಭ್ಯತೆ ಮರೆತು ವರ್ತಿಸುತ್ತಿರುವ ನಿಖೀಲ್ಕುಮಾರಸ್ವಾಮಿಗೆ ತಂದೆ ಹಾಗೂ ಸಿಎಂ ಕುಮಾರಸ್ವಾಮಿಯೂ ಹೇಳಿಕೊಡಲಿಲ್ಲ. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಚುನಾವಣೆಗೂ ಮುನ್ನ ಇಡೀ ಕ್ಷೇತ್ರದಲ್ಲಿ ಸಂಚರಿಸುವ ಮೂಲಕ ಎಲ್ಲಾ ಮುಖಂಡರು, ಕಾರ್ಯಕರ್ತರ ವಿಶ್ವಾಸ ಗಳಿಸಿಕೊಂಡಿದ್ದರು. ರಾಜಕೀಯ ತಿಳಿವಳಿಕೆ ಮೂಡಿಸಿಕೊಂಡು ಎಲ್ಲರನ್ನೂ ಒಗ್ಗಟ್ಟಾಗಿ ಮುನ್ನಡೆಸಿದ ಪರಿಣಾಮ ಅವರು ಲೋಕಸಭೆ ಪ್ರವೇಶಿಸುವುದಕ್ಕೆ ಕಾರಣವಾಯಿತು. ಅಂತಹದೊಂದು ರಾಜಕೀಯ ತಿಳಿವಳಿಕೆಯೇ ಇಲ್ಲದ ನಿಖೀಲ್ ಕುಮಾರಸ್ವಾಮಿ, ಜೆಡಿಎಸ್‌ ನಾಯಕರನ್ನು ಒಗ್ಗಟ್ಟಾಗಿ ಕೊಂಡೊಯ್ಯುವ ಕೆಲಸ ಮಾಡಲಿಲ್ಲ. ಚುನಾವಣಾ ಜವಾಬ್ದಾರಿಯನ್ನೆಲ್ಲಾ ತಂದೆ ಸಿಎಂ ಕುಮಾರಸ್ವಾಮಿ ಹಾಗೂ ಜಿಲ್ಲಾ ಜೆಡಿಎಸ್‌ ನಾಯಕರಿಗೆ ಬಿಟ್ಟು ಪ್ರಚಾರಕ್ಕಷ್ಟೇ ಸೀಮಿತರಾಗಿದ್ದರು. ಮುಖಂಡರು, ಕಾರ್ಯಕರ್ತರೊಂದಿಗೆ ಬೆರೆಯುವುದಕ್ಕೆ ಮುಂದಾಗಲಿಲ್ಲ. ಇವೂ ಜೆಡಿಎಸ್‌ನ ಕೆಳಹಂತದ ಮುಖಂಡರು, ಕಾರ್ಯಕರ್ತರಿಗೆ ಬೇಸರ ತರಿಸಿತ್ತು. ಇವೆಲ್ಲವೂ ನಿಖೀಲ್ಗೆ ಸೋಲನ್ನು ದಯಪಾಲಿಸಿದವು.

ಸಚಿವ ಸಿ.ಎಸ್‌.ಪುಟ್ಟರಾಜು ಕ್ಷೇತ್ರ ಮೇಲುಕೋಟೆ, ಶಾಸಕ ಕೆ.ಸುರೇಶ್‌ಗೌಡರ ಕ್ಷೇತ್ರ ನಾಗಮಂಗಲ ಇವೆರಡನ್ನೂ ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಲ್ಲೂ ಪಕ್ಷೇತರ ಅಭ್ಯರ್ಥಿ ಸುಮಲತಾ ಲೀಡ್‌ ಸಾಧಿಸುವರೆಂಬ ಮಾಹಿತಿ ಚುನಾವಣಾ ಸಮಯದಲ್ಲೇ ಗೊತ್ತಾಗಿತ್ತು. ಗುಪ್ತಚರ ಇಲಾಖೆ ವರದಿಯೂ ಇದನ್ನೇ ಹೇಳಿತ್ತು. ಆದರೆ, ನಾಗಮಂಗಲದಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ 7442 ಮತಗಳ ಲೀಡ್‌ ಪಡೆಯುವುದಕ್ಕಷ್ಟೇ ಸಮರ್ಥರಾದರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸುಮಲತಾ ಜೆಡಿಎಸ್‌ ಅಭ್ಯರ್ಥಿಗಿಂತಲೂ 15886 ಹೆಚ್ಚು ಮತ ಗಳಿಸುವಲ್ಲಿ ಯಶಸ್ವಿಯಾದರು. ಸಚಿವ ಸಿ.ಎಸ್‌.ಪುಟ್ಟರಾಜು ಅವರಿಗೆ ಕ್ಷೇತ್ರದ ಮೇಲೆ ಈಗಲೂ ಸಂಪೂರ್ಣ ಹಿಡಿತವಿದೆ. ಮೇಲುಕೋಟೆ ಕ್ಷೇತ್ರದಲ್ಲಿ ಜೆಡಿಎಸ್‌ಗೆ ದೊಡ್ಡ ಶಕ್ತಿಯಾಗಿದ್ದಾರೆ. ಆ ಶಕ್ತಿಯನ್ನು ಸಮರ್ಪಕವಾಗಿ ಗೆಲುವಿನ ಅಸ್ತ್ರವಾಗಿ ಬಳಸಿಕೊಳ್ಳುವಲ್ಲಿ ನಿಖೀಲ್ ಎಡವಿದಂತೆ ಕಂಡುಬರುತ್ತಿದ್ದಾರೆ.
● ಕುಮಾರಸ್ವಾಮಿ

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.