ನಿರಾಶ್ರಿತರಿಗೆ ಆಹಾರ ವಿತರಣೆ
Team Udayavani, Apr 1, 2020, 3:17 PM IST
ಮದ್ದೂರು: ಕೋವಿಡ್ 19 ಸೋಂಕು ನಿಯಂತ್ರಣಕ್ಕೆಭಾರತವನ್ನು ಲಾಕ್ಡೌನ್ ಮಾಡಲಾಗಿದ್ದು, ಅದು ಮುಗಿಯುವವರೆಗೆ ನಿರಾಶ್ರಿತರು ಹಾಗೂ ದಿನಗೂಲಿ ನೌಕರರಿಗೆ ಪ್ರತಿನಿತ್ಯ ಆಹಾರ ವಿತರಣೆ ಜವಾಬ್ದಾರಿಯನ್ನು ಶಾಸಕ ಡಿ.ಸಿ.ತಮ್ಮಣ್ಣ ವಹಿಸಿಕೊಂಡಿದ್ದಾರೆ.
ನಗರದ ಶಾದಿ ಮಹಲ್ನಲ್ಲಿ ಆಹಾರ ತಯಾರಿ ಮಾಡಲು ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡಿದ್ದು, ತಯಾರಿಕಾ ಸಮಯದಲ್ಲೂ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ. ಪಟ್ಟಣ ಪುರಸಭೆಯ 23 ವಾರ್ಡ್, 32 ಗ್ರಾಪಂ ವ್ಯಾಪ್ತಿಯಲ್ಲಿ ಬರುವ ನಿರಾಶ್ರಿತರಿಗೆ ಪ್ರತಿನಿತ್ಯ ಆಹಾರ ವಿತರಣೆಗೆ ಕ್ರಮ ವಹಿಸಲಾಗಿದೆ.
ಇನ್ನು 14 ದಿನ ಪ್ರತಿನಿತ್ಯ ಎರಡು ಬಾರಿ ಆಹಾರ ವಿತರಣೆ ಮಾಡಲಾಗುವುದು. ಗ್ರಾಪಂಗಳಲ್ಲಿ ಅಗತ್ಯ ದಿನಬಳಕೆ ವಸ್ತುಗಳನ್ನು ಜಿಲ್ಲಾಡಳಿತದೊಂದಿಗೆ ಚರ್ಚಿಸಿ ವಿತರಣೆ ಮಾಡುವುದಾಗಿ ತಹಶೀಲ್ದಾರ್ ವಿಜಯ ಕುಮಾರ್ ಹೇಳಿದರು.
ಕಾರ್ಯಕ್ರಮದಲ್ಲಿ ತಾಪಂ ಇಒ ಮುನಿರಾಜು, ತಾಲೂಕು ವೈದ್ಯಾಧಿಕಾರಿ ಡಾ.ಆಶಾಲತಾ, ಟಿಎಪಿಸಿಎಂಎಸ್ ಅಧ್ಯಕ್ಷ ಮಹದೇವ, ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕತಿಮ್ಮಯ್ಯ, ಪುರಸಭಾ ಸದಸ್ಯರಾದ ಪ್ರವೀಣ್, ಪ್ರಸನ್ನ, ಆದಿಲ್ ಖಾಲಿ ಖಾನ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…